ಸಿಎಂ ಪಿಣರಾಯಿ ವಿಜಯನ್ ಬೆಂಗಾವಲು ವಾಹನ ಸರಣಿ ಅಪಘಾತ 
ದೇಶ

ಸ್ಕೂಟಿ ಚಾಲಕಿ ಎಡವಟ್ಟು: ಕೇರಳ ಸಿಎಂ Pinarayi Vijayan ಬೆಂಗಾವಲು ವಾಹನಗಳು ಸರಣಿ ಅಪಘಾತ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಅವರ ಎಲ್ಲ ಭದ್ರತಾ ಸಿಬ್ಬಂದಿಗಳೂ ಅಪಾಯದಿಂದ ಪಾರಾಗಿದ್ದು, ಬೆಂಗಾವಲು ಕಾರುಗಳು ಮಾತ್ರ ಅಲ್ಪ ಪ್ರಮಾಣದಲ್ಲಿ ಹಾನಿಗೀಡಾಗಿವೆ ಎಂದು ತಿಳಿದುಬಂದಿದೆ.

ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರಯಾಣಿಸುತ್ತಿದ್ದ ವಾಹನ ಸೇರಿದಂತೆ ಅವರ ಬೆಂಗಾವಲು ವಾಹನಗಳು ಸರಣಿ ಅಪಘಾತಕ್ಕೀಡಾದ ಘಟನೆ ನಡೆದಿದೆ.

ಸೋಮವಾರ(ಅ.28) ಸಂಜೆ 6.30ರ ಸುಮಾರಿಗೆ ಸಂಭವಿಸಿದ್ದು, ಘಟನೆಯಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಅವರ ಎಲ್ಲ ಭದ್ರತಾ ಸಿಬ್ಬಂದಿಗಳೂ ಅಪಾಯದಿಂದ ಪಾರಾಗಿದ್ದಾರೆ. ಆದರೆ ಅವರ ಬೆಂಗಾವಲು ಕಾರುಗಳು ಮಾತ್ರ ಅಲ್ಪ ಪ್ರಮಾಣದಲ್ಲಿ ಹಾನಿಗೀಡಾಗಿವೆ ಎಂದು ತಿಳಿದುಬಂದಿದೆ.

ಸ್ಕೂಟಿ ಚಾಲಕಿ ಎಡವಟ್ಟು

ಮೂಲಗಳ ಪ್ರಕಾರ ಸಿಎಂ ಪಿಣರಾಯಿ ವಿಜಯನ್ ಕೊಟ್ಟಾಯಂಗೆ ಭೇಟಿ ನೀಡಿ ವಾಪಸ್ಸಾಗುವ ವೇಳೆ ತಿರುವನಂತಪುರಂ ಬಳಿ ಮಹಿಳೆಯೊಬ್ಬರು ದ್ವಿಚಕ್ರ ವಾಹನದಲ್ಲಿ ಏಕಾಏಕಿ ಬಲಕ್ಕೆ ತಿರುವು ತೆಗೆದುಕೊಂಡಿದ್ದಾರೆ. ಅದೇ ಸಂದರ್ಭದಲ್ಲಿ ಅಲ್ಲಿಗೆ ಬಂದ ಪಿಣರಾಯಿ ವಿಜಯನ್ ಬೆಂಗಾವಲು ವಾಹನಗಳು ಪೈಕಿ ಮುಂಭಾಗದಲ್ಲಿದ್ದ ವಾಹನ ಆಕೆಗೆ ಢಿಕ್ಕಿ ತಪ್ಪಿಸಿಲು ಬ್ರೇಕ್ ಹಾಕಿದೆ. ಈ ವೇಳೆ ಹಿಂದಿನಿಂದ ಬಂದ ವಾಹನಗಳು ಒಂದರ ಹಿಂದೆ ಒಂದರಂತೆ ಪರಸ್ಪರ ಢಿಕ್ಕಿಯಾಗಿವೆ. ಎಲ್ಲ ವಾಹನಗಳೂ ಬ್ರೇಕ್ ಹಾಕಿದ್ದರಿಂದ ಸಂಭಾವ್ಯ ದೊಡ್ಡ ಅನಾಹುತ ತಪ್ಪಿದೆ ಎಂದು ಹೇಳಲಾಗಿದೆ.

ಈ ಘಟನೆ ಬಳಿಕ ಮುಖ್ಯಮಂತ್ರಿಗಳನ್ನು ಬೇರೆ ವಾಹನದ ಮೂಲಕ ಕಳುಹಿಸಿಕೊಡಲಾಯಿತು, ಘಟನೆಯ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ವಾರ್ ಗೆ ಹೌತಿಗಳು ಸಜ್ಜು! ಮತ್ತೊಂದು ಜಲಸಂಧಿ ಬಂದ್? ಜಾಗತಿಕ ವ್ಯಾಪಾರಕ್ಕೆ ಮತ್ತಷ್ಟು ಹೊಡೆತ!

ಕೃಷ್ಣಾ ಮೇಲ್ದಂಡೆ ಯೋಜನೆಗೆ 5 ಸಾವಿರ ಕೋಟಿ ಅನುದಾನ: ಅಭಿವೃದ್ಧಿಗೆ ಹಣವಿಲ್ಲವೆಂಬ BJP ಆರೋಪ ಸತ್ಯಕ್ಕೆ ದೂರ; ಸಿಎಂ ಸಿದ್ದರಾಮಯ್ಯ

ಅಭಿಷೇಕ್ ಬಗ್ಗೆ ಭಾರತೀಯ ಆಟಗಾರರಿಗೆ 'ಅಸೂಯೆ ಇದೆಯಾ? ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ ಸಂಜು ಸ್ಯಾಮ್ಸನ್

ಶ್ರೀಗಳು ಎಲ್ಲೆಲ್ಲೋ ದಾರಿ ತಪ್ಪುತ್ತಿದ್ದಾರೆ: ವಿವಾದದ ಕಿಡಿ ಹೊತ್ತಿಸಿದ ರಮೇಶ್ ಬಂಡಿಸಿದ್ದೇಗೌಡ; ಕುಮಾರಸ್ವಾಮಿ ಹೇಳಿದ್ದೇನು?

ಅಂಬೇಡ್ಕರ್‌ ತತ್ವಕ್ಕೆ ತಿಲಾಂಜಲಿ: ಈಗ ಮಗ, ಇನ್ನಾರು ತಿಂಗಳು ಬಿಟ್ಟು ಮೊಮ್ಮಗನನ್ನು ಬೆಳೆಸಿ ಅಂತಾರೆ; ಸಿದ್ದರಾಮಯ್ಯ ಹೇಳಿಕೆಗೆ ಅಶೋಕ್ ವ್ಯಂಗ್ಯ

SCROLL FOR NEXT