ಹಳಿ ಮೇಲೆ ಗ್ಯಾಸ್ ಸಿಲಿಂಡರ್ ಇಟ್ಟ ದುಷ್ಕರ್ಮಿಗಳು 
ದೇಶ

Kalindi Express: ರೈಲು ಹಳಿ ತಪ್ಪಿಸಲು ಟ್ರ್ಯಾಕ್ ಮೇಲೆ ಗ್ಯಾಸ್ ಸಿಲಿಂಡರ್ ಇಟ್ಟ ದುಷ್ಕರ್ಮಿಗಳು!

ರೈಲು ಬಡಿದು ಸಿಲಿಂಡರ್​ ದೂರಕ್ಕೆ ಹಾರಿದೆ. ಅದೃಷ್ಟವಶಾತ್​​ ಸಂಭಾವ್ಯ ಅನಾಹುತ ತಪ್ಪಿ ರೈಲು ಸುರಕ್ಷಿತವಾಗಿದೆ.

ಲಖನೌ: ರೈಲು ಹಳಿ ತಪ್ಪಿಸಲು ಟ್ರ್ಯಾಕ್ ಮೇಲೆ ದುಷ್ಕರ್ಮಿಗಳು ಗ್ಯಾಸ್ ಸಿಲಿಂಡರ್ ಇಟ್ಟಿರುವ ವಿಕೃತ ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ.

ಉತ್ತರ ಪ್ರದೇಶದ ಪ್ರಯಾಗ್​ರಾಜ್​ ಮಾರ್ಗವಾಗಿ ಭಿವಾನಿಗೆ ತೆರಳುತ್ತಿದ್ದ ಕಾಳಿಂದಿ ಎಕ್ಸ್​ಪ್ರೆಸ್​​​ ರೈಲು ತೆರಳುವ ಹಳಿಗಳ ಮೇಲೆ ದುಷ್ಕರ್ಮಿಗಳು ಎಲ್​ಪಿಜಿ ಗ್ಯಾಸ್​ ಸಿಲಿಂಡರ್​ ಇಟ್ಟಿದ್ದು, ಲೋಕೋ ಪೈಲಟ್‌ ಇದನ್ನು ಗಮನಿಸಿ ತಕ್ಷಣ ತುರ್ತು ಬ್ರೇಕ್​ ಹಾಕಿದ್ದಾರೆ.

ಈ ವೇಳೆ ಉಂಟಾದ ಘರ್ಷಣೆಯ ಹಿನ್ನೆಲೆಯಲ್ಲಿ ರೈಲು ಬಡಿದು ಸಿಲಿಂಡರ್​ ದೂರಕ್ಕೆ ಹಾರಿದೆ. ಅದೃಷ್ಟವಶಾತ್​​ ಸಂಭಾವ್ಯ ಅನಾಹುತ ತಪ್ಪಿ ರೈಲು ಸುರಕ್ಷಿತವಾಗಿದೆ.

ಮೂಲಗಳ ಪ್ರಕಾರ ಇಲ್ಲಿನ ಶಿವರಾಜ್ಪುರ ಪ್ರದೇಶದಲ್ಲಿ ಭಾನುವಾರ ಈ ಘಟನೆ ನಡೆದಿದ್ದು, ರೈಲು ಅಪಘಾತ ನಡೆಸುವ ದುರುದ್ದೇಶದಿಂದ ಹಳಿಯ ಮೇಲೆ ಸಿಲಿಂಡರ್​ ಇಡಲಾಗಿತ್ತು ಎಂದು ತಿಳಿದುಬಂದಿದೆ. ವಿಚಾರ ತಿಳಿದ ಕೂಡಲೇ ಹಿರಿಯ ರೈಲ್ವೇ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿದ್ದಾರೆ. ರೈಲ್ವೆ ರಕ್ಷಣಾ ದಳ (ಆರ್‌ಪಿಎಫ್​) ವಿಧಿ ವಿಜ್ಞಾನ ತಂಡವನ್ನೂ ಸ್ಥಳಕ್ಕೆ ಕರೆಸಿ ತನಿಖೆ ನಡೆಸಿದ್ದಾರೆ.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕಾನೂನು ಮತ್ತು ಸುವ್ಯವಸ್ಥೆ ಎಸಿಪಿ ಹರೀಶ್​ ಚಂದ್ರ ಅವರು, "ಹಳಿಗಳ ಮೇಲೆ ಇಡಲಾಗಿದ್ದ ಎಲ್‌ಪಿಜಿ ಸಿಲಿಂಡರ್​ ಅನ್ನು ಲೋಕೋ ಪೈಲಟ್​​ ಗಮನಿಸಿ ತುರ್ತು ಬ್ರೇಕ್​ ಹಾಕಿದ್ದಾರೆ. ಘರ್ಷಣೆಯಿಂದಾಗಿ ಸಿಲಿಂಡರ್​ಗೆ ಬದಿಗೆ ಸರಿದಿದೆ.

ಲೋಕೋ ಪೈಲಟ್​ ಈ ಬಗ್ಗೆ ಗಾರ್ಡ್​ ಮತ್ತು ಗೇಟ್​ಮ್ಯಾನ್​ಗೆ ಮಾಹಿತಿ ನೀಡಿದ್ದಾರೆ. ಇದರಿಂದಾಗಿ ರೈಲು ಶಿವರಾಜ್ಫುರ ಪ್ರದೇಶದಲ್ಲಿ 20 ನಿಮಿಷ ರೈಲು ನಿಂತಿತ್ತು. ಪ್ರಸ್ತುತ ಸಿಲಿಂಡರ್​ ವಶಕ್ಕೆ ಪಡೆಯಲಾಗಿದೆ. ಸ್ಥಳದಲ್ಲಿದ್ದ ಪೆಟ್ರೋಲ್​ ಮತ್ತು ಬೆಂಕಿಪೊಟ್ಟಣವನ್ನೂ ಜಪ್ತಿ ಮಾಡಲಾಗಿದೆ. ತಪ್ಪಿತಸ್ಥರನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದ್ದು, ಕಠಿಣ ಕ್ರಮ ಕೈಗೊಳ್ಳಲಾಗುವುದು" ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT