ಕಚ್ ನಲ್ಲಿ ಯೋಧರಿಗೆ ಪ್ರಧಾನಿ ಮೋದಿಯವರಿಂದ ಸಿಹಿ ವಿತರಣೆ  
ದೇಶ

ಸಂಪ್ರದಾಯ ಮುಂದುವರಿಸಿದ ಪ್ರಧಾನಿ ಮೋದಿ: ಗುಜರಾತ್ ನ ಕಚ್ ನಲ್ಲಿ BSF ಯೋಧರ ಜೊತೆ ದೀಪಾವಳಿ ಆಚರಣೆ

ಸೇನಾ ಸಮವಸ್ತ್ರ ಧರಿಸಿ ಗುಜರಾತ್ ನ ಕಚ್ ಪ್ರಾಂತ್ಯದಲ್ಲಿ ಬೀಡುಬಿಟ್ಟಿರುವ ಭದ್ರತಾ ಸಿಬ್ಬಂದಿಯನ್ನು ಭೇಟಿ ಮಾಡಿ, ಅವರಿಗೆ ಹಬ್ಬದ ಶುಭಾಶಯಗಳನ್ನು ಹೇಳುವ ಮೂಲಕ ಇಂದು ಸೈನಿಕರೊಂದಿಗೆ ದೀಪಾವಳಿ ಆಚರಿಸುವ ಸಂಪ್ರದಾಯವನ್ನು ಮುಂದುವರೆಸಿದರು.

ಕಚ್ (ಗುಜರಾತ್): ಪ್ರತಿವರ್ಷದಂತೆ ಈ ವರ್ಷವೂ ದೀಪಾವಳಿ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸೇನಾ ಸಿಬ್ಬಂದಿ ಜೊತೆ ಗುಜರಾತ್‌ನ ಕಛ್‌ನಲ್ಲಿ ಇಂದು ಸಿಹಿ ವಿನಿಮಯ ಮಾಡಿಕೊಂಡು ಹಬ್ಬ ಆಚರಿಸಿದರು.

ಸೇನಾ ಸಮವಸ್ತ್ರ ಧರಿಸಿ ಗುಜರಾತ್ ನ ಕಚ್ ಪ್ರಾಂತ್ಯದಲ್ಲಿ ಬೀಡುಬಿಟ್ಟಿರುವ ಭದ್ರತಾ ಸಿಬ್ಬಂದಿಯನ್ನು ಭೇಟಿ ಮಾಡಿ, ಅವರಿಗೆ ಹಬ್ಬದ ಶುಭಾಶಯಗಳನ್ನು ಹೇಳುವ ಮೂಲಕ ಇಂದು ಸೈನಿಕರೊಂದಿಗೆ ದೀಪಾವಳಿ ಆಚರಿಸುವ ಸಂಪ್ರದಾಯವನ್ನು ಮುಂದುವರೆಸಿದರು.

2014 ರಲ್ಲಿ ಪ್ರಧಾನ ಮಂತ್ರಿಗಳಾಗಿ ಅಧಿಕಾರ ವಹಿಸಿಕೊಂಡ ನಂತರ, ಪ್ರಧಾನಿಯವರು ಪ್ರತಿವರ್ಷ ವಿವಿಧ ಸ್ಥಳಗಳಲ್ಲಿ ಸೈನಿಕರೊಂದಿಗೆ ದೀಪಾವಳಿಯನ್ನು ಆಚರಿಸುತ್ತಾರೆ. 2014ರಲ್ಲಿ ಸಿಯಾಚಿನ್‌ನಿಂದ ಪ್ರಾರಂಭಿಸಿ, ನಂತರ ಪಂಜಾಬ್‌ನ ಗಡಿ, ಹಿಮಾಚಲ ಪ್ರದೇಶದ ಸುಮ್ಡೋ, ಜಮ್ಮು ಮತ್ತು ಕಾಶ್ಮೀರದ ಗುರೇಜ್ ಸೆಕ್ಟರ್, ಉತ್ತರಾಖಂಡದ ಹರ್ಸಿಲ್, ಜಮ್ಮು ಮತ್ತು ಕಾಶ್ಮೀರದ ರಾಜೌರಿ, ರಾಜಸ್ಥಾನಗಳಲ್ಲಿ ಆಚರಿಸಿಕೊಂಡಿದ್ದರು. ಲೋಂಗೆವಾಲಾ, ಕಾಶ್ಮೀರದ ನೌಶೇರಾ, ಕಾರ್ಗಿಲ್ ಮತ್ತು ಕಳೆದ ವರ್ಷ ಹಿಮಾಚಲದ ಲೆಪ್ಚಾದಲ್ಲಿ ಸೈನಿಕರೊಂದಿಗೆ ದೀಪಾವಳಿ ಸಮಯ ಕಳೆದಿದ್ದರು.

2014 ರಲ್ಲಿ ಪ್ರಧಾನಿಯಾಗಿ ತಮ್ಮ ಮೊದಲ ದೀಪಾವಳಿ ಭೇಟಿಯಲ್ಲಿ, ಗಡಿಯಲ್ಲಿ ಸೈನಿಕರ ಸಮರ್ಪಣಾ ಮನೋಭಾವದಿಂದ ಭಾರತದ 125 ಕೋಟಿ ನಾಗರಿಕರು ನೆಮ್ಮದಿಯಿಂದ ಹಬ್ಬ ಆಚರಿಸುವಂತಾಗಿದೆ ಎಂದು ಮೋದಿ ಸಿಯಾಚಿನ್‌ನಲ್ಲಿ ಹೇಳಿದ್ದರು.

ಇದೇ ವೇಳೆ ದೇಶವಾಸಿಗಳಿಗೆ ಶುಭ ಕೋರಿದ ಅವರು, "ದೀಪಾವಳಿಯಂದು ದೇಶವಾಸಿಗಳಿಗೆ ಶುಭಾಶಯಗಳು. ಈ ದೈವಿಕ ಬೆಳಕಿನ ಹಬ್ಬದಲ್ಲಿ, ನಾನು ಎಲ್ಲರಿಗೂ ಆರೋಗ್ಯಕರ, ಸಂತೋಷ ಮತ್ತು ಸಮೃದ್ಧ ಜೀವನವನ್ನು ಬಯಸುತ್ತೇನೆ. ಎಂದು ಎಕ್ಸ್ ಖಾತೆಯಲ್ಲಿ ಬರೆದಿದ್ದರು.

ಇನ್ನೊಂದೆಡೆ ಭಾರತ-ಚೀನಾ ಸೈನಿಕರು ಗಡಿ ವಾಸ್ತವ ರೇಖೆಯಲ್ಲಿ ಸಿಹಿ ವಿನಿಮಯ ಮಾಡಿಕೊಂಡಿದ್ದಾರೆ. ಇಂದು ಮುಂಜಾನೆ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಏಕತಾ ನಗರದಲ್ಲಿರುವ ಏಕತಾ ಪ್ರತಿಮೆಯಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆಯಲ್ಲಿ ಪಾಲ್ಗೊಂಡರು. ಸ್ಮಾರಕದ ಬಳಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತದ ಮೊದಲ ಗೃಹ ಸಚಿವರ ಜನ್ಮದಿನದ ಅಂಗವಾಗಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಪುಷ್ಪ ನಮನ ಸಲ್ಲಿಸಿದರು.

2014 ರಿಂದ, ಅಕ್ಟೋಬರ್ 31 ರಂದು ಸರ್ದಾರ್ ಪಟೇಲ್ ಅವರ ಜನ್ಮದಿನವನ್ನು ರಾಷ್ಟ್ರೀಯ ಏಕತಾ ದಿವಸ್ ಅಥವಾ ರಾಷ್ಟ್ರೀಯ ಏಕತಾ ದಿನ ಎಂದು ಸ್ಮರಿಸಲಾಗುತ್ತದೆ, ಇದು ಭಾರತವನ್ನು ಏಕೀಕರಿಸುವಲ್ಲಿ ಅವರ ಪಾತ್ರವನ್ನು ಸ್ಮರಿಸಿ ಗೌರವಿಸುವ ದಿನವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT