ಸಾಂಕೇತಿಕ ಚಿತ್ರ  
ದೇಶ

ಆಂಧ್ರ ಪ್ರದೇಶದ ದೇವರಪಲ್ಲಿ ಬಳಿ ಭೀಕರ ಅಪಘಾತ: 7 ಕಾರ್ಮಿಕರು ಸಾವು

ಗೋಡಂಬಿ ಲೋಡ್​​ ತುಂಬಿಕೊಂಡು ತೆರಳುತ್ತಿದ್ದ ಲಾರಿ, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕಳೆದ ರಾತ್ರಿ ಈ ರಸ್ತೆ ಅಪಘಾತ ಸಂಭವಿಸಿದೆ. ನರಸಾಪುರಂ ಮಂಡಲದ ಬೊರ್ರಂಪಾಲೆಂನಿಂದ ನಿಡದವೋಲು ಮಂಡಲದ ತಾಡಿಮಲ್ಲ ಕಡೆಗೆ ಲಾರಿ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ದೇವರಪಲ್ಲಿ(ಆಂಧ್ರ ಪ್ರದೇಶ): ಪೂರ್ವ ಗೋದಾವರಿ ಜಿಲ್ಲೆಯ ದೇವರಪಲ್ಲಿ ತಾಲೂಕಿನ ಚಿಲಕವಾರಿಪಾಕಲ ಎಂಬ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತದಲ್ಲಿ ಲಾರಿ ಪಲ್ಟಿಯಾಗಿ ಸ್ಥಳದಲ್ಲೇ 7 ಕೂಲಿ ಕಾರ್ಮಿಕರು ಮೃತಪಟ್ಟಿದ್ದಾರೆ. ಮೃತರ ಪೈಕಿ 6 ಕಾರ್ಮಿಕರು ತಾಡಿಮಳ್ಳ ಗ್ರಾಮದ ನಿವಾಸಿಗಳು. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಗೋಡಂಬಿ ಲೋಡ್​​ ತುಂಬಿಕೊಂಡು ತೆರಳುತ್ತಿದ್ದ ಲಾರಿ, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕಳೆದ ರಾತ್ರಿ ಈ ರಸ್ತೆ ಅಪಘಾತ ಸಂಭವಿಸಿದೆ. ನರಸಾಪುರಂ ಮಂಡಲದ ಬೊರ್ರಂಪಾಲೆಂನಿಂದ ನಿಡದವೋಲು ಮಂಡಲದ ತಾಡಿಮಲ್ಲ ಕಡೆಗೆ ಲಾರಿ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ಚಿನ್ನಾಯಗುಡೆಂ ಉಪನಗರದಲ್ಲಿ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದೆ. ಅಪಘಾತವಾದ ಲಾರಿಯಲ್ಲಿ 10 ಮಂದಿ ಪ್ರಯಾಣಿಸುತ್ತಿದ್ದರು. ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರೆಲ್ಲರೂ ನೀಡದವೋಲು ಮಂಡಲದ ತಾಡಿಮಲ್ಲ ಗ್ರಾಮದವರು. ಮೃತರನ್ನು ತಮ್ಮಿ ರೆಡ್ಡಿ ಸತ್ಯನಾರಾಯಣ (45), ದೇಶಭಟ್ಟುಲ ವೆಂಕಟರಾವ್ (40), ಬೊಕ್ಕ ಪ್ರಸಾದ್ (32), ಪೆನುಗುರ್ತಿ ಚಿನ್ನ ಮುಸಲಯ್ಯ (35), ಕತ್ತಿವ ಕೃಷ್ಣ (40), ಕತ್ತಿವ ಸತ್ತಿಪಂಡು (40), ತಾಡಿ ಕೃಷ್ಣ (45) ಎಂದು ಗುರುತಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT