ನರೇಂದ್ರ ಮೋದಿ 
ದೇಶ

ಸೆಮಿಕಂಡಕ್ಟರ್ ಡಿಜಿಟಲ್ ಯುಗದ ಆಧಾರವಾಗಿದೆ: ಪ್ರಧಾನಿ ಮೋದಿ

ಪ್ರಜಾಪ್ರಭುತ್ವ ಮತ್ತು ತಂತ್ರಜ್ಞಾನವು ಒಟ್ಟಾಗಿ ಮಾನವೀಯತೆಯ ಕಲ್ಯಾಣವನ್ನು ಖಚಿತಪಡಿಸುತ್ತದೆ. ಸೆಮಿಕಂಡಕ್ಟರ್ ವಲಯದಲ್ಲಿ ಭಾರತವು ಪ್ರಬಲ ರಾಷ್ಟ್ರವಾಗಲು ಎಲ್ಲಾ ಸಾಮರ್ಥ್ಯಗಳನ್ನು ಹೊಂದಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ ದೆಹಲಿಯ ತಮ್ಮ ನಿವಾಸದಲ್ಲಿ 'ಸೆಮಿಕಂಡಕ್ಟರ್ ಎಕ್ಸಿಕ್ಯೂಟಿವ್ಸ್ ರೌಂಡ್‌ಟೇಬಲ್' ಅಧ್ಯಕ್ಷತೆ ವಹಿಸಿದ್ದು ಈ ವೇಳೆ ಮಾತನಾಡಿದ ಅವರು ಸೆಮಿಕಂಡಕ್ಟರ್ ಡಿಜಿಟಲ್ ಯುಗದ ಆಧಾರವಾಗಿದೆ ಎಂದು ಹೇಳಿದರು.

ಪ್ರಜಾಪ್ರಭುತ್ವ ಮತ್ತು ತಂತ್ರಜ್ಞಾನವು ಒಟ್ಟಾಗಿ ಮಾನವೀಯತೆಯ ಕಲ್ಯಾಣವನ್ನು ಖಚಿತಪಡಿಸುತ್ತದೆ. ಸೆಮಿಕಂಡಕ್ಟರ್ ವಲಯದಲ್ಲಿ ಭಾರತವು ಪ್ರಬಲ ರಾಷ್ಟ್ರವಾಗಲು ಎಲ್ಲಾ ಸಾಮರ್ಥ್ಯಗಳನ್ನು ಹೊಂದಿದೆ. ಭಾರತದಲ್ಲಿ ಗರಿಷ್ಠ ಸಂಖ್ಯೆಯ ಸೆಮಿಕಂಡಕ್ಟರ್‌ಗಳನ್ನು ತಯಾರಿಸುವ ಮೂಲಕ, ನಾವು ನಮ್ಮ ಅಗತ್ಯಗಳನ್ನು ಪೂರೈಸುವುದು ಮಾತ್ರವಲ್ಲದೆ ಅದನ್ನು ಜಗತ್ತಿಗೆ ಪೂರೈಸುತ್ತೇವೆ. ನೀತಿಗಳನ್ನು ಸುಧಾರಿಸುವ ಮೂಲಕ ನಾವು ನಿಮಗೆಲ್ಲರಿಗೂ ನೆರವಾಗುತ್ತೇವೆ ಎಂದು ಪ್ರಧಾನಿ ಎಲ್ಲರಿಗೂ ಭರವಸೆ ನೀಡಿದರು.

ಪ್ರಧಾನಿ ಮೋದಿ ಆಯೋಜಿಸಿದ್ದ ಈ ಸಭೆಯಲ್ಲಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ಹಲವು ಸೆಮಿಕಂಡಕ್ಟರ್ ಕಂಪನಿಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಈ ಕ್ಷೇತ್ರವನ್ನು ಪ್ರಗತಿಯತ್ತ ಕೊಂಡೊಯ್ಯಲು ಕೇಂದ್ರ ಸರ್ಕಾರ ಎಷ್ಟು ಉತ್ಸಾಹದಲ್ಲಿದೆ ಎಂಬುದನ್ನು ಈ ಸಭೆ ತೋರಿಸುತ್ತದೆ ಎಂದರು. ಇಡೀ ಜಗತ್ತಿನ ಸೆಮಿಕಂಡಕ್ಟರ್ ಉದ್ಯಮದ ಗಮನ ಈಗ ಭಾರತದತ್ತ ನೆಟ್ಟಿದೆ. ಇದು ನಮಗೆ ಉತ್ತಮ ಅವಕಾಶ. ಭಾರತದ ಸೆಮಿಕಂಡಕ್ಟರ್ ಉದ್ಯಮವೂ ಸರ್ಕಾರದ ಮೇಲೆ ಸಂಪೂರ್ಣ ವಿಶ್ವಾಸ ಹೊಂದಿದೆ. ಅನೇಕ ಜಾಗತಿಕ ಕಂಪನಿಗಳು ಈಗ ನಮ್ಮಲ್ಲಿ ಹೂಡಿಕೆ ಮಾಡಲು ಬಯಸುತ್ತವೆ. ಇಂದಿನ ಮೊದಲು ಇಂತಹ ಅವಕಾಶಗಳು ಭಾರತದಲ್ಲಿ ಎಂದಿಗೂ ಇರಲಿಲ್ಲ ಎಂದರು.

ನಿಮ್ಮ ಆಲೋಚನೆಗಳು ವ್ಯವಹಾರವನ್ನು ಮುಂದಕ್ಕೆ ಕೊಂಡೊಯ್ಯುವುದು ಮಾತ್ರವಲ್ಲದೆ ಭವಿಷ್ಯದ ಭಾರತದ ದಿಕ್ಕನ್ನು ತೋರಿಸುತ್ತವೆ ಎಂದು ಪ್ರಧಾನಿ ಮೋದಿ ಹೇಳಿದರು. ಮುಂದುವರಿಯುತ್ತಾ, ಸೆಮಿಕಂಡಕ್ಟರ್ ಪ್ರತಿ ಅಗತ್ಯಕ್ಕೂ ಆಧಾರವಾಗುತ್ತವೆ. ಭಾರತವು ಈಗ ಅಂತಹ ದಿಕ್ಕಿನಲ್ಲಿ ಸಾಗುತ್ತಿದೆ. ಅದು ಇಡೀ ಪ್ರಪಂಚದ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತದೆ. ಸಾಮಾಜಿಕ, ಡಿಜಿಟಲ್ ಮತ್ತು ಮೂಲಸೌಕರ್ಯಗಳಂತಹ ಪ್ರತಿಯೊಂದು ಕ್ಷೇತ್ರದಲ್ಲೂ ನಾವು ಭಾರತವನ್ನು ಮುನ್ನಡೆಸಬೇಕಾಗಿದೆ. ನಾವು ಹೊಸ ಆಲೋಚನೆಗಳ ಮೇಲೆ ಬಂಡವಾಳ ಹೂಡಿಕೆ ಮಾಡಬೇಕಾಗುತ್ತದೆ. ಭಾರತದಲ್ಲಿ ಪ್ರತಿಭೆಗಳಿಗೆ ಕೊರತೆ ಇಲ್ಲ. ಕೌಶಲ್ಯ ಅಭಿವೃದ್ಧಿಯ ಮೂಲಕ ಅವರನ್ನು ಉದ್ಯಮಕ್ಕೆ ಸಮರ್ಥರನ್ನಾಗಿ ಮಾಡಲು ಸರ್ಕಾರ ನಿರತವಾಗಿದೆ ಎಂದರು.

ಈ ಸಭೆಯಲ್ಲಿ, SEMI, Micron, NXP, PSMC, IMEC, Renesas, TEPL, Tokyo Electron, Tower, Synopsys, Cadence, Rapidus, Jacobs, JSR, Infineon, Advantest, Teradyne, Applied Materials, Lamm Researchನ ಹಿರಿಯ ಅಧಿಕಾರಿಗಳು , ಮೆರ್ಕ್, ಸಿಜಿ ಪವರ್ ಮತ್ತು ಕೇನ್ಸ್ ಟೆಕ್ನಾಲಜಿ ಭಾಗವಹಿಸಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT