ದೇಶ

'ಉಕ್ಕಿನ ಮನುಷ್ಯ' ಸರ್ದಾರ್ ವಲ್ಲಭಬಾಯಿ ಪಟೇಲ್ ಜನ್ಮಜಯಂತಿ: ರಾಷ್ಟ್ರಪತಿ, ಉಪ ರಾಷ್ಟ್ರಪತಿ ನಮನ

ದೆಹಲಿಯ ಪಟೇಲ್ ಚೌಕ್‌ನಲ್ಲಿರುವ ಭಾರತದ ಮೊದಲ ಉಪ ಪ್ರಧಾನಿ ಮತ್ತು ಗೃಹ ಸಚಿವ ಪಟೇಲ್ ಅವರ ಪ್ರತಿಮೆಗೆ ನಮನ ಸಲ್ಲಿಸಲಾಯಿತು.

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧನ್ ಕರ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಇಂದು ಗುರುವಾರ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದಂದು ರಾಷ್ಟ್ರೀಯ ಏಕತಾ ದಿನವಾಗಿ ಆಚರಿಸಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆೇ.

ದೆಹಲಿಯ ಪಟೇಲ್ ಚೌಕ್‌ನಲ್ಲಿರುವ ಭಾರತದ ಮೊದಲ ಉಪ ಪ್ರಧಾನಿ ಮತ್ತು ಗೃಹ ಸಚಿವ ಪಟೇಲ್ ಅವರ ಪ್ರತಿಮೆಗೆ ನಮನ ಸಲ್ಲಿಸಲಾಯಿತು.

ದೇಶದ ಏಕೀಕರಣಕ್ಕೆ ಹೋರಾಡಿದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದಂದು ಅವರಿಗೆ ನಮನಗಳು! ಸರ್ದಾರ್ ಪಟೇಲ್ ಒಬ್ಬ ಮಹಾನ್ ದೇಶಭಕ್ತ ಮತ್ತು ಪ್ರಮುಖ ರಾಷ್ಟ್ರನಿರ್ಮಾಪಕ. ರಾಷ್ಟ್ರ ನಿರ್ಮಾಣಕ್ಕಾಗಿ ಅವಿರತವಾಗಿ ಕೆಲಸ ಮಾಡಲು ನಾವು ಅವರ ಆದರ್ಶಗಳಿಂದ ಸ್ಫೂರ್ತಿ ಪಡೆಯಬೇಕು' ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಎಕ್ಸ್ ಖಾತೆಯಲ್ಲಿ ಬರೆದಿದ್ದಾರೆ.

ಅವರು ರಾಷ್ಟ್ರಪತಿ ಭವನದ ಗಂತಂತ್ರ ಮಂಟಪದಲ್ಲಿ ಸರ್ದಾರ್ ಪಟೇಲ್ ಅವರಿಗೆ ಪುಷ್ಪ ನಮನ ಸಲ್ಲಿಸಿದರು.

1875 ರಲ್ಲಿ ಗುಜರಾತ್‌ನ ನಾಡಿಯಾಡ್‌ನಲ್ಲಿ ಜನಿಸಿದ ಪಟೇಲ್ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ವ್ಯಕ್ತಿಯಾಗಿದ್ದರು. ಅವರ ಅಸಾಧಾರಣ ನಾಯಕತ್ವ ಮತ್ತು ರಾಷ್ಟ್ರೀಯ ಏಕೀಕರಣಕ್ಕೆ ಮಣಿಯದ ಬದ್ಧತೆಗೆ ಹೆಸರುವಾಸಿಯಾದ ಅವರನ್ನು 'ಭಾರತದ ಉಕ್ಕಿನ ಮನುಷ್ಯ' ಎಂದು ಪ್ರೀತಿಯಿಂದ ನೆನಪಿಸಿಕೊಳ್ಳಲಾಗುತ್ತದೆ.

ರಾಷ್ಟ್ರೀಯ ಏಕತಾ ದಿನವು ವೈವಿಧ್ಯಮಯ ರಾಜಪ್ರಭುತ್ವದ ರಾಜ್ಯಗಳನ್ನು ಒಂದೇ ರಾಷ್ಟ್ರವಾಗಿ ಒಗ್ಗೂಡಿಸುವ ಅವರ ಪ್ರಯತ್ನಗಳ ಜ್ಞಾಪನೆಯಾಗಿ ಕಾರ್ಯನಿರ್ವಹಿಸುತ್ತದೆ. ಭಾರತದ ಜನರಲ್ಲಿ ಒಗ್ಗಟ್ಟಿನ ಮನೋಭಾವವನ್ನು ಬೆಳೆಸುತ್ತದೆ.

ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ, ಕೇಂದ್ರ ಗೃಹ ಖಾತೆ ರಾಜ್ಯ ಸಚಿವರಾದ ನಿತ್ಯಾನಂದ ರೈ ಮತ್ತು ಬಂಡಿ ಸಂಜಯ್ ಕುಮಾರ್ ಮತ್ತು ಬಿಜೆಪಿ ಸಂಸದ ಬಾನ್ಸುರಿ ಸ್ವರಾಜ್ ಅವರು ಪಟೇಲ್ ಚೌಕ್‌ನಲ್ಲಿ ಸರ್ದಾರ್ ಪಟೇಲ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT