ಬಿಲ್ ಕೇಳಿದ ಸಿಬ್ಬಂದಿಯ 1.ಕಿಮೀ ವರೆಗೆ ಎಳೆದೊಯ್ದ ಕಾರು 
ದೇಶ

Video: ಢಾಬಾದಲ್ಲಿ ಹಣ ನೀಡದೇ ಪರಾರಿ ಯತ್ನ; ಬಿಲ್ ಕೇಳಿದ ಸಿಬ್ಬಂದಿಯ 1 ಕಿಮೀ ಎಳೆದೊಯ್ದ ಕಾರು!

ದುಷ್ಕರ್ಮಿಗಳು ಸುಮಾರು 1 ಕಿ.ಮೀ ದೂರ ಆತನನ್ನು ಹಾಗೆಯೇ ಎಳೆದುಕೊಂಡು ಹೋಗಿದ್ದು, ಅಲ್ಲಿಂದ ಆತನ ಕಣ್ಣಿಗೆ ಬಟ್ಟೆ ಕಟ್ಟಿ ಧಾರೂರು ತಾಲೂಕಿನ ಅಜ್ಞಾತ ಸ್ಥಳಕ್ಕೆ ಆತನನ್ನು ಕರೆದೊಯ್ದು ರಾತ್ರಿಯೆಲ್ಲಾ ಕಟ್ಟಿಹಾಕಿದ್ದಾರೆ.

ಬೀಡ್: ಮಹಾರಾಷ್ಟ್ರದಲ್ಲಿ ಮತ್ತೊಂದು ರೋಡ್ ರೇಜ್ ಪ್ರಕರಣ ವರದಿಯಾಗಿದ್ದು, ಪುಂಡರ ಗುಂಪೊಂದು ಢಾಬಾದಲ್ಲಿ ಊಟ ಮಾಡಿ ಹಣ ನೀಡದೇ ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ಬಿಲ್ ಕೇಳಿದ ಸಿಬ್ಬಂದಿಯನ್ನು ಬರೊಬ್ಬರಿ 1.ಕಿಮೀ ವರೆಗೂ ಕಾರಿನಲ್ಲಿ ಎಳೆದೊಯ್ದಿರುವ ವಿಡಿಯೋ ವೈರಲ್ ಆಗಿದೆ.

ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದ್ದು, ಇಲ್ಲಿನ ಮೆಹ್ಕರ್- ಪಂಢರಪುರ ಪಾಲ್ಖಿ ಹೆದ್ದಾರಿ ರಸ್ತೆಯ ಸಮೀಪದಲ್ಲಿರುವ ಢಾಬಾಕ್ಕೆ ಕಾರಿನಲ್ಲಿ ಬಂದ ಪುಂಡರ ಗುಂಪು ಹೊಟ್ಟೆ ತುಂಬಾ ಊಟ ಮಾಡಿದ್ದಾರೆ.

ಬಳಿಕ ಮೂವರು ಕಾರಿನೊಳಗೆ ಹತ್ತಿ ಕುಳಿತಿದ್ದು, ಈ ವೇಳೆ ಕಾರಿನ ಬಳಿ ಬಂದ ಸಿಬ್ಬಂದಿಗೆ ಯುಪಿಐ ಕೋಡ್ ತರುವಂತೆ ಹೇಳಿದ್ದಾರೆ. ಆತ ಕೋಡ್ ತರಲು ಹೋಗುತ್ತಲೇ ಕಾರನ್ನು ಚಾಲನೆ ಮಾಡಿಕೊಂಡು ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾರೆ.

ಈ ವೇಳೆ ಎಚ್ಚೆತ್ತ ಸಿಬ್ಬಂದಿ ಕಾರಿನ ಹಿಂದೆ ಓಡಿ ಚಲಿಸುತ್ತಿದ್ದ ಕಾರಿನ ಬಾಗಿಲು ತೆರೆದು ಗಟ್ಟಿಯಾಗಿ ಹಿಡಿದುಕೊಂಡಿದ್ದಾನೆ. ಆಗಲೂ ಕಾರನ್ನು ನಿಲ್ಲಿಸದ ದುಷ್ಕರ್ಮಿಗಳು ಸುಮಾರು 1 ಕಿ.ಮೀ ದೂರ ಆತನನ್ನು ಹಾಗೆಯೇ ಎಳೆದುಕೊಂಡು ಹೋಗಿದ್ದು, ಅಲ್ಲಿಂದ ಆತನ ಕಣ್ಣಿಗೆ ಬಟ್ಟೆ ಕಟ್ಟಿ ಧಾರೂರು ತಾಲೂಕಿನ ಅಜ್ಞಾತ ಸ್ಥಳಕ್ಕೆ ಆತನನ್ನು ಕರೆದೊಯ್ದು ರಾತ್ರಿಯೆಲ್ಲಾ ಕಟ್ಟಿಹಾಕಿದ್ದಾರೆ. ಅಲ್ಲದೆ ಆತನ ಜೇಬಿನಲ್ಲಿದ್ದ ಸುಮಾರು 11, 500 ರೂಗಳನ್ನು ಕಸಿದಿದ್ದು, ಬಳಿಕ ಬೆಳಗಿನ ಜಾವ ಆತನನ್ನು ಬಿಡುಗಡೆ ಮಾಡಿ ಕಳುಹಿಸಿದ್ದಾರೆ.

ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಇನ್ನು ಹೊಟೆಲ್ ಬಳಿ ನಡೆದ ಹೈಡ್ರಾಮದ ಇಡೀ ದೃಶ್ಯಾವಳಿಗಳು ಅಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ದೂರು ದಾಖಲು

ಇನ್ನು ಹೊಟೆಲ್ ಸಿಬ್ಬಂದಿ ನೀಡಿದ ದೂರಿನ ಆಧಾರದ ಮೇಲೆ ದಿಂಡ್ರೂಡ್ ಪೊಲೀಸರು ಸಖಾರಾಮ್ ಜನಾರ್ದನ್ ಮುಂಡೆ ಮತ್ತು ಇಬ್ಬರು ಅಪರಿಚಿತ ವ್ಯಕ್ತಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT