ಅಜಿತ್ ದೋವಲ್ online desk
ದೇಶ

Ukraine war: ಶಾಂತಿ ಮಾತುಕತೆಗಾಗಿ ರಷ್ಯಾಗೆ Ajit Doval ಭೇಟಿ

ಕಳೆದ ಎರಡು ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಮತ್ತು ಉಕ್ರೇನ್‌ಗೆ ಭೇಟಿ ನೀಡಿದ ಬೆನ್ನಲ್ಲೇ ಈ ಬೆಳವಣಿಗೆಗಳು ಆರಂಭವಾಗಿವೆ.

ನವದೆಹಲಿ: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಮುಂದುವರೆದಿರುವಂತೆಯೇ ಇತ್ತ ಉಭಯ ದೇಶಗಳ ನಡುವಿನ ಶಾಂತಿ ಮಾತುಕತೆ ಕುರಿತ ಸಂಧಾನಕ್ಕಾಗಿ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ರಷ್ಯಾಗೆ ದೌಡಾಯಿಸಿದ್ದಾರೆ.

ಮೂಲಗಳ ಪ್ರಕಾರ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಈ ವಾರ ರಷ್ಯಾ-ಉಕ್ರೇನ್ ಯುದ್ಧಕ್ಕೆ ಶಾಂತಿಯುತ ಪರಿಹಾರವನ್ನು ಸಾಧಿಸುವ ಕುರಿತು ಮಾತುಕತೆಗಾಗಿ ರಷ್ಯಾಕ್ಕೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಳೆದ ಎರಡು ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಮತ್ತು ಉಕ್ರೇನ್‌ಗೆ ಭೇಟಿ ನೀಡಿದ ಬೆನ್ನಲ್ಲೇ ಈ ಬೆಳವಣಿಗೆಗಳು ಆರಂಭವಾಗಿವೆ.

ಶಾಂತಿ ಪ್ರಯತ್ನಗಳಲ್ಲಿ ಭಾರತದ ಪ್ರಧಾನಿ ಮೋದಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಈ ಜುಲೈನಲ್ಲಿ ರಷ್ಯಾಕ್ಕೆ ಭೇಟಿ ನೀಡಿದ್ದ ಮೋದಿ ಅವರು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ "ಇದು ಯುದ್ಧದ ಯುಗವಲ್ಲ" ಎಂದು ಪುನರುಚ್ಚರಿಸಿದ್ದರು.

ಒಂದು ತಿಂಗಳ ನಂತರ, ಮೋದಿ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಕೀವ್‌ನಲ್ಲಿ ಭೇಟಿಯಾಗಿದ್ದರು. ಈ ವೇಳೆ ಶಾಂತಿಗಾಗಿ ಭಾರತದ ಬದ್ಧತೆಯನ್ನು ಪುನರುಚ್ಚರಿಸಿದ್ದರು.

ಗುರುವಾರ, ರಷ್ಯಾದ ನಗರವಾದ ವ್ಲಾಡಿವೋಸ್ಟಾಕ್‌ನಲ್ಲಿ ಈಸ್ಟರ್ನ್ ಎಕನಾಮಿಕ್ ಫೋರಂನಲ್ಲಿ ಪ್ಯಾನೆಲ್ ಚರ್ಚೆಯಲ್ಲಿ ಮಾತನಾಡಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಉಕ್ರೇನ್ ಸಂಘರ್ಷದ ಕುರಿತು ಭಾರತ, ಬ್ರೆಜಿಲ್ ಮತ್ತು ಚೀನಾದೊಂದಿಗೆ ಸಂಪರ್ಕದಲ್ಲಿರುವುದಾಗಿ ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

SCROLL FOR NEXT