ರಾಘವ ಚಡ್ಡಾ 
ದೇಶ

ಹರಿಯಾಣ ಚುನಾವಣೆ: ಕಾಂಗ್ರೆಸ್ ನೊಂದಿಗೆ AAP ಸೀಟು ಹಂಚಿಕೆ ಬಹುತೇಕ ಅಂತಿಮ, 5 ಸ್ಥಾನಗಳಲ್ಲಿ ಸ್ಪರ್ಧೆ

ಮೈತ್ರಿ ಬಗ್ಗೆ ಪಕ್ಷಗಳು ಇನ್ನೂ ಒಮ್ಮತಕ್ಕೆ ಬರದಿದ್ದರೂ, ಮಾತುಕತೆಗಳು ಸಕಾರಾತ್ಮಕ" ದಿಕ್ಕಿನಲ್ಲಿ ಸಾಗಿದ್ದು, ಉತ್ತಮ ಫಲಿತಾಂಶದ ಭರವಸೆಯಿದೆ.

ನವದೆಹಲಿ: ಅಕ್ಟೋಬರ್ 5 ರಂದು ನಡೆಯಲಿರುವ ಹರಿಯಾಣ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಜೊತೆಗಿನ ಸೀಟು ಹಂಚಿಕೆಯನ್ನು AAP ಅಂತಿಮಗೊಳಿಸಿದ್ದು, ಐದು ಸ್ಥಾನಗಳಲ್ಲಿ ಸ್ಪರ್ಧಿಸಲು ಒಪ್ಪಿಗೆ ಸೂಚಿಸಿದೆ ಎಂದು ಪಕ್ಷದ ಮೂಲಗಳು ಭಾನುವಾರ ತಿಳಿಸಿವೆ. ಸೋಮವಾರ ಮೈತ್ರಿ ಘೋಷಣೆಯಾಗುವ ಸಾಧ್ಯತೆಯಿರುವುದಾಗಿ AAP ಮೂಲಗಳು ಹೇಳಿವೆ.

"ಕಾಂಗ್ರೆಸ್‌ನ ದೀಪಕ್ ಬಬಾರಿಯಾ ಮತ್ತು ಎಎಪಿ ನಾಯಕ ರಾಘವ್ ಚಡ್ಡಾ ನಡುವಿನ ಮಾತುಕತೆ ಸಕಾರಾತ್ಮಕ ದಿಕ್ಕಿನಲ್ಲಿ ಸಾಗಿದ್ದು, ನಾಳೆ ವೇಳೆಗೆ ಮೈತ್ರಿ ಅಂತಿಮಗೊಳ್ಳುವ ಸಾಧ್ಯತೆಗಳಿವೆ. ರಾಜ್ಯದಲ್ಲಿ ಐದು ಸ್ಥಾನಗಳಲ್ಲಿ ಸ್ಪರ್ಧಿಸಲು ಎಎಪಿ ಒಪ್ಪಿಗೆ ನೀಡಿದೆ ಎಂದು ಎಎಪಿ ಮೂಲಗಳು ತಿಳಿಸಿವೆ.

ಇದಕ್ಕೂ ಮುನ್ನ ಮಾತನಾಡಿದ ಎಎಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ, ಕಾಂಗ್ರೆಸ್ ಮತ್ತು AAP ಎರಡೂ ತಮ್ಮ ವೈಯಕ್ತಿಕ ಆಕಾಂಕ್ಷೆಗಳನ್ನು ಬದಿಗಿಟ್ಟು ಹರಿಯಾಣ ಚುನಾವಣೆಗೆ ಮೈತ್ರಿ ಮಾಡಿಕೊಳ್ಳಲು ಪ್ರಯತ್ನಿಸುತ್ತಿವೆ.

ಮೈತ್ರಿ ಬಗ್ಗೆ ಪಕ್ಷಗಳು ಇನ್ನೂ ಒಮ್ಮತಕ್ಕೆ ಬರದಿದ್ದರೂ, ಮಾತುಕತೆಗಳು ಸಕಾರಾತ್ಮಕ" ದಿಕ್ಕಿನಲ್ಲಿ ಸಾಗಿದ್ದು, ಉತ್ತಮ ಫಲಿತಾಂಶದ ಭರವಸೆಯಿದೆ. ಆದಾಗ್ಯೂ, win-win ಪರಿಸ್ಥಿತಿ ಇಲ್ಲದಿದ್ದರೆ" ಎಎಪಿ ಮೈತ್ರಿಯೊಂದಿಗೆ ಮುಂದುವರಿಯುವುದಿಲ್ಲ ಎಂದು ಅವರು ಹೇಳಿದರು.

ಮಾತುಕತೆಗಳು ಸಕಾರಾತ್ಮಕವಾಗಿ ಸಾಗುತ್ತಿದ್ದು, ಎರಡೂ ಪಕ್ಷಗಳು ಒಟ್ಟಾಗಿ ಚುನಾವಣೆಗಳನ್ನು ಎದುರಿಸಲು ಕೆಲಸ ಮಾಡುತ್ತಿವೆ. ಪ್ರತ್ಯೇಕ ಪಕ್ಷ ಮತ್ತು ಅಭ್ಯರ್ಥಿಗಳ ಆಕಾಂಕ್ಷೆಗಳನ್ನು ಬದಿಗಿಟ್ಟು ಒಗ್ಗಟ್ಟು ಮತ್ತು ಹರಿಯಾಣದ ಜನರ ಬೇಡಿಕೆಗಳಿಗೆ ಆದ್ಯತೆ ನೀಡುತ್ತೇವೆ ಎಂದು ಅವರು ಪಿಟಿಐ ವಿಡಿಯೋಗಳಿಗೆ ತಿಳಿಸಿದ್ದಾರೆ. 90 ಸದಸ್ಯ ಬಲದ ಹರಿಯಾಣ ವಿಧಾನಸಭೆಗೆ ಅಕ್ಟೋಬರ್ 5 ರಂದು ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ಸೆಪ್ಟೆಂಬರ್ 12 ಕೊನೆಯ ದಿನವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ