ಬಿಜೆಪಿ ಸೇರಿದ ಬಿಜೆಡಿ ಮಾಜಿ ಸಂಸದ ಸುಜೀತ್ ಕುಮಾರ್ 
ದೇಶ

ಬಿಜೆಡಿ ಮಾಜಿ ಸಂಸದ ಸುಜೀತ್ ಕುಮಾರ್ ಬಿಜೆಪಿ ಸೇರ್ಪಡೆ

ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಬಿಜೆಡಿ ಕುಮಾರ್ ಅವರನ್ನು ಉಚ್ಚಾಟಿಸಿದ ನಂತರ ಅವರು ಇಂದು ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದರು.

ನವದೆಹಲಿ: ಬಿಜು ಜನತಾ ದಳ(ಬಿಜೆಡಿ)ದ ರಾಜ್ಯಸಭಾ ಮಾಜಿ ಸದಸ್ಯ ಸುಜೀತ್ ಕುಮಾರ್ ಅವರು ಶುಕ್ರವಾರ ಬಿಜೆಪಿ ಹಿರಿಯ ನಾಯಕರ ಸಮ್ಮುಖದಲ್ಲಿ ಕೇಸರಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಬಿಜೆಡಿ ಕುಮಾರ್ ಅವರನ್ನು ಉಚ್ಚಾಟಿಸಿದ ನಂತರ ಅವರು ಇಂದು ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದರು.

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ಪಕ್ಷದ ಒಡಿಶಾ ಉಸ್ತುವಾರಿ ವಿಜಯಪಾಲ್ ಸಿಂಗ್ ತೋಮರ್, ಸಂಸದ ಭರ್ತೃಹರಿ ಮಹತಾಬ್ ಮತ್ತು ಇತರ ನಾಯಕರ ಸಮ್ಮುಖದಲ್ಲಿ ಸುಜೀತ್ ಕುಮಾರ್ ಅವರು ಬಿಜೆಪಿ ಸೇರ್ಪಡೆಯಾದರು.

ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕುಮಾರ್, ಪ್ರಧಾನಿ ನರೇಂದ್ರ ಮೋದಿಯವರ ಕೆಲಸ ಮತ್ತು 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶ ಮತ್ತು 2036ರ ವೇಳೆಗೆ ಒಡಿಶಾವನ್ನು ಅಭಿವೃದ್ಧಿ ಹೊಂದಿದ ರಾಜ್ಯವನ್ನಾಗಿ ಮಾಡುವ ಅವರ ದೂರದೃಷ್ಟಿಯಿಂದ ಪ್ರಭಾವಿತನಾಗಿ ಕೇಸರಿ ಪಕ್ಷಕ್ಕೆ ಸೇರಿದ್ದೇನೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!