ಸುಪ್ರೀಂಕೋರ್ಟ್ 
ದೇಶ

Kolkata Rape and murder: ವೈದ್ಯರ ಮುಷ್ಕರದಿಂದಾಗಿ 23 ಮಂದಿ ಸಾವು; ಸುಪ್ರೀಂ ಕೋರ್ಟ್ ಗೆ ಬಂಗಾಳ ಸರ್ಕಾರ ಮಾಹಿತಿ!

ಆಗಸ್ಟ್ 22 ರಂದು ಕೋರ್ಟ್ ವಿಚಾರಣೆ ವೇಳೆ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ಅತ್ಯಾಚಾರ ಮತ್ತು ಹತ್ಯೆಗೀಡಾದ ಮಹಿಳಾ ವೈದ್ಯೆಯ ಅಸಹಜ ಸಾವನ್ನು ದಾಖಲಿಸುವಲ್ಲಿ ವಿಳಂಬವಾದ ಬಗ್ಗೆ ಸುಪ್ರೀಂ ಕೋರ್ಟ್ ಕೋಲ್ಕತ್ತಾ ಪೊಲೀಸರನ್ನು ಮತ್ತು ಬಂಗಾಳ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು.

ನವದೆಹಲಿ: ಕೋಲ್ಕತಾದ ವೈದ್ಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಹಿನ್ನಲೆಯಲ್ಲಿ ನಡೆದ ವೈದ್ಯರ ಮುಷ್ಕರದಿಂದಾಗಿ ಈವರೆಗೂ 23 ಮಂದಿ ಸಾವಿಗೀಡಾಗಿದ್ದಾರೆ ಎಂದು ಪಶ್ಚಿಮ ಬಂಗಾಳ ಸರ್ಕಾರ ಸುಪ್ರೀಂ ಕೋರ್ಟ್ ಗೆ ಸೋಮವಾರ ಮಾಹಿತಿ ನೀಡಿದೆ.

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ವೈದ್ಯೆಯೊಬ್ಬರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತ ಪ್ರಕರಣದ ವಿಚಾರಣೆಯನ್ನು ಪುನಾರಂಭಿಸಿದ್ದು, ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸುತ್ತಿದೆ.

ಇಂದಿನಿಂದ ಸುಪ್ರೀಂ ಕೋರ್ಟ್ ನಲ್ಲಿ ಕೋಲ್ಕತಾದ ವೈದ್ಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಚಾರಣೆ ಪುನಾರಂಭಗೊಂಡಿದ್ದು, ಈ ವೇಳೆ ಬಂಗಾಳ ಸರ್ಕಾರದ ಪರ ವಾದ ಮಂಡಿಸುತ್ತಿರುವ ಹಿರಿಯ ವಕೀಲ ಕಪಿಲ್ ಸಿಬಲ್ ಅವರು, ರಾಜ್ಯ ಆರೋಗ್ಯ ಇಲಾಖೆ ಸಲ್ಲಿಸಿದ ಸ್ಥಿತಿಗತಿ ವರದಿಯನ್ನು ಪೀಠದ ಮುಂದೆ ಸಲ್ಲಿಸಿದರು. ಇದರಲ್ಲಿ ವೈದ್ಯರು ಮುಷ್ಕರ ನಡೆಸುತ್ತಿರುವ ಕಾರಣ 23 ಜನರು ಸಾವನ್ನಪ್ಪಿದ್ದಾರೆ ಎಂದು ತಮ್ಮ ವಾದ ಮಂಡಿಸಿದ್ದಾರೆ.

ಬಂಗಾಳ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದ ಸುಪ್ರೀಂ ಕೋರ್ಟ್

ಈ ಹಿಂದಿನ ವಿಚಾರಣೆಯಲ್ಲಿ ಅಂದರೆ ಆಗಸ್ಟ್ 22 ರಂದು ಕೋರ್ಟ್ ವಿಚಾರಣೆ ವೇಳೆ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ಅತ್ಯಾಚಾರ ಮತ್ತು ಹತ್ಯೆಗೀಡಾದ ಮಹಿಳಾ ವೈದ್ಯೆಯ ಅಸಹಜ ಸಾವನ್ನು ದಾಖಲಿಸುವಲ್ಲಿ ವಿಳಂಬವಾದ ಬಗ್ಗೆ ಸುಪ್ರೀಂ ಕೋರ್ಟ್ ಕೋಲ್ಕತ್ತಾ ಪೊಲೀಸರನ್ನು ಮತ್ತು ಬಂಗಾಳ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು.

ಅಲ್ಲದೆ ಇದು "ಅತ್ಯಂತ ಗೊಂದಲ" ಎಂದು ಕರೆದಿತ್ತು ಮತ್ತು ಘಟನೆಗಳ ಅನುಕ್ರಮವನ್ನು ಪ್ರಶ್ನಿಸಿತ್ತು. ವೈದ್ಯರು ಮತ್ತು ಇತರ ಆರೋಗ್ಯ ವೃತ್ತಿಪರರ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಪ್ರೋಟೋಕಾಲ್ ಅನ್ನು ರೂಪಿಸಲು ಉನ್ನತ ನ್ಯಾಯಾಲಯವು ಈ ಹಿಂದೆ 10 ಸದಸ್ಯರ ರಾಷ್ಟ್ರೀಯ ಕಾರ್ಯಪಡೆ (NTF) ಅನ್ನು ಕೂಡ ರಚಿಸಿತ್ತು.

ಘಟನೆಯನ್ನು "ಭಯಾನಕ" ಎಂದು ಬಣ್ಣಿಸಿದ ಸುಪ್ರೀಂ ಕೋರ್ಟ್, ಎಫ್‌ಐಆರ್ ದಾಖಲಿಸುವಲ್ಲಿ ವಿಳಂಬ ಮತ್ತು ಸಾವಿರಾರು ಪ್ರತಿಭಟನಾಕಾರರಿಗೆ ಸಾರ್ವಜನಿಕ ಆಸ್ತಿ ಮತ್ತು ಸೌಲಭ್ಯವನ್ನು ಧ್ವಂಸ ಮಾಡಲು ಅವಕಾಶ ನೀಡಿದ ಬಗ್ಗೆ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT