ಲಾರೆನ್ಸ್ ಬಿಷ್ಣೋಯ್ 
ದೇಶ

ಆಲ್ ಇಂಡಿಯಾ ಅನಿಮಲ್ ಪ್ರೊಟೆಕ್ಷನ್ ಬಿಷ್ಣೋಯ್ ಯುವ ಸಮಾಜದ ಮುಖ್ಯಸ್ಥನಾಗಿ ಲಾರೆನ್ಸ್ ಬಿಷ್ಣೋಯ್ ಆಯ್ಕೆ!

ಅಕ್ಟೋಬರ್ 29 ರಂದು ಸಂಜೆ ಅಬೋಹರ್‌ನಲ್ಲಿ ನಡೆದ ಬಿಷ್ಣೋಯ್ ಸಮಾಜದ ಸಭೆಯಲ್ಲಿ ಬಿಷ್ಣೋಯ್ ನನ್ನು ಆಯ್ಕೆ ಮಾಡಲಾಯಿತು.

ಚಂಡೀಗಡ: ಸದ್ಯ ಅಹಮದಾಬಾದ್‌ನ ಸಬರಮತಿ ಸೆಂಟ್ರಲ್ ಜೈಲಿನಲ್ಲಿರುವ 33 ವರ್ಷದ ಲಾರೆನ್ಸ್ ಬಿಷ್ಣೋಯ್ ನನ್ನು ಆಲ್ ಇಂಡಿಯಾ ಅನಿಮಲ್ ಪ್ರೊಟೆಕ್ಷನ್ ಬಿಷ್ಣೋಯ್ ಸೊಸೈಟಿಯ ಯುವ ವಿಭಾಗದ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾನೆ.

ಪಂಜಾಬ್, ಹರಿಯಾಣ, ರಾಜಸ್ಥಾನ, ದೆಹಲಿ ಮತ್ತು ಮುಂಬೈನಲ್ಲಿ ಮೂರು ಡಜನ್‌ಗಿಂತಲೂ ಹೆಚ್ಚು ಪ್ರಕರಣಗಳಲ್ಲಿ ಆತ ಆರೋಪಿಯಾಗಿದ್ದಾನೆ, ಭಾರತ ಸರ್ಕಾರದ ಆದೇಶದ ಮೇರೆಗೆ ಆತನಿಗೆ ಗುತ್ತಿಗೆ ನೀಡಿ ಅಪರಾಧ ನಡೆಸಲಾಗತ್ತಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪಿಸಿದ್ದಾರೆ.

ಅಕ್ಟೋಬರ್ 29 ರಂದು ಸಂಜೆ ಅಬೋಹರ್‌ನಲ್ಲಿ ನಡೆದ ಬಿಷ್ಣೋಯ್ ಸಮಾಜದ ಸಭೆಯಲ್ಲಿ ಬಿಷ್ಣೋಯ್ ನನ್ನು ಆಯ್ಕೆ ಮಾಡಲಾಯಿತು. ಬಿಷ್ಣೋಯ್ ಸಮಾಜದ ಮುಖ್ಯಸ್ಥ ಇಂದರ್‌ಪಾಲ್ ಬಿಷ್ಣೋಯ್ ನೀಡಿದ ನೇಮಕಾತಿ ಪ್ರಮಾಣಪತ್ರದ ಪ್ರಕಾರ, ಬಿಷ್ಣೋಯ್ ಸಮುದಾಯದ ತತ್ವಗಳ ಪ್ರಕಾರ ಪ್ರಾಣಿಗಳ ರಕ್ಷಣೆಯನ್ನು ಮಾಡುವ ಕಾರ್ಯವನ್ನು ವಹಿಸಲಾಗಿದೆ. ಪಂಜಾಬ್‌ನ ಅಬೋಹರ್‌ನಲ್ಲಿರುವ ದುತ್ರನ್‌ವಾಲಿ ಗ್ರಾಮದ ರವೀಂದರ್ ಪುತ್ರ ಲಾರೆನ್ಸ್ ಬಿಷ್ಣೋಯ್ ನನ್ನು ಆಲ್ ಇಂಡಿಯಾ ಅನಿಮಲ್ ಪ್ರೊಟೆಕ್ಷನ್ ಬಿಷ್ಣೋಯ್ ಸಮಾಜದ ಯುವ ವಿಭಾಗದ ರಾಷ್ಟ್ರೀಯ ಅಧ್ಯಕ್ಷರಾಗಿ ಸರ್ವಾನುಮತದಿಂದ ನೇಮಿಸಲಾಗಿದೆ ಎಂದು ಪ್ರಮಾಣೀಕರಿಸಲಾಗಿದೆ.

ಪ್ರಾಣಿಗಳು, ಪರಿಸರವನ್ನು ರಕ್ಷಿಸುವುದು ಮತ್ತು ಕೆಲಸವನ್ನು ಮುಂದುವರಿಸಬೇಕಾಗಿದೆ. 1730 ರಲ್ಲಿ ರಾಜಸ್ಥಾನದಲ್ಲಿ ಖೇಜರಿ ಮರಗಳನ್ನು ಉಳಿಸಲು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಅಮೃತಾ ದೇವಿ ಬಿಷ್ಣೋಯಿ ಮತ್ತು 363 ಬಿಷ್ಣೋಯಿಗಳ ಪರಂಪರೆಯನ್ನು ರಕ್ಷಿಸುವುದು ನಿಮ್ಮ ಜವಾಬ್ದಾರಿಯಾಗಿದೆ ಎಂದ ಪ್ರಮಾಣಪತ್ರದಲ್ಲಿ ಉಲ್ಲೇಖಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

ಕಾರುಗಳ ಬೆಲೆಯಲ್ಲಿ ಆಗಲಿದೆ ಭಾರಿ ಇಳಿಕೆ: GST ಪರಿಷ್ಕರಣೆಗಾಗಿ ಕಾದು ಕುಳಿತ ಗ್ರಾಹಕರು!

IADWS: ಭಾರತೀಯ ಸೇನೆ ಬತ್ತಳಿಕೆಗೆ 'ಲೇಸರ್ ನಿರ್ದೇಶಿತ ಹೊಸ ಅಸ್ತ್ರ': ದಂಗಾದ ಚೀನಾ, ಹೇಳಿದ್ದು ಏನು?

ಗೌರಿ-ಗಣೇಶ ಹಬ್ಬ: ಪರಿಸರ ಕಾಳಜಿ ಮರೆಯದಿರೋಣ, ಜನತೆಗೆ ಸಿಎಂ ಸಿದ್ದರಾಮಯ್ಯ ಕರೆ! Video

SCROLL FOR NEXT