ಸಂತೋಷ್ ಘೋಷ್ TNIE
ದೇಶ

ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ: ಡಾ. ಸಂದೀಪ್ ಘೋಷ್ ಆಪ್ತನಿಂದ 8 ಕೋಟಿ ರೂ. ಮೌಲ್ಯದ ಚಿನ್ನ ED ವಶ!

ಕೋಲ್ಕತ್ತಾ ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾ. ಘೋಷ್ ಸದ್ಯ ಸಿಬಿಐ ಕಸ್ಟಡಿಯಲ್ಲಿದ್ದಾರೆ.

ಕೋಲ್ಕತ್ತಾ: ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಡಾ.ಸಂದೀಪ್ ಘೋಷ್‌ಗೆ ಆಪ್ತರು ಎನ್ನಲಾದ ಉದ್ಯಮಿಯಿಂದ 8 ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ಜಾರಿ ನಿರ್ದೇಶನಾಲಯ (ಇಡಿ) ಶನಿವಾರ ವಶಪಡಿಸಿಕೊಂಡಿದೆ.

ಕೋಲ್ಕತ್ತಾ ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾ. ಘೋಷ್ ಸದ್ಯ ಸಿಬಿಐ ಕಸ್ಟಡಿಯಲ್ಲಿದ್ದಾರೆ. ಸಿಬಿಐ ಕೂಡ ಡಾ. ಘೋಷ್ ವಿರುದ್ಧ ಆಸ್ಪತ್ರೆಯಲ್ಲಿ ಹಲವು ಹಣಕಾಸು ಅಕ್ರಮಗಳ ಆರೋಪ ಹೊರಿಸಿದೆ. ಉದ್ಯಮಿಯನ್ನು ಅವರ ಸಾಲ್ಟ್ ಲೇಕ್ ಮನೆಯಿಂದ ಇಡಿ ಕರೆತಂದಿತ್ತು. ಅಲ್ಲದೆ ಡಾ. ಘೋಷ್ ವಿರುದ್ಧ ಆರೋಪಿಸಲಾಗಿರುವ ವೈದ್ಯಕೀಯ ಹಗರಣಗಳಿಂದ ಪಡೆದ ಅಕ್ರಮ ಹಣವನ್ನು ಇಟ್ಟುಕೊಂಡಿರುವ ಇತರ ಸಂಪರ್ಕಗಳನ್ನು ಸಹ ತನಿಖಾ ಸಂಸ್ಥೆ ಪರಿಶೀಲಿಸುತ್ತಿದೆ ಎಂದು ಹೇಳಿದರು.

ತನಿಖೆಯ ಭಾಗವಾಗಿ ಕೋಲ್ಕತ್ತಾ ಮತ್ತು ಹೌರಾ ಸೇರಿದಂತೆ ಅನೇಕ ಸ್ಥಳಗಳಲ್ಲಿ ಘೋಷ್ ಮತ್ತು ಅವರ ಮೂವರು ಸಹಚರರ ನಿವಾಸಗಳ ಮೇಲೆ ಇಡಿ ದಾಳಿ ನಡೆಸಿತು. ದಾಳಿಯ ನಂತರ, ಸಂಸ್ಥೆಯು ಡಾ ಘೋಷ್ ಅವರ ಆಪ್ತ ಸಹಾಯಕ ಪ್ರಸೂನ್ ಚಟರ್ಜಿಯನ್ನು ಬಂಧಿಸಿತು. ನ್ಯಾಷನಲ್ ಮೆಡಿಕಲ್ ಕಾಲೇಜಿನಲ್ಲಿ ಡೇಟಾ ಎಂಟ್ರಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಚಟರ್ಜಿಯನ್ನು ಪಶ್ಚಿಮ ಬಂಗಾಳದ ಕ್ಯಾನಿಂಗ್ ಟೌನ್‌ನಲ್ಲಿರುವ ಘೋಷ್ ಅವರ ಆಸ್ತಿಗೆ ಕರೆದೊಯ್ಯಲಾಯಿತು.

ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಳೆದ ತಿಂಗಳು ನಡೆದ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಗೆ ಸಂಬಂಧಿಸಿದಂತೆ ತೀವ್ರ ತಪಾಸಣೆಗೆ ಒಳಪಟ್ಟಿರುವ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಘೋಷ್ ಮತ್ತು ಇತರ ಮೂವರನ್ನು ಸಿಬಿಐ ಸೆಪ್ಟೆಂಬರ್ 2 ರಂದು ಬಂಧಿಸಿತ್ತು. ಘೋಷ್ ಅವರ ಭದ್ರತಾ ಸಿಬ್ಬಂದಿ ಅಫ್ಸರ್ ಅಲಿ (44), ಬಿಪ್ಲವ್ ಸಿಂಘಾ (52) ಮತ್ತು ಸುಮನ್ ಹಜಾರಾ (46) ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂದೀಪ್ ಘೋಷ್ ವಿರುದ್ಧ ಇಡಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಪ್ರಕರಣ ದಾಖಲಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಪ್ರಕರಣ: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT