ಸಾಂದರ್ಭಿಕ ಚಿತ್ರ 
ದೇಶ

ಬಿಹಾರ: ಆಸ್ಪತ್ರೆಯೊಳಗೆ ಅತ್ಯಾಚಾರಕ್ಕೆ ಯತ್ನ, ಡಾಕ್ಟರ್ ಖಾಸಗಿ ಅಂಗವನ್ನು ಬ್ಲೇಡ್‌ನಿಂದ ಗಾಯಗೊಳಿಸಿದ ಮಹಿಳೆ!

ಖಾಸಗಿ ಅಂಗವನ್ನು ಗಾಯಗೊಳಿಸಿ ನಂತರ ಅಲ್ಲಿಂದ ಓಡಿ ಹೋಗಿದ್ದು, ತದನಂತರ ಆಸ್ಪತ್ರೆಯ ಹೊರಗಿನಿಂದ ಘಟನೆಯ ಬಗ್ಗೆ ತಿಳಿಸಲು ಸಹಾಯವಾಣಿ ಸಂಖ್ಯೆ 112 ಗೆ ಡಯಲ್ ಮಾಡಿರುವುದಾಗಿ ಸಂತ್ರಸ್ತೆ ಹೇಳಿದ್ದಾರೆ.

ಸಮಸ್ತಿಪುರ್: ಇಬ್ಬರು ಸಹಚರರೊಂದಿಗೆ ಸೇರಿಕೊಂಡು ಆಸ್ಪತ್ರೆಯೊಳಗೆ ಅತ್ಯಾಚಾರಕ್ಕೆ ಯತ್ನಿಸಿದ ವೈದ್ಯರೊಬ್ಬರ ಖಾಸಗಿ ಅಂಗವನ್ನು ಮಹಿಳಾ ಉದ್ಯೋಗಿಯೊಬ್ಬರು ಬ್ಲೇಡ್ ನಿಂದ ತೀವ್ರವಾಗಿ ಗಾಯಗೊಳಿಸಿರುವ ಘಟನೆ ಬಿಹಾರದ ಸಮಸ್ತಿಪುರ್ ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ.

ಮುಸ್ರಿಘರಾರಿ ಪ್ರದೇಶದ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ. ಘಟನೆ ನಂತರ ಗಾಯಗೊಂಡ ಡಾಕ್ಟರ್ ಹಾಗೂ ಅವರ ಇಬ್ಬರು ಸಹಚರರನ್ನು ಬಂಧಿಸಲಾಗಿದೆ.

ಆರೋಪಿ ಡಾಕ್ಟರ್ ಹಾಗೂ ಆತನ ಇಬ್ಬರು ಸಹಚರರು ಮದ್ಯದ ನಶೆಯಲ್ಲಿದ್ದರು. ಆತ್ಮ ರಕ್ಷಣೆಗಾಗಿ ಬ್ಲೇಡ್ ನಿಂದ ಡಾಕ್ಟರ್ ಖಾಸಗಿ ಅಂಗವನ್ನು ಗಾಯಗೊಳಿಸಿ ನಂತರ ಅಲ್ಲಿಂದ ಓಡಿ ಹೋಗಿದ್ದು, ತದನಂತರ ಆಸ್ಪತ್ರೆಯ ಹೊರಗಿನಿಂದ ಘಟನೆಯ ಬಗ್ಗೆ ತಿಳಿಸಲು ಸಹಾಯವಾಣಿ ಸಂಖ್ಯೆ 112 ಗೆ ಡಯಲ್ ಮಾಡಿರುವುದಾಗಿ ಸಂತ್ರಸ್ತೆ ಹೇಳಿಕೆ ನೀಡಿರುವುದಾಗಿ ಸಮಸ್ತಿಪುರ ಉಪವಿಭಾಗೀಯ ಪೊಲೀಸ್ ಅಧಿಕಾರಿ (ಎಸ್‌ಡಿಪಿಒ) ಸಂಜಯ್ ಕುಮಾರ್ ಪಾಂಡೆ ಗುರುವಾರ ಸುದ್ದಿಗಾರರಿಗೆ ತಿಳಿಸಿದರು.

ಪೊಲೀಸರ ತಂಡವೊಂದು ಕೂಡಲೇ ಸ್ಥಳಕ್ಕೆ ಧಾವಿಸಿ, ಸಂತ್ರಸ್ತೆಯನ್ನು ರಕ್ಷಿಸಿ ಪೊಲೀಸ್ ಠಾಣೆಗೆ ಕರೆತಂದಿತು. ಬಳಿಕ ಪೊಲೀಸ್ ಅಧಿಕಾರಿಗಳ ತಂಡವೊಂದು ಆಸ್ಪತ್ರೆಗೆ ತೆರಳಿ ಡಾಕ್ಟರ್ ಹಾಗೂ ಆತನ ಇಬ್ಬರು ಸಹಚರರನ್ನು ಬಂಧಿಸಿತು ಎಂದು ಅವರು ಹೇಳಿದರು.

ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸುವ ಮುನ್ನಾ ಡಾಕ್ಟರ್ ಹಾಗೂ ಆತನ ಸಹಚರರು ಸಿಸಿಟಿವಿ ಕ್ಯಾಮರಾ ಸ್ವಿಚ್ ಆಫ್ ಮಾಡಿದ್ದು, ಒಳಗಡೆಯಿಂದ ಆಸ್ಪತ್ರೆಯನ್ನು ಲಾಕ್ ಮಾಡಿದ್ದರು. ಮಹಿಳೆ ಅಲ್ಲಿಂದ ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾರೆ.

ಸಂತ್ರಸ್ತೆ ನೀಡಿದ ಆಧಾರದ ಮೇಲೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಘಟನಾ ಸ್ಥಳದಿಂದ ಬ್ಲೇಡ್ ಹಾಗೂ ಒಂದು ಬಾಟಲಿ ಲಿಕ್ಕರ್ ನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT