ಹಿಮಂತ್ ಬಿಸ್ವಾ ಶರ್ಮಾ 
ದೇಶ

NRCಗೆ ಅರ್ಜಿ ಸಲ್ಲಿಸದಿದ್ರೆ ಆಧಾರ್‌ ಕಾರ್ಡ್‌ ಇಲ್ಲ: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಘೋಷಣೆ

ರಾಜ್ಯದಲ್ಲಿ ಆಧಾರ್ ಕಾರ್ಡ್‌ಗಾಗಿ ಹೊಸ ಅರ್ಜಿದಾರರು ತಮ್ಮ ರಾಷ್ಟ್ರೀಯ ನಾಗರಿಕರ ನೋಂದಣಿ ಅರ್ಜಿ ರಶೀದಿ ಸಂಖ್ಯೆಯನ್ನು ಸಲ್ಲಿಸಬೇಕು. ಆಧಾರ್ ಕಾರ್ಡ್‌ಗಾಗಿ ಅರ್ಜಿಗಳು ಜನಸಂಖ್ಯೆಗಿಂತ ಹೆಚ್ಚಿವೆ. ಅನುಮಾನಾಸ್ಪದ ನಾಗರಿಕರಿದ್ದಾರೆ ಎಂಬುದನ್ನು ಇದು ಸೂಚಿಸುತ್ತದೆ.

ಗುವಾಹಟಿ: 2014 ರಲ್ಲಿ ರಾಷ್ಟ್ರೀಯ ನಾಗರಿಕರ ನೋಂದಣಿ ಭಾಗವಾಗಲು ಅರ್ಜಿ ಸಲ್ಲಿಸದ ಜನರಿಗೆ ಆಧಾರ್ ಕಾರ್ಡ್‌ಗಳನ್ನು ನೀಡದಿರುವ ಸರ್ಕಾರದ ನಿರ್ಧಾರವನ್ನು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಪ್ರಕಟಿಸಿದ್ದಾರೆ.

ರಾಜ್ಯದಲ್ಲಿ ಆಧಾರ್ ಕಾರ್ಡ್‌ಗಾಗಿ ಹೊಸ ಅರ್ಜಿದಾರರು ತಮ್ಮ ರಾಷ್ಟ್ರೀಯ ನಾಗರಿಕರ ನೋಂದಣಿ ಅರ್ಜಿ ರಶೀದಿ ಸಂಖ್ಯೆಯನ್ನು ಸಲ್ಲಿಸಬೇಕು. ಆಧಾರ್ ಕಾರ್ಡ್‌ಗಾಗಿ ಅರ್ಜಿಗಳು ಜನಸಂಖ್ಯೆಗಿಂತ ಹೆಚ್ಚಿವೆ. ಅನುಮಾನಾಸ್ಪದ ನಾಗರಿಕರಿದ್ದಾರೆ ಎಂಬುದನ್ನು ಇದು ಸೂಚಿಸುತ್ತದೆ. ಹೊಸ ಅರ್ಜಿದಾರರು ತಮ್ಮ ಎನ್‌ಆರ್‌ಸಿ ಅರ್ಜಿ ರಶೀದಿ ಸಂಖ್ಯೆಯನ್ನು ಸಲ್ಲಿಸಬೇಕು ಎಂದು ನಾವು ನಿರ್ಧರಿಸಿದ್ದೇವೆ” ಎಂದು ಶರ್ಮಾ ಹೇಳಿದ್ದಾರೆ.

ಧುಬ್ರಿ, ಬಾರ್ಪೇಟಾ, ಮೊರಿಗಾಂವ್‌ ಜಿಲ್ಲೆಗಳಲ್ಲಿ ಒಟ್ಟು ಆಧಾರ್‌ ಕಾರ್ಡ್‌ಗಳ ಸಂಖ್ಯೆ ಅಲ್ಲಿನ ಜನಸಂಖ್ಯೆಯನ್ನೂ ಮೀರಿದೆ. ಈ ಮೂರು ಜಿಲ್ಲೆಗಳಲ್ಲಿ ಮುಸ್ಲಿಂ ಬಹುಸಂಖ್ಯಾತರು, ಯೋಜಿತ ಜನಸಂಖ್ಯೆಯ ಅಂಕಿಅಂಶಗಳಿಗೆ ವಿರುದ್ಧವಾಗಿ ನೀಡಲಾದ ಆಧಾರ್ ಕಾರ್ಡ್‌ಗಳ ಶೇಕಡಾವಾರು ಪ್ರಮಾಣವು ಕ್ರಮವಾಗಿ ಧುಬ್ರಿ, ಬಾರ್ಪೇಟಾ ಮತ್ತು ಮೊರಿಗಾಂವ್‌ಗೆ 103%, 103% ಮತ್ತು 101% ಆಗಿದೆ. ಆದ್ದರಿಂದ, ಈ ಜಿಲ್ಲೆಗಳಲ್ಲಿ ಶಂಕಿತ ವಿದೇಶಿಗರು ಸಹ ಆಧಾರ್ ಕಾರ್ಡ್‌ಗಳನ್ನು ಪಡೆದು ಪ್ರವೇಶಿಸಿದ್ದಾರೆ ಎಂದು ತೀರ್ಮಾನಿಸಬಹುದೆಂದು ತಿಳಿಸಿದ್ದಾರೆ.

ಭವಿಷ್ಯದಲ್ಲಿ ಆಧಾರ್ ಕಾರ್ಡ್‌ಗಳ ವಿತರಣೆಗಾಗಿ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೋಟೋಕಾಲ್ ಅನ್ನು ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದು 2015 ರಲ್ಲಿ ಅರ್ಜಿ ಸಲ್ಲಿಸುವಾಗ ಅವರಿಗೆ ಒದಗಿಸಲಾದ ತಮ್ಮ ಎನ್‌ಆರ್‌ಸಿ ಅರ್ಜಿ ಸಂಖ್ಯೆಯನ್ನು ಕಡ್ಡಾಯವಾಗಿ ಒದಗಿಸುವಂತೆ ಮಾಡುತ್ತದೆ ಎಂದು ಮಾಹಿತಿ ನೀಡಿದ್ದಾರೆ. 3.3 ಕೋಟಿ ಜನರ ಪಟ್ಟಿಯಲ್ಲಿಲ್ಲದ ಎನ್‌ಆರ್‌ಸಿಗೆ ಅರ್ಜಿ ಸಲ್ಲಿಸಿದವರಿಗೆ ಆಧಾರ್ ಕಾರ್ಡ್‌ಗಳನ್ನು ನೀಡಲಾಗುವುದಿಲ್ಲ ಎಂದು ಶರ್ಮಾ ಸೂಚಿಸಿದ್ದಾರೆ.

ಈ ಕ್ರಮವು “ಅಕ್ರಮ ವಿದೇಶಿಗರ ಒಳಹರಿವನ್ನು ತಡೆಯುತ್ತದೆ ಮತ್ತು ಆಧಾರ್ ಕಾರ್ಡ್‌ಗಳನ್ನು ನೀಡುವಲ್ಲಿ ರಾಜ್ಯ ಸರ್ಕಾರವು “ಅತ್ಯಂತ ಕಟ್ಟುನಿಟ್ಟಾಗಿ” ಇರುತ್ತದೆ. ಅಸ್ಸಾಂನಲ್ಲಿ ಆಧಾರ್ ಪಡೆಯುವುದು ಸುಲಭವಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

“ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಪ್ರಕ್ರಿಯೆಯಲ್ಲಿ ಬಯೋಮೆಟ್ರಿಕ್ಸ್ ಲಾಕ್ ಆಗಿರುವ 9.55 ಲಕ್ಷ ಜನರಿಗೆ ಎನ್‌ಆರ್‌ಸಿ ಅರ್ಜಿ ರಶೀದಿ ಸಂಖ್ಯೆಯನ್ನು ಸಲ್ಲಿಸುವುದು ಅನ್ವಯಿಸುವುದಿಲ್ಲ ಮತ್ತು ಅವರು ತಮ್ಮ ಕಾರ್ಡ್‌ಗಳನ್ನು ಪಡೆಯುತ್ತಾರೆ ಎಂದಿದ್ದಾರೆ ಶರ್ಮಾ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT