ಸಂಗ್ರಹ ಚಿತ್ರ 
ದೇಶ

ಜಮ್ಮು-ಕಾಶ್ಮೀರ: ಸೇನಾ ಶಿಬಿರದಲ್ಲಿ ಯೋಧ ನಿಗೂಢ ಸಾವು; ಉಗ್ರರ ದಾಳಿ ಶಂಕೆ

ಸುಂಜ್ವಾನ್ ಮಿಲಿಟರಿ ಶಿಬಿರದಲ್ಲಿ ಯೋಧರನ್ನು ಸೆಂಟ್ರಿ ಡ್ಯೂಟಿಗಾಗಿ ನಿಯೋಜನೆ ಮಾಡಲಾಗಿತ್ತು. ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಯೋಧ ಪತ್ತೆಯಾಗಿದ್ದಾರೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸುಂಜ್ವಾನ್ ಸೇನಾ ಶಿಬಿರದಲ್ಲಿ ಯೋಧರೊಬ್ಬರು ನಿಗೂಢವಾಗಿ ಸಾವನ್ನಪ್ಪಿದ್ದು, ಉಗ್ರರ ದಾಳಿಯಿಂದ ಹುತಾತ್ಮರಾಗಿರುವ ಶಂಕೆ ವ್ಯಕ್ತವಾಗಿದೆ.

ಸುಂಜ್ವಾನ್ ಮಿಲಿಟರಿ ಶಿಬಿರದಲ್ಲಿ ಯೋಧರನ್ನು ಸೆಂಟ್ರಿ ಡ್ಯೂಟಿಗಾಗಿ ನಿಯೋಜನೆ ಮಾಡಲಾಗಿತ್ತು. ಇಂದು ಬೆಳಿಗ್ಗೆ ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಯೋಧ ಕಂಡು ಬಂದಿದ್ದಾರೆ. ಕೂಡಲೇ ಅವರನ್ನು ಮಿಲಿಟರಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಈ ನಡುವೆ ಉಗ್ರರ ದಾಳಿ ಕುರಿತು ಭಾರತೀಯ ಸೇನೆ ಶಂಕಿಸಿತ್ತು, ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಸೇನೆ ಹಾಗೂ ಪೊಲೀಸ್ ತಂಡದಿಂದ ಶೋಧ ಕಾರ್ಯಾಚರಣೆ ಆರಂಭವಾಗಿದೆ. ಜೊತೆಗೆ ಡ್ರೋನ್ ಮತ್ತು ಹೆಲಿಕಾಪ್ಟರ್ ಮೂಲಕ ವೈಮಾನಿಕ ಕಣ್ಗಾವಲನ್ನು ನಿಯೋಜಿಸಲಾಗಿದೆ.

ಉಗ್ರರು ಯೋಧನ ಹತ್ಯೆಗೆ ಸ್ನೈಪರ್‌ ಬಂದೂಕನ್ನು ಬಳಸಿದ್ದು, ನಂತರ ಘಟನಾ ಸ್ಥಳದಿಂದ ಪಲಾಯನ ಮಾಡಿದ್ದಾರೆ ಎಂದು ಭದ್ರತಾ ಅಧಿಕಾರಿಗಳು ಶಂಕಿಸಿದ್ದಾರೆ.

ದಿನವಿಡೀ ಶೋಧ ಕಾರ್ಯ ಮುಂದುವರೆದಿದ್ದು, ರಕ್ಷಣಾ ಮೂಲಗಳ ಪ್ರಕಾರ ಡ್ರೋನ್ ಮತ್ತು ಹೆಲಿಕಾಪ್ಟರ್ ಮೂಲಕ ಯಾವುದೇ ಶಂಕಿತ ಉಗ್ರಗಾಮಿಗಳ ಚಲನವಲನಗಳು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT