ಸಾಂಕೇತಿಕ ಚಿತ್ರ  
ದೇಶ

ಆಂಧ್ರ ಪ್ರದೇಶದ ದೇವರಪಲ್ಲಿ ಬಳಿ ಭೀಕರ ಅಪಘಾತ: 7 ಕಾರ್ಮಿಕರು ಸಾವು

ಗೋಡಂಬಿ ಲೋಡ್​​ ತುಂಬಿಕೊಂಡು ತೆರಳುತ್ತಿದ್ದ ಲಾರಿ, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕಳೆದ ರಾತ್ರಿ ಈ ರಸ್ತೆ ಅಪಘಾತ ಸಂಭವಿಸಿದೆ. ನರಸಾಪುರಂ ಮಂಡಲದ ಬೊರ್ರಂಪಾಲೆಂನಿಂದ ನಿಡದವೋಲು ಮಂಡಲದ ತಾಡಿಮಲ್ಲ ಕಡೆಗೆ ಲಾರಿ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ದೇವರಪಲ್ಲಿ(ಆಂಧ್ರ ಪ್ರದೇಶ): ಪೂರ್ವ ಗೋದಾವರಿ ಜಿಲ್ಲೆಯ ದೇವರಪಲ್ಲಿ ತಾಲೂಕಿನ ಚಿಲಕವಾರಿಪಾಕಲ ಎಂಬ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತದಲ್ಲಿ ಲಾರಿ ಪಲ್ಟಿಯಾಗಿ ಸ್ಥಳದಲ್ಲೇ 7 ಕೂಲಿ ಕಾರ್ಮಿಕರು ಮೃತಪಟ್ಟಿದ್ದಾರೆ. ಮೃತರ ಪೈಕಿ 6 ಕಾರ್ಮಿಕರು ತಾಡಿಮಳ್ಳ ಗ್ರಾಮದ ನಿವಾಸಿಗಳು. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಗೋಡಂಬಿ ಲೋಡ್​​ ತುಂಬಿಕೊಂಡು ತೆರಳುತ್ತಿದ್ದ ಲಾರಿ, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕಳೆದ ರಾತ್ರಿ ಈ ರಸ್ತೆ ಅಪಘಾತ ಸಂಭವಿಸಿದೆ. ನರಸಾಪುರಂ ಮಂಡಲದ ಬೊರ್ರಂಪಾಲೆಂನಿಂದ ನಿಡದವೋಲು ಮಂಡಲದ ತಾಡಿಮಲ್ಲ ಕಡೆಗೆ ಲಾರಿ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ಚಿನ್ನಾಯಗುಡೆಂ ಉಪನಗರದಲ್ಲಿ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದೆ. ಅಪಘಾತವಾದ ಲಾರಿಯಲ್ಲಿ 10 ಮಂದಿ ಪ್ರಯಾಣಿಸುತ್ತಿದ್ದರು. ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರೆಲ್ಲರೂ ನೀಡದವೋಲು ಮಂಡಲದ ತಾಡಿಮಲ್ಲ ಗ್ರಾಮದವರು. ಮೃತರನ್ನು ತಮ್ಮಿ ರೆಡ್ಡಿ ಸತ್ಯನಾರಾಯಣ (45), ದೇಶಭಟ್ಟುಲ ವೆಂಕಟರಾವ್ (40), ಬೊಕ್ಕ ಪ್ರಸಾದ್ (32), ಪೆನುಗುರ್ತಿ ಚಿನ್ನ ಮುಸಲಯ್ಯ (35), ಕತ್ತಿವ ಕೃಷ್ಣ (40), ಕತ್ತಿವ ಸತ್ತಿಪಂಡು (40), ತಾಡಿ ಕೃಷ್ಣ (45) ಎಂದು ಗುರುತಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!