ಬ್ರಿಜ್ ಭೂಷಣ್ ಸಿಂಗ್ 
ದೇಶ

ವಿನೇಶ್, ಬಜರಂಗ್ ಪೂನಿಯಾರನ್ನು ಪಾನ್ ನಂತೆ ಕಾಂಗ್ರೆಸ್ ಬಳಸಿಕೊಂಡಿದೆ: ಬ್ರಿಜ್ ಭೂಷಣ್ ಸಿಂಗ್

ಭಾರತದ ಕುಸ್ತಿ ಒಕ್ಕೂಟದ ಮೇಲೆ ಹಿಡಿತ ಸಾಧಿಸಲು, ಬಿಜೆಪಿ ಮತ್ತು ಅದರ ಸಿದ್ಧಾಂತದ ಮೇಲೆ ದಾಳಿ ಮಾಡಲು ಇವೆಲ್ಲವನ್ನೂ ಸಂಚು ಮಾಡಲಾಗಿತ್ತು. ರಾಹುಲ್, ಕಾಂಗ್ರೆಸ್ ತಂಡವು ಈ ಕೆಲಸವನ್ನು ಮಾಡುತ್ತಲೇ ಇದೆ ಎಂದು ಅವರು ಪಿಟಿಐ ಸುದ್ದಿಸಂಸ್ಥೆಗೆ ಹೇಳಿದರು.

ನವದೆಹಲಿ: ಭಾರತೀಯ ಕುಸ್ತಿ ಒಕ್ಕೂಟದ ಮೇಲೆ ಹಿಡಿತ ಸಾಧಿಸಲು ಮತ್ತು ಬಿಜೆಪಿ ಮೇಲೆ ದಾಳಿ ಮಾಡುವ ಪಿತ್ತೂರಿಯಿಂದ ಆಟದ ಪಾನ್ ನಂತೆ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪೂನಿಯಾ ಅವರನ್ನು ಕಾಂಗ್ರೆಸ್ ಬಳಸಿಕೊಂಡಿದೆ ಎಂದು ಡಬ್ಲ್ಯುಎಫ್‌ಐ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಶನಿವಾರ ಹೇಳಿದ್ದಾರೆ.

ಒಲಿಂಪಿಕ್ ಪದಕ ವಿಜೇತರಾದ ಫೋಗಟ್ ಮತ್ತು ಪುನಿಯಾ ಕಾಂಗ್ರೆಸ್‌ಗೆ ಸೇರಿದ ಬೆನ್ನಲ್ಲೇ ಮಾತನಾಡಿದ ಬಿಜೆಪಿಯ ಹಿರಿಯ ನಾಯಕರಾಗಿರುವ ಸಿಂಗ್, 2012 ರ WFI ಚುನಾವಣೆಯಲ್ಲಿ ಕಾಂಗ್ರೆಸ್‌ನ ದೀಪೇಂದರ್ ಹೂಡಾ ಅವರನ್ನು ಸೋಲಿಸಿದ್ದಕ್ಕಾಗಿ ತನ್ನ ವಿರುದ್ಧ ಅವರು ದ್ವೇಷ ಸಾಧಿಸುತ್ತಿದ್ದಾರೆ ಎಂದರು.

ಲೈಂಗಿಕ ಕಿರುಕುಳದ ಆರೋಪದ ತಿಭಟನೆ ನಡೆಸಿದ್ದ ಫೋಗಟ್ ಮತ್ತು ಪುನಿಯಾ ಕುರಿತು ಮಾತನಾಡಿದ ಬ್ರಿಜ್ ಭೂಷಣ್ ಸಿಂಗ್, ಅವರನ್ನು ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪೀಂದರ್ ಹೂಡಾ ಪಾನ್ ಗಳಂತೆ ಬಳಸಿಕೊಂಡಿದ್ದಾರೆ.

ಭಾರತದ ಕುಸ್ತಿ ಒಕ್ಕೂಟದ ಮೇಲೆ ಹಿಡಿತ ಸಾಧಿಸಲು, ಬಿಜೆಪಿ ಮತ್ತು ಅದರ ಸಿದ್ಧಾಂತದ ಮೇಲೆ ದಾಳಿ ಮಾಡಲು ಇವೆಲ್ಲವನ್ನೂ ಸಂಚು ಮಾಡಲಾಗಿತ್ತು. ರಾಹುಲ್, ಕಾಂಗ್ರೆಸ್ ತಂಡವು ಈ ಕೆಲಸವನ್ನು ಮಾಡುತ್ತಲೇ ಇದೆ ಎಂದು ಅವರು ಪಿಟಿಐ ಸುದ್ದಿಸಂಸ್ಥೆಗೆ ಹೇಳಿದರು.

ನಾನು ಲಕ್ನೋದಲ್ಲಿ ಇದ್ದ ಸಮಯದಲ್ಲಿ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ವಿನೇಶ್ ಫೋಗಟ್ ಆರೋಪಿಸಿದ್ದರು. ಸಮಯವು ಸತ್ಯವನ್ನು ಹೇಳುತ್ತದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT