ವೃದ್ಧನ ಜೊತೆ ಯುವಕರ ವಾಗ್ವಾದ  
ದೇಶ

'ಬ್ಯಾಗ್ ನಲ್ಲಿ ಬೀಫ್ ತೆಗೆದುಕೊಂಡು ಹೋಗ್ತಿದ್ದೀಯಾ'?: ವೃದ್ಧ ಮುಸ್ಲಿಂ ವ್ಯಕ್ತಿಗೆ ರೈಲಿನಲ್ಲಿ ಹಿಗ್ಗಾಮುಗ್ಗಾ ಹಲ್ಲೆ ಮಾಡಿದ ಯುವಕರು, Viral video

ಮಹಾರಾಷ್ಟ್ರ ಪ್ರಾಣಿ ಸಂರಕ್ಷಣಾ ಕಾಯ್ದೆ 1976 ರ ಪ್ರಕಾರ, ಹಸುಗಳು, ಹೋರಿಗಳು ಮತ್ತು ಹೋರಿಗಳಂತಹ ಪ್ರಾಣಿಗಳ ಹತ್ಯೆಯನ್ನು ನಿಷೇಧಿಸಲಾಗಿದೆ.

ನಾಸಿಕ್: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಚಲಿಸುತ್ತಿದ್ದ ರೈಲಿನಲ್ಲಿ ದನದ ಮಾಂಸ ಸಾಗಿಸುತ್ತಿದ್ದಾರೆ ಎಂಬ ಶಂಕೆಯಲ್ಲಿ ವೃದ್ಧನೊಬ್ಬನ ಮೇಲೆ ಸಹ ಪ್ರಯಾಣಿಕರು ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ವೃದ್ಧನ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೊ ವೈರಲ್ ಆಗಿದೆ. ಅದರಲ್ಲಿ ಹನ್ನೆರಡು ಮಂದಿ ಸುತ್ತುವರಿದು ಆ ವ್ಯಕ್ತಿಗೆ ಹಲ್ಲೆ ನಡೆಸುವುದು, ಅವಾಚ್ಯಶಬ್ದಗಳಿಂದ ನಿಂದಿಸುವುದು ಮತ್ತು ಅತ್ಯಾಚಾರದ ಬೆದರಿಕೆಗಳನ್ನು ಹಾಕುವುದನ್ನು ಕಾಣಬಹುದು. ಘಟನೆಯ ಕುರಿತು ಸರ್ಕಾರಿ ರೈಲ್ವೆ ಪೊಲೀಸರು (GRP) ತನಿಖೆ ಆರಂಭಿಸಿದ್ದು, ಇದರಲ್ಲಿ ಭಾಗಿಯಾಗಿರುವ ಕೆಲವು ವ್ಯಕ್ತಿಗಳನ್ನು ಗುರುತಿಸಲಾಗಿದೆ.

ನಾವು ವೀಡಿಯೊದಲ್ಲಿ. ದಾಳಿ ಮಾಡಿರುವ ಆರೋಪಿಗಳನ್ನು ಸಹ ಗುರುತಿಸಲಾಗಿದೆ, ತನಿಖೆ ನಡೆಯುತ್ತಿದೆ" ಎಂದು ಅಧಿಕಾರಿಯನ್ನು ಉಲ್ಲೇಖಿಸಿ ಹೇಳಿದರು. ಆದರೆ, ಇನ್ನೂ ಯಾವುದೇ ಪ್ರಕರಣ ದಾಖಲಾಗಿಲ್ಲ.

ಜಿಆರ್‌ಪಿ ಪ್ರಕಾರ, ಸಂತ್ರಸ್ತ ವೃದ್ಧ, ಜಲಗಾಂವ್ ಜಿಲ್ಲೆಯ ನಿವಾಸಿ ಹಾಜಿ ಅಶ್ರಫ್ ಮುನ್ಯಾರ್ ತನ್ನ ಮಗಳ ಮನೆಗೆ ಹೋಗಲು ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಇದು ಮೇಕೆ ಮಾಂಸವೇ ಹೊರತು ದನದ ಮಾಂಸವಲ್ಲ ಎಂದು ವೃದ್ಧ ಹೇಳುತ್ತಿರುವುದು ವಿಡಿಯೊದಲ್ಲಿ ಕೇಳಿಬರುತ್ತಿದೆ. ದಾಳಿಕೋರರು ಕೇಳಲು ಸಿದ್ಧರಿರಲಿಲ್ಲ, ಹಲ್ಲೆ ನಡೆಸುವುದನ್ನು ಮುಂದುವರಿಸಿದರು.

ಕಾಂಗ್ರೆಸ್ ಸಂಸದ ಇಮ್ರಾನ್ ಪ್ರತಾಪಘರ್ಹಿ ಅವರು ಮಹಾರಾಷ್ಟ್ರ ಸರ್ಕಾರ ಇಂತಹ ಕ್ರಮಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

“ಆತ ಗೋಮಾಂಸ ಸಾಗಿಸುತ್ತಿದ್ದಾನೆಂದು ಭಾವಿಸಿ ಕೆಲವು ಯುವಕರು ಆತನನ್ನು ಥಳಿಸಿದ್ದಾರೆ. ಈ ರೀತಿ ವರ್ತನೆ ತೋರಿಸಬಾರದು, ಇದು ಮಹಾರಾಷ್ಟ್ರ ಅಲ್ಲ. ನಮ್ಮ ಸಂಸ್ಕೃತಿಯಲ್ಲ ಎಂದಿದ್ದಾರೆ.

ಮಹಾರಾಷ್ಟ್ರ ಪ್ರಾಣಿ ಸಂರಕ್ಷಣಾ ಕಾಯ್ದೆ 1976 ರ ಪ್ರಕಾರ, ಹಸುಗಳು, ಹೋರಿಗಳು ಮತ್ತು ಹೋರಿಗಳಂತಹ ಪ್ರಾಣಿಗಳ ಹತ್ಯೆಯನ್ನು ನಿಷೇಧಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT