ಸಿಎಂ ಪಿಣರಾಯಿ ವಿಜಯನ್ ಬೆಂಗಾವಲು ವಾಹನ ಸರಣಿ ಅಪಘಾತ 
ದೇಶ

ಸ್ಕೂಟಿ ಚಾಲಕಿ ಎಡವಟ್ಟು: ಕೇರಳ ಸಿಎಂ Pinarayi Vijayan ಬೆಂಗಾವಲು ವಾಹನಗಳು ಸರಣಿ ಅಪಘಾತ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಅವರ ಎಲ್ಲ ಭದ್ರತಾ ಸಿಬ್ಬಂದಿಗಳೂ ಅಪಾಯದಿಂದ ಪಾರಾಗಿದ್ದು, ಬೆಂಗಾವಲು ಕಾರುಗಳು ಮಾತ್ರ ಅಲ್ಪ ಪ್ರಮಾಣದಲ್ಲಿ ಹಾನಿಗೀಡಾಗಿವೆ ಎಂದು ತಿಳಿದುಬಂದಿದೆ.

ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರಯಾಣಿಸುತ್ತಿದ್ದ ವಾಹನ ಸೇರಿದಂತೆ ಅವರ ಬೆಂಗಾವಲು ವಾಹನಗಳು ಸರಣಿ ಅಪಘಾತಕ್ಕೀಡಾದ ಘಟನೆ ನಡೆದಿದೆ.

ಸೋಮವಾರ(ಅ.28) ಸಂಜೆ 6.30ರ ಸುಮಾರಿಗೆ ಸಂಭವಿಸಿದ್ದು, ಘಟನೆಯಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಅವರ ಎಲ್ಲ ಭದ್ರತಾ ಸಿಬ್ಬಂದಿಗಳೂ ಅಪಾಯದಿಂದ ಪಾರಾಗಿದ್ದಾರೆ. ಆದರೆ ಅವರ ಬೆಂಗಾವಲು ಕಾರುಗಳು ಮಾತ್ರ ಅಲ್ಪ ಪ್ರಮಾಣದಲ್ಲಿ ಹಾನಿಗೀಡಾಗಿವೆ ಎಂದು ತಿಳಿದುಬಂದಿದೆ.

ಸ್ಕೂಟಿ ಚಾಲಕಿ ಎಡವಟ್ಟು

ಮೂಲಗಳ ಪ್ರಕಾರ ಸಿಎಂ ಪಿಣರಾಯಿ ವಿಜಯನ್ ಕೊಟ್ಟಾಯಂಗೆ ಭೇಟಿ ನೀಡಿ ವಾಪಸ್ಸಾಗುವ ವೇಳೆ ತಿರುವನಂತಪುರಂ ಬಳಿ ಮಹಿಳೆಯೊಬ್ಬರು ದ್ವಿಚಕ್ರ ವಾಹನದಲ್ಲಿ ಏಕಾಏಕಿ ಬಲಕ್ಕೆ ತಿರುವು ತೆಗೆದುಕೊಂಡಿದ್ದಾರೆ. ಅದೇ ಸಂದರ್ಭದಲ್ಲಿ ಅಲ್ಲಿಗೆ ಬಂದ ಪಿಣರಾಯಿ ವಿಜಯನ್ ಬೆಂಗಾವಲು ವಾಹನಗಳು ಪೈಕಿ ಮುಂಭಾಗದಲ್ಲಿದ್ದ ವಾಹನ ಆಕೆಗೆ ಢಿಕ್ಕಿ ತಪ್ಪಿಸಿಲು ಬ್ರೇಕ್ ಹಾಕಿದೆ. ಈ ವೇಳೆ ಹಿಂದಿನಿಂದ ಬಂದ ವಾಹನಗಳು ಒಂದರ ಹಿಂದೆ ಒಂದರಂತೆ ಪರಸ್ಪರ ಢಿಕ್ಕಿಯಾಗಿವೆ. ಎಲ್ಲ ವಾಹನಗಳೂ ಬ್ರೇಕ್ ಹಾಕಿದ್ದರಿಂದ ಸಂಭಾವ್ಯ ದೊಡ್ಡ ಅನಾಹುತ ತಪ್ಪಿದೆ ಎಂದು ಹೇಳಲಾಗಿದೆ.

ಈ ಘಟನೆ ಬಳಿಕ ಮುಖ್ಯಮಂತ್ರಿಗಳನ್ನು ಬೇರೆ ವಾಹನದ ಮೂಲಕ ಕಳುಹಿಸಿಕೊಡಲಾಯಿತು, ಘಟನೆಯ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT