ಲಾರೆನ್ಸ್ ಬಿಷ್ಣೋಯ್ 
ದೇಶ

ಆಲ್ ಇಂಡಿಯಾ ಅನಿಮಲ್ ಪ್ರೊಟೆಕ್ಷನ್ ಬಿಷ್ಣೋಯ್ ಯುವ ಸಮಾಜದ ಮುಖ್ಯಸ್ಥನಾಗಿ ಲಾರೆನ್ಸ್ ಬಿಷ್ಣೋಯ್ ಆಯ್ಕೆ!

ಅಕ್ಟೋಬರ್ 29 ರಂದು ಸಂಜೆ ಅಬೋಹರ್‌ನಲ್ಲಿ ನಡೆದ ಬಿಷ್ಣೋಯ್ ಸಮಾಜದ ಸಭೆಯಲ್ಲಿ ಬಿಷ್ಣೋಯ್ ನನ್ನು ಆಯ್ಕೆ ಮಾಡಲಾಯಿತು.

ಚಂಡೀಗಡ: ಸದ್ಯ ಅಹಮದಾಬಾದ್‌ನ ಸಬರಮತಿ ಸೆಂಟ್ರಲ್ ಜೈಲಿನಲ್ಲಿರುವ 33 ವರ್ಷದ ಲಾರೆನ್ಸ್ ಬಿಷ್ಣೋಯ್ ನನ್ನು ಆಲ್ ಇಂಡಿಯಾ ಅನಿಮಲ್ ಪ್ರೊಟೆಕ್ಷನ್ ಬಿಷ್ಣೋಯ್ ಸೊಸೈಟಿಯ ಯುವ ವಿಭಾಗದ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾನೆ.

ಪಂಜಾಬ್, ಹರಿಯಾಣ, ರಾಜಸ್ಥಾನ, ದೆಹಲಿ ಮತ್ತು ಮುಂಬೈನಲ್ಲಿ ಮೂರು ಡಜನ್‌ಗಿಂತಲೂ ಹೆಚ್ಚು ಪ್ರಕರಣಗಳಲ್ಲಿ ಆತ ಆರೋಪಿಯಾಗಿದ್ದಾನೆ, ಭಾರತ ಸರ್ಕಾರದ ಆದೇಶದ ಮೇರೆಗೆ ಆತನಿಗೆ ಗುತ್ತಿಗೆ ನೀಡಿ ಅಪರಾಧ ನಡೆಸಲಾಗತ್ತಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪಿಸಿದ್ದಾರೆ.

ಅಕ್ಟೋಬರ್ 29 ರಂದು ಸಂಜೆ ಅಬೋಹರ್‌ನಲ್ಲಿ ನಡೆದ ಬಿಷ್ಣೋಯ್ ಸಮಾಜದ ಸಭೆಯಲ್ಲಿ ಬಿಷ್ಣೋಯ್ ನನ್ನು ಆಯ್ಕೆ ಮಾಡಲಾಯಿತು. ಬಿಷ್ಣೋಯ್ ಸಮಾಜದ ಮುಖ್ಯಸ್ಥ ಇಂದರ್‌ಪಾಲ್ ಬಿಷ್ಣೋಯ್ ನೀಡಿದ ನೇಮಕಾತಿ ಪ್ರಮಾಣಪತ್ರದ ಪ್ರಕಾರ, ಬಿಷ್ಣೋಯ್ ಸಮುದಾಯದ ತತ್ವಗಳ ಪ್ರಕಾರ ಪ್ರಾಣಿಗಳ ರಕ್ಷಣೆಯನ್ನು ಮಾಡುವ ಕಾರ್ಯವನ್ನು ವಹಿಸಲಾಗಿದೆ. ಪಂಜಾಬ್‌ನ ಅಬೋಹರ್‌ನಲ್ಲಿರುವ ದುತ್ರನ್‌ವಾಲಿ ಗ್ರಾಮದ ರವೀಂದರ್ ಪುತ್ರ ಲಾರೆನ್ಸ್ ಬಿಷ್ಣೋಯ್ ನನ್ನು ಆಲ್ ಇಂಡಿಯಾ ಅನಿಮಲ್ ಪ್ರೊಟೆಕ್ಷನ್ ಬಿಷ್ಣೋಯ್ ಸಮಾಜದ ಯುವ ವಿಭಾಗದ ರಾಷ್ಟ್ರೀಯ ಅಧ್ಯಕ್ಷರಾಗಿ ಸರ್ವಾನುಮತದಿಂದ ನೇಮಿಸಲಾಗಿದೆ ಎಂದು ಪ್ರಮಾಣೀಕರಿಸಲಾಗಿದೆ.

ಪ್ರಾಣಿಗಳು, ಪರಿಸರವನ್ನು ರಕ್ಷಿಸುವುದು ಮತ್ತು ಕೆಲಸವನ್ನು ಮುಂದುವರಿಸಬೇಕಾಗಿದೆ. 1730 ರಲ್ಲಿ ರಾಜಸ್ಥಾನದಲ್ಲಿ ಖೇಜರಿ ಮರಗಳನ್ನು ಉಳಿಸಲು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಅಮೃತಾ ದೇವಿ ಬಿಷ್ಣೋಯಿ ಮತ್ತು 363 ಬಿಷ್ಣೋಯಿಗಳ ಪರಂಪರೆಯನ್ನು ರಕ್ಷಿಸುವುದು ನಿಮ್ಮ ಜವಾಬ್ದಾರಿಯಾಗಿದೆ ಎಂದ ಪ್ರಮಾಣಪತ್ರದಲ್ಲಿ ಉಲ್ಲೇಖಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT