ಕೋಲ್ಕತ್ತಾದಲ್ಲಿ ಟ್ರೈನಿ ವೈದ್ಯೆ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಹತ್ಯೆಯ ಕುರಿತು ಪ್ರತಿಭಟನೆಯ ಸಂದರ್ಭದಲ್ಲಿ ಜನರು ಘೋಷಣೆಗಳನ್ನು ಕೂಗಿದರು. 
ದೇಶ

ಕೋಲ್ಕತ್ತಾದಲ್ಲಿ ವೈದ್ಯೆ ಅತ್ಯಾಚಾರ-ಹತ್ಯೆ ಪ್ರಕರಣ: ಸಿಜೆಐ ನೇತೃತ್ವದ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ಇಂದು ವಿಚಾರಣೆ

ಮೂವರು ನ್ಯಾಯಾಧೀಶರನ್ನೊಳಗೊಂಡ ನ್ಯಾಯಪೀಠವು, ಈ ಘಟನೆ ಭಯಾನಕವಾಗಿದ್ದು, ರಾಜ್ಯದ ಆಡಳಿತ ಯಂತ್ರದ ವ್ಯವಸ್ಥಿತ ವೈಫಲ್ಯವನ್ನು ತೋರಿಸುತ್ತದೆ ಎಂದು ಹೇಳಿದೆ.

ನವದೆಹಲಿ: ಕೋಲ್ಕತ್ತಾದ ಆರ್ ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ತರಬೇತಿ ನಿರತ ವೈದ್ಯೆಯ ಅಮಾನುಷ ಅತ್ಯಾಚಾರ ಮತ್ತು ಹತ್ಯೆಗೆ ಸಂಬಂಧಿಸಿದ ಪ್ರಕರಣವನ್ನು ಸುಪ್ರೀಂ ಕೋರ್ಟ್ ಇಂದು ಸೋಮವಾರ ಸ್ವಯಂ ಪ್ರೇರಿತವಾಗಿ ವಿಚಾರಣೆ ನಡೆಸಲಿದೆ.

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ (CJI) ಡಿ ವೈ ಚಂದ್ರಚೂಡ್ ಅವರ ನೇತೃತ್ವದ ತ್ರಿಸದಸ್ಯರನ್ನೊಳಗೊಂಡ ಉನ್ನತ ಪೀಠ ಈ ವಿಚಾರಣೆಯನ್ನು ಇಂದು ಕೈಗೆತ್ತಿಕೊಳ್ಳಲಿದೆ.

ಕಳೆದ ಆಗಸ್ಟ್ 20 ರಂದು ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ, ಶಸ್ತ್ರಚಿಕಿತ್ಸಕ ವೈಸ್ ಅಡ್ಮಿರಲ್ ಮತ್ತು ವೈದ್ಯಕೀಯ ಸೇವೆಗಳ (ನೌಕಾಪಡೆಯ ಡಿಜಿ) ಆರ್ತಿ ಸರಿನ್ ನೇತೃತ್ವದಲ್ಲಿ 10 ಸದಸ್ಯರ ರಾಷ್ಟ್ರೀಯ ಕಾರ್ಯಪಡೆ (NTF) ನ್ನು ವೈದ್ಯರು ಮತ್ತು ಆರೋಗ್ಯ ರಕ್ಷಣೆಗೆ ಸುರಕ್ಷತೆ, ಭದ್ರತೆ ಮತ್ತು ಸೌಲಭ್ಯಗಳನ್ನು ಖಾತ್ರಿಪಡಿಸುವ ಮಾರ್ಗಸೂಚಿಗಳನ್ನು ರೂಪಿಸಲು ರಚಿಸಿತ್ತು.

ಸುಪ್ರೀಂ ಕೋರ್ಟ್ ಸ್ಥಾಪಿಸಿದ ಎನ್‌ಟಿಎಫ್‌ನ ಇತರ ಸದಸ್ಯರಲ್ಲಿ ಹೈದರಾಬಾದ್ ಮೂಲದ ಏಷ್ಯನ್ ಇನ್‌ಸ್ಟಿಟ್ಯೂಟ್ ಆಫ್ ಗ್ಯಾಸ್ಟ್ರೋಎಂಟರಾಲಜಿಯ ಅಧ್ಯಕ್ಷ ಡಿ ನಾಗೇಶ್ವರ ರೆಡ್ಡಿ, ದೆಹಲಿಯ ಏಮ್ಸ್ ನಿರ್ದೇಶಕ ಎಂ ಶ್ರೀನಿವಾಸ್, ನಿಮ್ಹಾನ್ಸ್ ಬೆಂಗಳೂರು ನಿರ್ದೇಶಕಿ- ಪ್ರತಿಮಾ ಮೂರ್ತಿ, ಜೋಧ್‌ಪುರ ಏಮ್ಸ್ ಕಾರ್ಯನಿರ್ವಾಹಕ ನಿರ್ದೇಶಕ- ಗೋವರ್ಧನ್ ದತ್ ಪುರಿ, ಗಂಗಾರಾಮ್ ಆಸ್ಪತ್ರೆಯ ಸೌಮಿತ್ರಾ ರಾವತ್, ರೋಹ್ಟಕ್ ಮೂಲದ ಪಂಡಿತ್ ಬಿ ಡಿ ಶರ್ಮಾ ವೈದ್ಯಕೀಯ ವಿಶ್ವವಿದ್ಯಾಲಯದ ಉಪಕುಲಪತಿ ಅನಿತಾ ಸಕ್ಸೇನಾ, ಮುಂಬೈ ಮೂಲದ ಗ್ರಾಂಟ್ ಮೆಡಿಕಲ್ ಕಾಲೇಜಿನ ಡೀನ್ ಪಲ್ಲವಿ ಸಾಪ್ಲೆ ಮತ್ತು ಪಾರಸ್ ಹೆಲ್ತ್ ಗುರುಗ್ರಾಮ್‌ನಲ್ಲಿ ನರವಿಜ್ಞಾನದ ಅಧ್ಯಕ್ಷೆ ಪದ್ಮಾ ಶ್ರೀವಾಸ್ತವ ಅವರಿದ್ದಾರೆ.

ಮೂವರು ನ್ಯಾಯಾಧೀಶರನ್ನೊಳಗೊಂಡ ನ್ಯಾಯಪೀಠವು, ಈ ಘಟನೆ ಭಯಾನಕವಾಗಿದ್ದು, ರಾಜ್ಯದ ಆಡಳಿತ ಯಂತ್ರದ ವ್ಯವಸ್ಥಿತ ವೈಫಲ್ಯವನ್ನು ತೋರಿಸುತ್ತದೆ ಎಂದು ಹೇಳಿದೆ. ಇಂದಿನ ವಿಚಾರಣೆಯಲ್ಲಿ ಏನು ತೀರ್ಪು ನೀಡಲಿದೆ ಎಂಬುದು ಕುತೂಹಲವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT