ವಿಪಕ್ಷ ನಾಯಕ ರಾಹುಲ್ ಗಾಂಧಿ- ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ online desk
ದೇಶ

ಕಾಂಗ್ರೆಸ್ ಜತೆ ಮೈತ್ರಿ ಮಾತುಕತೆ ವಿಫಲ: ಹರಿಯಾಣದಲ್ಲಿ ಎಎಪಿ ಏಕಾಂಗಿಯಾಗಿ ಸ್ಪರ್ಧೆ ಸಾಧ್ಯತೆ

ಹರಿಯಾಣದಲ್ಲಿ 50 ಸ್ಥಾನಗಳಲ್ಲಿ ಸ್ಪರ್ಧಿಸಲು ಆಮ್ ಆದ್ಮಿ ಪಕ್ಷ ನಿರ್ಧರಿಸಿದ್ದು, ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡುವ ಸಾಧ್ಯತೆಯಿದೆ.

ನವದೆಹಲಿ: ಹರಿಯಾಣ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಮತ್ತು ಎಎಪಿ ನಡುವಿನ ಸೀಟು ಹಂಚಿಕೆ ಮಾತುಕತೆ ಬಹುತೇಕ ವಿಫಲವಾಗಿದ್ದು, ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ.

ಹರಿಯಾಣದಲ್ಲಿ 50 ಸ್ಥಾನಗಳಲ್ಲಿ ಸ್ಪರ್ಧಿಸಲು ಆಮ್ ಆದ್ಮಿ ಪಕ್ಷ ನಿರ್ಧರಿಸಿದ್ದು, ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡುವ ಸಾಧ್ಯತೆಯಿದೆ ಎಂದು ಎಎಪಿ ಮೂಲಗಳು ತಿಳಿಸಿವೆ.

"ಹರಿಯಾಣದಲ್ಲಿ ಮೈತ್ರಿ ಮಾತುಕತೆ ಪತನದ ಅಂಚಿನಲ್ಲಿದೆ ಮತ್ತು ಎಎಪಿ ರಾಜ್ಯದ 90 ವಿಧಾನಸಭಾ ಸ್ಥಾನಗಳಲ್ಲಿ 50 ಸ್ಥಾನಗಳಲ್ಲಿ ಸ್ವಂತವಾಗಿ ಸ್ಪರ್ಧಿಸಲು ಯೋಜಿಸುತ್ತಿದೆ" ಎಂದು ಎಎಪಿ ಮೂಲಗಳು ಹೇಳಿವೆ.

ಹರಿಯಾಣದಲ್ಲಿ ಎಎಪಿ 10 ವಿಧಾನಸಭಾ ಸ್ಥಾನಗಳಿಗೆ ಬೇಡಿಕೆ ಇಟ್ಟಿದ್ದರೆ, ಕಾಂಗ್ರೆಸ್ ಐದರಿಂದ ಏಳು ಸ್ಥಾನಗಳನ್ನು ನೀಡುತ್ತಿದೆ ಎಂದು ಪಕ್ಷದ ಒಳಗಿನವರು ಈ ಹಿಂದೆ ಹೇಳಿದ್ದರು. ಅಲ್ಲದೆ ಸೀಟು ಹಂಚಿಕೆ ವಿಚಾರದಲ್ಲಿ ಒಮ್ಮತ ಮೂಡಿಲ್ಲ ಎಂದು ಮೂಲಗಳು ತಿಳಿಸಿವೆ.

ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಎಎಪಿ ಮತ್ತು ಕಾಂಗ್ರೆಸ್ ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಹರಿಯಾಣ, ಗುಜರಾತ್ ಮತ್ತು ದೆಹಲಿಯಲ್ಲಿ ಒಟ್ಟಿಗೆ ಸ್ಪರ್ಧಿಸಿದ್ದವು.

ಹರಿಯಾಣದಲ್ಲಿ ಎಎಪಿಗೆ ಕುರುಕ್ಷೇತ್ರ ಲೋಕಸಭಾ ಸ್ಥಾನ ನೀಡಲಾಗಿತ್ತು. ಹರಿಯಾಣ ಎಎಪಿ ರಾಜ್ಯಾಧ್ಯಕ್ಷ ಸುಶೀಲ್ ಗುಪ್ತಾ ಅವರು ಕುರುಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿಯ ನವೀನ್ ಜಿಂದಾಲ್ ವಿರುದ್ಧ ಸೋತಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT