ಪ್ರತಿಭಟನಾನಿರತ ವೈದ್ಯರ ಚಿತ್ರ 
ದೇಶ

ಆರ್ ಜಿ ಕಾರ್ ಆಸ್ಪತ್ರೆ ಪ್ರಕರಣ: ಸಾಕ್ಷ್ಯಾಧಾರಗಳ ಕೊರತೆ, ಸಿಬಿಐ ತನಿಖೆ ಮೇಲೆ ಪರಿಣಾಮ!

ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಡಾ.ಸಂದೀಪ್ ಘೋಷ್ ಆಗಸ್ಟ್ 10 ರಂದು ಆ ಸೆಮಿನಾರ್ ಕೊಠಡಿಯ ಸಮೀಪವಿರುವ ವಿಶ್ರಾಂತಿ ಕೊಠಡಿ ಮತ್ತು ಶೌಚಾಲಯವನ್ನು ಕೆಡವಲು ಆದೇಶಿಸಿದ್ದರು ಎಂಬುದು ತನಿಖೆ ವೇಳೆ ಕಂಡುಬಂದಿದೆ.

ಕಲ್ಕತ್ತಾ: ಇಲ್ಲಿನ ಸರ್ಕಾರಿ ಆರ್ ಜಿ ಕಾರ್ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯ ಟ್ರೈನಿ ಮಹಿಳಾ ಡಾಕ್ಟರ್ ಮೇಲಿನ ಅತ್ಯಾಚಾರ ಹಾಗೂ ಕೊಲೆ ಘಟನೆ ನಡೆದು 30 ದಿನಗಳು ಕಳೆದರೂ ಈ ಅಪರಾಧಕ್ಕೆ ಕಾರಣವೇನು ಎಂಬುದರ ಕುರಿತು ತನಿಖಾಧಿಕಾರಿಗಳಿಗೆ ಇನ್ನೂ ಸುಳಿವು ಸಿಕ್ಕಿಲ್ಲ.

ಆಗಸ್ಟ್ 9 ರಂದು ಆಸ್ಪತ್ರೆಯ ಸೆಮಿನಾರ್ ಕೊಠಡಿಯಲ್ಲಿ ಟ್ರೈನಿ ವೈದ್ಯರ ಶವ ಪತ್ತೆಯಾಗಿತ್ತು. ಆಗಸ್ಟ್ 13 ರಂದು ಕಲ್ಕತ್ತಾ ಪೊಲೀಸರಿಂದ ತನಿಖೆಯನ್ನು ಹೈಕೋರ್ಟ್ ವರ್ಗಾಯಿಸಿದ ನಂತರ ಸಿಬಿಐ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿತು. ಆದರೆ ಅಪರಾಧದ ಸ್ಥಳದಿಂದ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಏನನ್ನೂ ಸೇರಿಸಲು ಸಾಧ್ಯವಾಗುವುದಿಲ್ಲ. ಇದು ತನಿಖೆ ಮೇಲೆ ಪರಿಣಾಮ ಬೀರಿದೆ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಡಾ.ಸಂದೀಪ್ ಘೋಷ್ ಆಗಸ್ಟ್ 10 ರಂದು ಆ ಸೆಮಿನಾರ್ ಕೊಠಡಿಯ ಸಮೀಪವಿರುವ ವಿಶ್ರಾಂತಿ ಕೊಠಡಿ ಮತ್ತು ಶೌಚಾಲಯವನ್ನು ಕೆಡವಲು ಆದೇಶಿಸಿದ್ದರು ಎಂಬುದು ತನಿಖೆ ವೇಳೆ ಕಂಡುಬಂದಿದೆ. ಇವೆರಡೂ ಪ್ರದೇಶಗಳ ಒಂದು ಭಾಗವನ್ನು ಲೋಕೋಪಯೋಗಿ ಇಲಾಖೆಯಿಂದ ಕೆಡವಿದ್ದರಿಂದ ಪ್ರಮುಖ ಸಾಕ್ಷ್ಯಾಧಾರಗಳು ಕಳೆದುಹೋಗಿವೆ ಎಂದು ಶಂಕಿಸಲಾಗಿದೆ. ಅದಲ್ಲದೆ, ಶವ ಪತ್ತೆಯಾದ ಕೂಡಲೇ ಸೆಮಿನಾರ್ ಕೊಠಡಿಯಲ್ಲಿ ಜನರಿಂದ ಕಿಕ್ಕಿರಿದಿತ್ತು ಎಂದು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ಕಾಣಿಸಿಕೊಂಡಿದೆ.

ಪ್ರಕರಣ ಸಂಬಂಧ ಘೋಷ್, ಇತರ ವೈದ್ಯರು, ಅಧಿಕಾರಿಗಳು, ಭದ್ರತಾ ಸಿಬ್ಬಂದಿ ಮತ್ತು ಬಂಧಿತ ಪ್ರಮುಖ ಆರೋಪಿ ಸಂಜಯ್ ರಾಯ್ ಸೇರಿದಂತೆ ಸಾಕ್ಷಿಗಳನ್ನು ಸಿಬಿಐ ವಿಚಾರಣೆ ನಡೆಸಿದೆ. ಈ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿದೆ. ಈ ಕಾರಣದಿಂದಾಗಿ ನಮ್ಮ ತನಿಖಾ ತಂಡ ಒಂದು ತೀರ್ಮಾನಕ್ಕೆ ಬರಲು ಸಾಧ್ಯವಾಗುತ್ತಿಲ್ಲ. ಸಾಂದರ್ಭಿಕ ಪುರಾವೆಗಳು, ಜನರನ್ನು ಪ್ರಶ್ನಿಸುವುದು ಮತ್ತು ಡಿಎನ್‌ಎ ಸಾಕ್ಷಿಯಿಂದ ಲೈಂಗಿಕ ದೌರ್ಜನ್ಯದಲ್ಲಿ ಅನೇಕ ವ್ಯಕ್ತಿಗಳಿದ್ದಾರೆ ಎಂಬುದು ಗೊತ್ತಾಗುವುದಿಲ್ಲ ಎಂದು ಅಧಿಕಾರಿ ಹೇಳಿದರು.

ಕೇಂದ್ರ ವಿಧಿ ವಿಜ್ಞಾನ ಪ್ರಯೋಗಾಲಯ ನಡೆಸಿದ ಪರೀಕ್ಷೆಯಲ್ಲಿ ಸಂತ್ರಸ್ತೆ ಮತ್ತು ಬಂಧಿತ ಸಂಜಯ್ ರಾಯ್ ನಡುವಿನ ಡಿಎನ್‌ಎ ಹೊಂದಾಣಿಕೆಯನ್ನು ದೃಢಪಡಿಸಿವೆ ಎಂದು ಅವರು ಹೇಳಿದರು. ಸಾಕ್ಷ್ಯಾಧಾರಗಳನ್ನು ತಿರುಚಲಾಗಿದೆ ಎಂದು ಮೃತರ ಪೋಷಕರೂ ಕೂಡಾ ಆರೋಪವನ್ನು ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT