ಪಶ್ಚಿಮ ಬಂಗಾಳ ಕಿರಿಯ ವೈದ್ಯರು online desk
ದೇಶ

'ನಿಮ್ಮ ಹಣದ ಮೂಲ ಯಾವುದು?': ಧರಣಿನಿರತ ಕಿರಿಯ ವೈದ್ಯರಿಗೆ ಪಶ್ಚಿಮ ಬಂಗಾಳ ಸಚಿವ ಪ್ರಶ್ನೆ

ಚಟ್ಟೋಪಾಧ್ಯಾಯ ಅವರು ಮಾತನಾಡಿದ ವಿಡಿಯೋ ಗುರುವಾರ ವೈರಲ್ ಆಗಿದ್ದು, ಕಿರಿಯ ವೈದ್ಯರೊಂದಿಗೆ ಹೊಸ ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆ ಇದೆ.

ಕೋಲ್ಕತ್ತಾ: ಆರ್‌ಜಿ ಕರ್ ಆಸ್ಪತ್ರೆಯಲ್ಲಿ ತಮ್ಮ ಸಹೋದ್ಯೋಗಿಯ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ಪ್ರತಿಭಟಿಸುತ್ತಿರುವ ಕಿರಿಯ ವೈದ್ಯರ ವಿರುದ್ಧ ಪಶ್ಚಿಮ ಬಂಗಾಳ ಕೃಷಿ ಸಚಿವ ಸೋವಂದೇಬ್ ಚಟ್ಟೋಪಾಧ್ಯಾಯ ಅವರು, ಕಳೆದ ಎರಡು ತಿಂಗಳಿನಿಂದ ಧರಣಿ ನಡೆಸಲು ಸಹಾಯ ಮಾಡುತ್ತಿರುವ ಹಣದ ಮೂಲ ಯಾವುದು ಎಂದು ಪ್ರಶ್ನಿಸಿದ್ದಾರೆ.

ಉತ್ತರ 24 ಪರಗಣ ಜಿಲ್ಲೆಯ ಖರ್ದಾಹಾದಲ್ಲಿ ಬುಧವಾರ ಟಿಎಂಸಿ ಆಯೋಜಿಸಿದ್ದ ದುರ್ಗಾ ಪೂಜೆಯ ನಂತರದ ಸಭೆಯಲ್ಲಿ ಚಟ್ಟೋಪಾಧ್ಯಾಯ ಮಾತನಾಡಿದ ವಿಡಿಯೋ ಗುರುವಾರ ವೈರಲ್ ಆಗಿದ್ದು, ಕಿರಿಯ ವೈದ್ಯರೊಂದಿಗೆ ಹೊಸ ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆ ಇದೆ.

"ನಾನು ಅವರನ್ನು ಕೇಳಲು ಬಯಸುತ್ತೇನೆ. ನೀವು ಯಾಕೆ ಧರಣಿ ಮಾಡುತ್ತಿದ್ದೀರಿ? ನೀವು ಯಾವ ಕಾರಣಕ್ಕಾಗಿ ಧರಣಿ ಮಾಡುತ್ತಿದ್ದೀರಿ? ನಿಮ್ಮ ಎಲ್ಲಾ ಕೋಪವು ಸರ್ಕಾರದ ವಿರುದ್ಧ ಏಕೆ ನಿರ್ದೇಶಿಸಲ್ಪಟ್ಟಿದೆ?" ಸಚಿವರು ಪ್ರಶ್ನಿಸಿದ್ದಾರೆ.

"ನಿಮ್ಮ ಹಣದ ಮೂಲ ಯಾವುದು? ನಿಮಗೆ ಇಷ್ಟು ಹಣ ಎಲ್ಲಿಂದ ಬರುತ್ತಿದೆ?" ಚಟ್ಟೋಪಾಧ್ಯಾಯ ಕೇಳಿದ್ದಾರೆ.

ಸಚಿವರ ಹೇಳಿಕೆಗೆ ಪ್ರತಿಕ್ರಿಯಿಸಿದ ಹಿರಿಯ ವೈದ್ಯೆ ಸುವರ್ಣ ಗೋಸ್ವಾಮಿ, ಕಿರಿಯ ವೈದ್ಯರು ಕರ್ತವ್ಯ ಬಹಿಷ್ಕರಿಸಿರುವುದರಿಂದ ಆರೋಗ್ಯ ವ್ಯವಸ್ಥೆಗೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚುತ್ತಿರುವುದರಿಂದ ಈ "ಪ್ರಕೋಪ" ಎಂದು ಹೇಳಿದ್ದಾರೆ.

ಆಗಸ್ಟ್ 9 ರಂದು ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದಾಗ ಅತ್ಯಾಚಾರ ಮತ್ತು ಹತ್ಯೆಗೀಡಾದ ಟ್ರೈನಿ ವೈದ್ಯೆಗೆ ನ್ಯಾಯಕ್ಕಾಗಿ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಪಶ್ಚಿಮ ಬಂಗಾಳದ ಜೂನಿಯರ್ ಡಾಕ್ಟರ್ಸ್ ಫ್ರಂಟ್ ಸದಸ್ಯ ಸ್ವರ್ಣಭಾ ಘೋಷ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT