ರಣಧೀರ್ ಜೈಸ್ವಾಲ್  
ದೇಶ

ಬಲವಂತವಾಗಿ ರಷ್ಯಾ ಸೈನ್ಯಕ್ಕೆ ಸೇರಿಸಲಾಗಿದ್ದ 45 ಭಾರತೀಯರ ಬಿಡುಗಡೆ: MEA

ಪ್ರಸ್ತುತ ರಷ್ಯಾದ ಸೈನ್ಯದಲ್ಲಿ ಕೆಲಸ ಮಾಡುತ್ತಿರುವ ಉಳಿದ 50 ಭಾರತೀಯರನ್ನು ಮರಳಿ ಕರೆತರಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ ಎಂದು ರಣಧೀರ್ ಜೈಸ್ವಾಲ್ ಅವರು ತಿಳಿಸಿದ್ದಾರೆ.

ನವದೆಹಲಿ: ಬಲವಂತವಾಗಿ ರಷ್ಯಾದ ಸೇನೆಗೆ ಸೇರಿಸಿ, ಉಕ್ರೇನ್ ವಿರುದ್ಧದ ಹೋರಾಟಕ್ಕೆ ನಿಯೋಜಿಸಲಾಗಿದ್ದ 45 ಭಾರತೀಯರನ್ನು ಬಿಡುಗಡೆ ಮಾಡಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು ಗುರುವಾರ ಮಾಹಿತಿ ನೀಡಿದ್ದಾರೆ.

ಜುಲೈನಲ್ಲಿ ಪ್ರಧಾನಿ ನರೇಂದ್ರ ಮೋದಿ ರಷ್ಯಾಕ್ಕೆ ಭೇಟಿ ನೀಡಿದ ನಂತರ 35 ಭಾರತೀಯರನ್ನು ರಷ್ಯಾ ಸೇನೆಯಿಂದ ಬಿಡುಗಡೆ ಮಾಡಲಾಗಿದೆ. ಪ್ರಧಾನಿ ಭೇಟಿಗೂ ಮುನ್ನ 10 ಭಾರತೀಯ ಪ್ರಜೆಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಜೈಸ್ವಾಲ್ ಹೇಳಿದ್ದಾರೆ.

ಪ್ರಸ್ತುತ ರಷ್ಯಾದ ಸೈನ್ಯದಲ್ಲಿ ಕೆಲಸ ಮಾಡುತ್ತಿರುವ ಉಳಿದ 50 ಭಾರತೀಯರನ್ನು ಮರಳಿ ಕರೆತರಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಮಾಧ್ಯಮ ವರದಿಗಳ ಪ್ರಕಾರ, ಉತ್ತಮ ಉದ್ಯೋಗ ಅಥವಾ ಶೈಕ್ಷಣಿಕ ಅವಕಾಶಗಳ ಹುಡುಕಾಟದಲ್ಲಿದ್ದ ಸುಮಾರು ನೂರು ಭಾರತೀಯರು ವಂಚಕರಿಂದ ಮೋಸ ಹೋಗಿ ರಷ್ಯಾ ಸೈನ್ಯಕ್ಕೆ ಸೇರಿದ್ದಾರೆ ಮತ್ತು ಅವರನ್ನು ಉಕ್ರೇನ್ ವಿರುದ್ಧದ ಹೋರಾಟಕ್ಕೆ ನಿಯೋಜಿಸಲಾಗಿತ್ತು.

ಉಕ್ರೇನ್ ವಿರುದ್ಧದ ಯುದ್ಧದಲ್ಲಿ ಕನಿಷ್ಠ ನಾಲ್ವರು ಭಾರತೀಯರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಜುಲೈನಲ್ಲಿ ಮಾಸ್ಕೋಗೆ ಭೇಟಿ ನೀಡಿದ ಸಂದರ್ಭದಲ್ಲಿ, ನರೇಂದ್ರ ಮೋದಿ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಈ ವಿಷಯವನ್ನು ಪ್ರಸ್ತಾಪಿಸಿದ್ದರು. ರಷ್ಯಾ ಸೈನ್ಯದಲ್ಲಿರುವ ಭಾರತೀಯರನ್ನು ಉಕ್ರೇನ್‌ ಯುದ್ಧದಲ್ಲಿ ಬಳಸಿಕೊಳ್ಳಲಾಗಿದೆ. ಅವರನ್ನು ಬಿಡುಗಡೆ ಮಾಡಬೇಕು ಎಂದು ಪ್ರಧಾನಿ ಮೋದಿ ಮನವಿ ಮಾಡಿದ್ದರು. ಇದಕ್ಕೆ ಸಮ್ಮತಿಸಿದ ಪುಟಿನ್‌ ಅವರು, ಸೈನ್ಯದಲ್ಲಿರುವ ಭಾರತೀಯರನ್ನು ವಾಪಸ್‌ ಕಳಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

SCROLL FOR NEXT