ದೇಶ

'ಇಡಿ ಅಧಿಕಾರಿಗಳು ನನ್ನನ್ನು ಬಂಧಿಸಲು ನನ್ನ ಮನೆಗೆ ಬಂದಿದ್ದಾರೆ': AAP ನಾಯಕ ಅಮಾನತುಲ್ಲಾ ಖಾನ್

ದೆಹಲಿ ವಕ್ಫ್ ಬೋರ್ಡ್‌ಗೆ ಸಂಬಂಧಿಸಿದ ಹಣಕಾಸು ಅಕ್ರಮಗಳನ್ನು ಒಳಗೊಂಡಿರುವ ಆಪಾದಿತ ಹಣ ವರ್ಗಾವಣೆ ಪ್ರಕರಣದ ಕುರಿತು ಅಮಾನುತಲ್ಲಾ ಖಾನ್ ವಿರುದ್ಧ ತನಿಖೆ ನಡೆಯುತ್ತಿದೆ.

ನವದೆಹಲಿ: ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ಬಂಧಿಸಲು ಜಾರಿ ನಿರ್ದೇಶನಾಲಯದ (ED) ತಂಡವು ಪ್ರಸ್ತುತ ದೆಹಲಿಯಲ್ಲಿರುವ ಅವರ ಮನೆಯಲ್ಲಿದೆ. ಈ ಕುರಿತು ಸ್ವತಃ ಅವರೇ ತಮ್ಮ ಎಕ್ಸ್ ಖಾತೆಯಲ್ಲಿ ಹೇಳಿಕೊಂಡಿದ್ದು ಯಾವುದೇ ಕ್ಷಣದಲ್ಲಿ ಅವರು ಬಂಧನಕ್ಕೊಳಗಾಗುವ ಸಾಧ್ಯತೆಯಿದೆ.

ದೆಹಲಿ ವಕ್ಫ್ ಬೋರ್ಡ್‌ಗೆ ಸಂಬಂಧಿಸಿದ ಹಣಕಾಸು ಅಕ್ರಮಗಳನ್ನು ಒಳಗೊಂಡಿರುವ ಆಪಾದಿತ ಹಣ ವರ್ಗಾವಣೆ ಪ್ರಕರಣದ ಕುರಿತು ಅಮಾನುತಲ್ಲಾ ಖಾನ್ ವಿರುದ್ಧ ತನಿಖೆ ನಡೆಯುತ್ತಿದೆ.

ಇಡಿ ಅಧಿಕಾರಿಗಳು ನನ್ನನ್ನು ಬಂಧಿಸಲು ನನ್ನ ಮನೆಗೆ ಬಂದಿದ್ದಾರೆ ಎಂದು ಅಮಾನತುಲ್ಲಾ ಖಾನ್ ಹಿಂದಿಯಲ್ಲಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಓಖ್ಲಾ ಕ್ಷೇತ್ರದ ಶಾಸಕರಾಗಿರುವ ಅಮಾನುತಲ್ಲಾ ಖಾನ್ ಬಂಧನಕ್ಕೆ ಕಾರಣವನ್ನು ಉಲ್ಲೇಖಿಸಿಲ್ಲ. ಅವರ ಪೋಸ್ಟ್‌ಗೆ ಜಾರಿ ನಿರ್ದೇಶನಾಲಯ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಕೇಂದ್ರ ತನಿಖಾ ಸಂಸ್ಥೆ ಕಳೆದ ಏಪ್ರಿಲ್ ನಲ್ಲಿ ಅಮಾನತುಲ್ಲಾ ಖಾನ್ ನನ್ನು 14 ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು.

ಆಪ್ ನಾಯಕ ಸಂಜಯ್ ಸಿಂಗ್ ಕೂಡ ಸುದ್ದಿಯನ್ನು ದೃಢಪಡಿಸಿದ್ದಾರೆ ಮತ್ತು ಆಪಾದಿತ ದಾಳಿಯ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಇಡಿ ಅಧಿಕಾರಿಗಳು ಬೆಳಗ್ಗೆ ಅಮಾನತುಲ್ಲಾ ಖಾನ್ ಅವರ ನಿವಾಸಕ್ಕೆ ದಾಳಿ ನಡೆಸಿ ಅವರ ನಿವಾಸವನ್ನು ತಲುಪಿದ್ದಾರೆ ಎಂದು ಸಂಜಯ್ ಸಿಂಗ್ ಹೇಳಿದ್ದಾರೆ. ಆಪಾದಿತ ದಾಳಿಗೆ ಪ್ರಧಾನಿ ನರೇಂದ್ರ ಮತ್ತು ತನಿಖಾ ಸಂಸ್ಥೆಯನ್ನು ಟೀಕಿಸಿದ್ದಾರೆ. ವಿಡಿಯೊದಲ್ಲಿ ಏಜೆನ್ಸಿ ಕಳುಹಿಸುತ್ತಿರುವ ಎಲ್ಲಾ ನೋಟಿಸ್‌ಗಳಿಗೆ ನಾನು ಉತ್ತರಿಸುತ್ತಿದ್ದೇನೆ ಎಂದು ಅಮಾನತುಲ್ಲಾ ಖಾನ್ ಹೇಳಿದ್ದಾರೆ.

ಮನೀಶ್ ಸಿಸೋಡಿಯಾ, ಸಂಜಯ್ ಸಿಂಗ್ ಸೇರಿದಂತೆ ಹಲವಾರು ಆಮ್ ಆದ್ಮಿ ಪಕ್ಷದ (AAP) ನಾಯಕರು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆಡಳಿತ ಪಕ್ಷದ ವಿರುದ್ಧ ಧ್ವನಿ ಎತ್ತುವವರನ್ನು ತನಿಖಾ ಏಜೆನ್ಸಿಗಳು ಗುರಿಯಾಗಿಸುತ್ತಿವೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ವಿರುದ್ಧ ಮಾತನಾಡುವವರ ಧ್ವನಿಯನ್ನು ಹತ್ತಿಕ್ಕುವುದು ಮತ್ತು ಅದನ್ನು ಮುರಿಯುವುದು ತನಿಖಾಧಿಕಾರಿಗಳು ಮಾಡುತ್ತಿರುವ ಕೆಲಸವಾಗಿದೆ ಎಂದು ಮನೀಶ್ ಸಿಸೋಡಿಯಾ ಹೇಳಿದ್ದಾರೆ.

ದೆಹಲಿ ಬಿಜೆಪಿ ಮುಖ್ಯಸ್ಥ ವೀರೇಂದ್ರ ಸಚ್‌ದೇವ ಅವರು ಆಪ್ ನಾಯಕರ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಆಪ್ ಪಕ್ಷದಲ್ಲಿ ಭ್ರಷ್ಟ ನಾಯಕರ ದೀರ್ಘವಾದ ಪಟ್ಟಿಯೇ ಇದೆ ಎಂದು ಹೇಳಿದ್ದಾರೆ.

ಎಎಪಿಯಲ್ಲಿ ಭ್ರಷ್ಟರ ದೊಡ್ಡ ಪಟ್ಟಿಯೇ ಇದೆ.ಕಾನೂನು ತನ್ನ ದಾರಿ ಹಿಡಿದಾಗ ಅವರು ಕೂಗಾಡಲು ಶುರುಮಾಡುತ್ತಾರೆ.ದೆಹಲಿ ವಕ್ಫ್ ಬೋರ್ಡ್ ನಲ್ಲಿ ಭ್ರಷ್ಟಾಚಾರ ಮಾಡಿರುವ ಅಮಾನತುಲ್ಲಾ ಖಾನ್ ಇಡಿ ಕ್ರಮದ ವಿರುದ್ಧ ಮಾತನಾಡುತ್ತಿದ್ದಾರೆ. ಕಾನೂನು ಎಲ್ಲರಿಗೂ ಸಮಾನವಾಗಿದೆ, ನೀವು ತಪ್ಪು ಮಾಡದಿದ್ದರೆ ಕಾನೂನು ಮುಂದೆ ಸೂಕ್ತ ಉತ್ತರ ನೀಡಿ ಎಂದಿದ್ದಾರೆ.

"ಈ ದೇಶವು ಕಾನೂನಿನ ತತ್ವದ ಮೇಲೆ ಕಾರ್ಯನಿರ್ವಹಿಸುತ್ತದೆ, ನೀವು ಬೆಳೆ ಬಿತ್ತಿದಂತೆ ಫಸಲು ಕೊಯ್ಯುತ್ತೀರಿ ಎಂದು ವೀರೇಂದ್ರ ಸಚ್ ದೇವ್ ತಿರುಗೇಟು ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT