ಸಾಂದರ್ಭಿಕ ಚಿತ್ರ 
ದೇಶ

ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ: BCAS ಹೊಸ ಮಾರ್ಗಸೂಚಿ ಬಿಡುಗಡೆ

ಇಲ್ಲಿ ಗಮನಿಸಬೇಕಾದ ಅಂಶವೆಂದರೆ ಕಳೆದ ಎರಡು ವಾರಗಳಲ್ಲಿ 510ಕ್ಕೂ ಹೆಚ್ಚು ದೇಶೀಯ ಮತ್ತು ಅಂತರಾಷ್ಟ್ರೀಯ ವಿಮಾನಗಳಿಗೆ ಬಾಂಬ್ ಬೆದರಿಕೆಗಳು ಬಂದಿದ್ದು, ನಂತರ ಅವು ಹುಸಿ ಬಾಂಬ್ ಬೆದರಿಕೆ ಎಂದು ತಿಳಿದುಬಂದಿದೆ.

ನವದೆಹಲಿ: ವಿಮಾನಗಳಿಗೆ ಸರಣಿ ಹುಸಿ ಬಾಂಬ್ ಬೆದರಿಕೆಗಳನ್ನು ಗಂಭೀರವಾಗಿ ಪರಿಗಣಿಸಿದ ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ​​ಸೆಕ್ಯುರಿಟಿ(ಬಿಸಿಎಎಸ್), ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ನ ಗುಪ್ತನಾಮ ಅಥವಾ ಅನಾಮಧೇಯ ಸ್ವರೂಪ, ಭೌಗೋಳಿಕ ರಾಜಕೀಯ ವಿಶ್ಲೇಷಣೆ ಮತ್ತು ಆನ್‌ಬೋರ್ಡ್ ವಿಐಪಿಗಳ ಭದ್ರತೆಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

"ಹೆಚ್ಚುತ್ತಿರುವ ಭದ್ರತಾ ಸವಾಲುಗಳು", ವಿಶೇಷವಾಗಿ ವಿವಿಧ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳ ಮೂಲಕ ಹುಸಿ ಬಾಂಬ್ ಬೆದರಿಕೆಗಳನ್ನು ನೀಡುವ "ನಿರಂತರ ಪ್ರವೃತ್ತಿ"ಯ ದೃಷ್ಟಿಯಿಂದ ಇತರ ಮಾರ್ಗಸೂಚಿಗಳನ್ನು ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಇಲ್ಲಿ ಗಮನಿಸಬೇಕಾದ ಅಂಶವೆಂದರೆ ಕಳೆದ ಎರಡು ವಾರಗಳಲ್ಲಿ 510ಕ್ಕೂ ಹೆಚ್ಚು ದೇಶೀಯ ಮತ್ತು ಅಂತರಾಷ್ಟ್ರೀಯ ವಿಮಾನಗಳಿಗೆ ಬಾಂಬ್ ಬೆದರಿಕೆಗಳು ಬಂದಿದ್ದು, ನಂತರ ಅದು ಹುಸಿ ಬಾಂಬ್ ಬೆದರಿಕೆ ಎಂದು ತಿಳಿದುಬಂದಿದೆ.

ಹೆಚ್ಚಾಗಿ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಅನಾಮಧೇಯ ಹ್ಯಾಂಡಲ್‌ಗಳ ಮೂಲಕ ಬೆದರಿಕೆಗಳನ್ನು ಹಾಕಲಾಗಿದೆ. ಇದು ವಿಮಾನಯಾನ ಸಂಸ್ಥೆಗಳಿಗೆ "ಪ್ರಮುಖ" ಕಾರ್ಯಾಚರಣೆ ಮತ್ತು ಆರ್ಥಿಕ ಸಂಕಷ್ಟವನ್ನು ಉಂಟುಮಾಡಿದೆ.

ಇತ್ತೀಚೆಗೆ, ರಾಷ್ಟ್ರೀಯ ತನಿಖಾ ಸಂಸ್ಥೆಯು ತನ್ನ ಸೈಬರ್ ವಿಭಾಗದ ಸಿಬ್ಬಂದಿಯನ್ನು ಬಾಂಬ್ ಬೆದರಿಕೆ ಪರಿಶೀಲನಾ ಸಮಿತಿಯೊಂದಿಗೆ(BTAC) ಇರಿಸಿದೆ ಮತ್ತು ಅವರನ್ನು ದೇಶದಾದ್ಯಂತದ ಪ್ರತಿಯೊಂದು ಪ್ರಮುಖ ವಿಮಾನ ನಿಲ್ದಾಣಗಳಲ್ಲೂ ನಿಯೋಜಿಸಿದೆ.

ಎನ್ಐಎ ಸಿಬ್ಬಂದಿಯಲ್ಲದೆ, ಸಮಿತಿಯು BCAS, CISF, ಸ್ಥಳೀಯ ಪೊಲೀಸ್, ವಿಮಾನ ನಿಲ್ದಾಣದ ನಿರ್ವಾಹಕರು ಮತ್ತು ವಿಮಾನಯಾನ ಅಧಿಕಾರಿಗಳು ಹಾಗೂ ಇತರ ಕೆಲವು ಏಜೆನ್ಸಿಗಳ ಪ್ರತಿನಿಧಿಗಳನ್ನು ಸಹ ನಿಯೋಜಿಸಲಾಗಿದೆ.

ಅಧಿಕಾರಿಗಳ ಪ್ರಕಾರ, BTAC, ಅಕ್ಟೋಬರ್ 19 ರಂದು ಹೊರಡಿಸಿದ ಹೊಸ BCAS ಮಾರ್ಗಸೂಚಿಗಳ ಪ್ರಕಾರ, ಬೆದರಿಕೆಗಳನ್ನು ನಿರ್ಣಯಿಸಲು ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಹೊರಡಿಸಲಾದ ಅಂತಹ ಬೆದರಿಕೆಗಳ "ವಿಶ್ವಾಸಾರ್ಹತೆ ಮತ್ತು ಗಂಭೀರತೆಯನ್ನು" ನಿರ್ಧರಿಸಲು "ಮಲ್ಟಿ ಲೇಯೆರೆಡ್" ವಿಧಾನವನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT