ಸಂಗ್ರಹ ಚಿತ್ರ online desk
ದೇಶ

ಜಾರ್ಖಂಡ್: ಅಬಕಾರಿ ಇಲಾಖೆ ನೇಮಕಾತಿಗೆ ದೈಹಿಕ ಪರೀಕ್ಷೆ ವೇಳೆ 11 ಮಂದಿ ಸಾವು!

ಜಾರ್ಖಂಡ್ ಅಬಕಾರಿ ಕಾನ್ಸ್‌ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆಗಳ ಅಡಿಯಲ್ಲಿ ದೈಹಿಕ ಪರೀಕ್ಷೆಗಳು ಆಗಸ್ಟ್ 22 ರಂದು ರಾಂಚಿ, ಗಿರಿದಿಹ್, ಹಜಾರಿಬಾಗ್, ಪಲಮು, ಪೂರ್ವ ಸಿಂಗ್‌ಭೂಮ್ ಮತ್ತು ಸಾಹೇಬ್‌ಗಂಜ್ ಜಿಲ್ಲೆಗಳಾದ್ಯಂತ ಏಳು ಕೇಂದ್ರಗಳಲ್ಲಿ ಪ್ರಾರಂಭವಾಗಿದ್ದವು.

ರಾಂಚಿ: ಜಾರ್ಖಂಡ್ ನಲ್ಲಿ ಅಬಕಾರಿ ಇಲಾಖೆಯ ಕಾನ್ಸ್ಟೇಬಲ್ ಹುದ್ದೆಗೆ ನೇಮಕಾತಿಗಾಗಿ ದೈಹಿಕ ಪರೀಕ್ಷೆ ನಡೆಯುತ್ತಿದ್ದ ವೇಳೆ 11 ಮಂದಿ ಸಾವನ್ನಪ್ಪಿದ್ದಾರೆ.

ಜಾರ್ಖಂಡ್ ಅಬಕಾರಿ ಕಾನ್ಸ್‌ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆಗಳ ಅಡಿಯಲ್ಲಿ ದೈಹಿಕ ಪರೀಕ್ಷೆಗಳು ಆಗಸ್ಟ್ 22 ರಂದು ರಾಂಚಿ, ಗಿರಿದಿಹ್, ಹಜಾರಿಬಾಗ್, ಪಲಮು, ಪೂರ್ವ ಸಿಂಗ್‌ಭೂಮ್ ಮತ್ತು ಸಾಹೇಬ್‌ಗಂಜ್ ಜಿಲ್ಲೆಗಳಾದ್ಯಂತ ಏಳು ಕೇಂದ್ರಗಳಲ್ಲಿ ಪ್ರಾರಂಭವಾಗಿದ್ದವು.

ಪಲಮುದಲ್ಲಿ ನಾಲ್ಕು ಸಾವುಗಳು ಸಂಭವಿಸಿವೆ, ಗಿರಿದಿಹ್ ಮತ್ತು ಹಜಾರಿಬಾಗ್‌ನಲ್ಲಿ ತಲಾ ಇಬ್ಬರು ಮತ್ತು ರಾಂಚಿಯ ಜಾಗ್ವಾರ್ ಕೇಂದ್ರ ಮತ್ತು ಪೂರ್ವ ಸಿಂಗ್‌ಭೂಮ್‌ನ ಮೊಸಬಾನಿ ಮತ್ತು ಸಾಹೇಬ್‌ಗಂಜ್ ಕೇಂದ್ರಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಐಜಿ (ಕಾರ್ಯಾಚರಣೆ) ಅಮೋಲ್ ವಿ ಹೋಮ್ಕರ್ ಹೇಳಿದ್ದಾರೆ. ಅಸ್ವಾಭಾವಿಕ ಸಾವಿನ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಆಗಸ್ಟ್ 30 ರವರೆಗೆ ಒಟ್ಟು 1,27,772 ಆಕಾಂಕ್ಷಿಗಳು ದೈಹಿಕ ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 78,023 ಮಂದಿ ತೇರ್ಗಡೆಯಾಗಿದ್ದಾರೆ ಎಂದು ಹೇಳಿದ್ದಾರೆ. ಎಲ್ಲಾ ಕೇಂದ್ರಗಳಲ್ಲಿ ವೈದ್ಯಕೀಯ ತಂಡಗಳು, ಔಷಧಿಗಳು, ಆಂಬ್ಯುಲೆನ್ಸ್, ಮೊಬೈಲ್ ಶೌಚಾಲಯಗಳು ಮತ್ತು ಕುಡಿಯುವ ನೀರು ಸೇರಿದಂತೆ ಸಾಕಷ್ಟು ವ್ಯವಸ್ಥೆಗಳನ್ನು ಖಚಿತಪಡಿಸಿಕೊಳ್ಳಲಾಗಿದೆ ಎಂದು ಹೋಮ್ಕರ್ ಹೇಳಿದರು.

ಅಧಿಕಾರಿಗಳ ದುರಾಡಳಿತದಿಂದ ಸಾವು ಸಂಭವಿಸಿದೆ ಎಂದು ಆರೋಪಿಸಿ ಬಿಜೆಪಿ ಯುವ ಘಟಕವು ರಾಂಚಿಯ ಆಲ್ಬರ್ಟ್ ಎಕ್ಕಾ ಚೌಕ್‌ನಲ್ಲಿ ಜೆಎಂಎಂ ನೇತೃತ್ವದ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ!

ನಮಸ್ತೆ.. ಏನ್ರೀ ರಾಹುಲ್ ಹೇಗಿದ್ದೀರಾ? ; ಸಂಸತ್ ಭವನದ ಬಳಿ ಪ್ರಧಾನಿ ಮೋದಿ-Rahul Gandhi ಅಪರೂಪದ ಮುಖಾಮುಖಿ! Video

ಮಾತುಕತೆಗೂ ಮುನ್ನವೇ ಟೆಹ್ರಾನ್‌ಗೆ ದೊಡ್ಡ ಗೆಲುವು; ಫ್ರೀಜ್ ಮಾಡಲಾದ ಇರಾನ್ ಸ್ವತ್ತುಗಳ ಬಿಡುಗಡೆಗೆ ಅಮೆರಿಕ ಒಪ್ಪಿಗೆ!

SCROLL FOR NEXT