ಮನೀಶ್ ಸಿಸೋಡಿಯಾ 
ದೇಶ

ಶಿಕ್ಷಕರಿಗೆ ಐಎಎಸ್‌ ಅಧಿಕಾರಿಗಳಿಗಿಂತ ಹೆಚ್ಚು ವೇತನ ನೀಡಬೇಕು: ಸಿಸೋಡಿಯಾ

"ಹೆಚ್ಚಿನ ಅಭಿವೃದ್ಧಿ ಹೊಂದಿದ ದೇಶಗಳಲ್ಲಿ, ಶಿಕ್ಷಕರ ಸಂಬಳವು ಅಲ್ಲಿನ ಅಧಿಕಾರಶಾಹಿಗಳಿಗಿಂತ ಹೆಚ್ಚಾಗಿದೆ. ಐದು ವರ್ಷ ಅನುಭವ ಹೊಂದಿರುವ ಶಿಕ್ಷಕರು ಒಬ್ಬ ಐಎಎಸ್ ಅಧಿಕಾರಿಗಿಂತ ಹೆಚ್ಚಿನ ಸಂಬಳ ಪಡೆಯುತ್ತಾರೆ".

ನವದೆಹಲಿ: 2047 ರ ವೇಳೆಗೆ ಭಾರತವು ಅಭಿವೃದ್ಧಿ ಹೊಂದಿದ ದೇಶವಾಗಿ ಹೊರಹೊಮ್ಮಬೇಕಾದರೆ ಶಿಕ್ಷಕರ ವೇತನವು ಐಎಎಸ್ ಅಧಿಕಾರಿಗಿಂತ ಹೆಚ್ಚಾಗಬೇಕು ಎಂದು ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರು ಗುರುವಾರ ಹೇಳಿದ್ದಾರೆ.

ಇಂದು ಶಿಕ್ಷಕರ ದಿನಾಚರಣೆಯ ಅಂಗವಾಗಿ ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ ಆಯೋಜಿಸಿದ್ದ 'ಶಿಕ್ಷಕ ಸಮ್ಮಾನ್ ಸಮಾರೋಹ್' ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಶಿಕ್ಷಣ ಸಚಿವ, "ಇಂದು, 2047 ರ ಭಾರತದ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಇಲ್ಲಿ ಕುಳಿತಿರುವ ಶಿಕ್ಷಕರು, ನಿಮ್ಮೊಂದಿಗೆ ಇರುವ ಮಕ್ಕಳು 2047ಕ್ಕೆ ಬಹಳ ಮುಖ್ಯ. 2047ರ ಅಭಿವೃದ್ಧಿ ಹೊಂದಿದ ಭಾರತ ಈ ಮಕ್ಕಳ ಮೇಲೆ ಅವಲಂಬಿತವಾಗಿದೆ ಎಂದರು.

"ಹೆಚ್ಚಿನ ಅಭಿವೃದ್ಧಿ ಹೊಂದಿದ ದೇಶಗಳಲ್ಲಿ, ಶಿಕ್ಷಕರ ಸಂಬಳವು ಅಲ್ಲಿನ ಅಧಿಕಾರಶಾಹಿಗಳಿಗಿಂತ ಹೆಚ್ಚಾಗಿದೆ. ಐದು ವರ್ಷಗಳ ಅನುಭವ ಹೊಂದಿರುವ ಶಿಕ್ಷಕರು ಒಬ್ಬ ಐಎಎಸ್ ಅಧಿಕಾರಿಗಿಂತ ಹೆಚ್ಚಿನ ಸಂಬಳ ಪಡೆಯುತ್ತಾರೆ" ಎಂದು ಸಿಸೋಡಿಯಾ ಜರ್ಮನಿ, ಸ್ವಿಟ್ಜರ್ಲೆಂಡ್ ಮತ್ತು ಇತರ ಕೆಲವು ದೇಶಗಳ ಉದಾಹರಣೆ ನೀಡಿದರು.

ಇದೇ ವೇಳೆ ತಾವು ತಿಹಾರ್ ಜೈಲಿನಲ್ಲಿ ಬಂಧಿಯಾಗಿರುವ ಬಗ್ಗೆ ಮಾತನಾಡಿದ ಸಿಸೋಡಿಯಾ, ಪ್ರತಿದಿನ 8-10 ಗಂಟೆಗಳ ಕಾಲ ಪುಸ್ತಕಗಳನ್ನು ಓದುತ್ತಿದ್ದೆ ಮತ್ತು ವಿವಿಧ ದೇಶಗಳ ಶಿಕ್ಷಣ ವ್ಯವಸ್ಥೆಯನ್ನು ತಿಳಿದುಕೊಂಡೆ. "ಕಳೆದ ಒಂದೂವರೆ ವರ್ಷ ನಾನು ನನ್ನ ಜೀವನದ ಕಠಿಣ ಪರಿಸ್ಥಿತಿಯನ್ನು ಎದುರಿಸಿದ್ದೇನೆ ಎಂದರು.

ನಾವು ಕಷ್ಟಕರ ಸಂದರ್ಭಗಳಲ್ಲಿದ್ದಾಗ ನಮಗೆ ಶಿಕ್ಷಕರು ಕಲಿಸಿದ ಪಾಠಗಳು ಹೆಚ್ಚು ಉಪಯುಕ್ತವಾಗುತ್ತವೆ. ನಾನು ಜೈಲಿನಲ್ಲಿದ್ದಾಗ ಸಾಕಷ್ಟು ಅಧ್ಯಯನ ಮಾಡಿದ್ದೇನೆ. 8-10 ಗಂಟೆಗಳ ಕಾಲ ಪುಸ್ತಕಗಳನ್ನು ಓದುತ್ತಿದ್ದೆ. ಎಲ್ಲಕ್ಕಿಂತ ಹೆಚ್ಚಾಗಿ ಶಿಕ್ಷಣ, ಭಾರತದ ಶಿಕ್ಷಣ ವ್ಯವಸ್ಥೆ ಬಗ್ಗೆ, ವಿಶ್ವದ ಶಿಕ್ಷಣ ವ್ಯವಸ್ಥೆ ಬಗ್ಗೆ ಓದಿದ್ದೇನೆ ಎಂದರು.

ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸಿಸೋಡಿಯಾ 17 ತಿಂಗಳ ಕಾಲ ತಿಹಾರ್ ಜೈಲಿನಲ್ಲಿದ್ದರು. ಕಳೆದ ತಿಂಗಳು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟ್ರಂಪ್ ಎಚ್ಚರಿಕೆಗೆ ತಲೆಬಾಗದ ಇರಾನ್​: ಸೌದಿ ನೆಲೆಯಲ್ಲಿ ಕ್ಷಿಪಣಿ ದಾಳಿ; ಅಮೆರಿಕಾದ 5 ಟ್ಯಾಂಕರ್ ವಿಮಾನಗಳಿಗೆ ಹಾನಿ..!

ಮಂಡಿಯೂರಿದ ಕೇಂದ್ರ ಸರ್ಕಾರ: ಜೈಲಿನಲ್ಲಿದ್ದ Sonam Wangchuk ಗೆ ಕೊನೆಗೂ ಬಂಧನದಿಂದ ಮುಕ್ತಿ: ಕೇಂದ್ರ ಹೇಳಿದ್ದೇನು?

ಇರಾನ್ ಜೊತೆಗೆ ಸರಣಿ ಮಾತುಕತೆ: ಹಾರ್ಮುಜ್ ಜಲಸಂಧಿ ದಾಟಿದ LPG ಹೊತ್ತ ಭಾರತದ 2 ಹಡಗುಗಳು!

West Asia conflict effect: LPG ಕೊರತೆ ತೀವ್ರ; ಮನೆಗಳಲ್ಲಿ PNG, ಹೋಟೆಲ್ ಗಳು ಕಲ್ಲಿದ್ದಲು ಬಳಕೆ ಮಾಡುವಂತೆ ಕೇಂದ್ರ ಸರ್ಕಾರ ಸಲಹೆ

ಹೊಸ ಖಮೇನಿ ಭಯೋತ್ಪಾದಕ ನಾಯಕ; ಆತನ ಬಗ್ಗೆ ಮಾಹಿತಿ ನೀಡಿದವರಿಗೆ 10 ಮಿಲಿಯನ್ ಡಾಲರ್ ಬಹುಮಾನ: ಅಮೆರಿಕ

SCROLL FOR NEXT