ಸಿಎಂ ಮಮತಾ ಬ್ಯಾನರ್ಜಿ 
ದೇಶ

ಪಶ್ಚಿಮ ಬಂಗಾಳ: ಆರೋಗ್ಯ ಸೇವೆ ವ್ಯತ್ಯಯದಿಂದ 29 ರೋಗಿಗಳ ಸಾವು, ಮೃತರ ಕುಟುಂಬಕ್ಕೆ ತಲಾ ರೂ. 2 ಲಕ್ಷ ಪರಿಹಾರ ಘೋಷಣೆ

ಆಗಸ್ಟ್ 9 ರಂದು ಟ್ರೈನಿ ಡಾಕ್ಟರ್ ಮೇಲೆ ಅತ್ಯಾಚಾರ ಹಾಗೂ ಕೊಲೆ ನಡೆದಿತ್ತು. ಅಂದಿನಿಂದ ಪಶ್ಚಿಮ ಬಂಗಾಳ ಹಾಗೂ ರಾಷ್ಟ್ರದಾದ್ಯಂತ ಕಿರಿಯ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದು, ಸಂತ್ರಸ್ತೆಗೆ ನ್ಯಾಯ ಒದಗಿಸಬೇಕು ಹಾಗೂ ವೈದ್ಯರ ಸುರಕ್ಷತೆ ಖಾತ್ರಿಗೆ ಕಾಯ್ದೆ ಜಾರಿಗೆ ಆಗ್ರಹಿಸುತ್ತಿದ್ದಾರೆ.

ಕೋಲ್ಕತ್ತ: ಆರ್. ಜಿ. ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿನ ಮಹಿಳಾ ಟ್ರೈನಿ ವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಕೊಲೆಯನ್ನು ಖಂಡಿಸಿ ಕಿರಿಯ ವೈದ್ಯರು ನಡೆಸುತ್ತಿರುವ ಮುಷ್ಕರದಿಂದ ಆರೋಗ್ಯ ಸೇವೆಯಲ್ಲಿ ವ್ಯತ್ಯಯವಾಗಿ ಮೃತಪಟ್ಟ ಕುಟುಂಬ ಸದಸ್ಯರಿಗೆ ಪಶ್ಚಿಮ ಬಂಗಾಳ ಸರ್ಕಾರ ಪರಿಹಾರವನ್ನು ಘೋಷಿಸಿದೆ.

ಆಗಸ್ಟ್ 9 ರಂದು ಟ್ರೈನಿ ಡಾಕ್ಟರ್ ಮೇಲೆ ಅತ್ಯಾಚಾರ ಹಾಗೂ ಕೊಲೆ ನಡೆದಿತ್ತು. ಅಂದಿನಿಂದ ಪಶ್ಚಿಮ ಬಂಗಾಳ ಹಾಗೂ ರಾಷ್ಟ್ರದಾದ್ಯಂತ ಕಿರಿಯ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದು, ಸಂತ್ರಸ್ತೆಗೆ ನ್ಯಾಯ ಒದಗಿಸಬೇಕು ಹಾಗೂ ವೈದ್ಯರ ಸುರಕ್ಷತೆ ಖಾತ್ರಿಗೆ ಕಾಯ್ದೆ ಜಾರಿಗೆ ಆಗ್ರಹಿಸುತ್ತಿದ್ದಾರೆ.

ಕಿರಿಯ ವೈದ್ಯರ ಧೀರ್ಘಾವಧಿಯ ಪ್ರತಿಭಟನೆಯಿಂದಆರೋಗ್ಯ ಸೇವೆ ವ್ಯತ್ಯಯವಾಗಿ 29 ಮಂದಿ ಸಾವನ್ನಪ್ಪಿರುವುದು ದುರದೃಷ್ಟಕರ ಎಂದಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮ್ಮವರನ್ನು ಕಳೆದುಕೊಂಡ ಕುಟುಂಬಕ್ಕೆ ನೆರವಾಗಲು ಮೃತರ ಸದಸ್ಯರ ತಲಾ 2 ಲಕ್ಷ ರೂ. ಪರಿಹಾರವನ್ನು ಸರ್ಕಾರ ಘೋಷಿಸಿರುವುದಾಗಿ ತಿಳಿಸಿದ್ದಾರೆ.

ಆರ್ ಜಿ ಕಾರ್ ಆಸ್ಪತ್ರೆಯಲ್ಲಿನ ಬಿಕ್ಕಟ್ಟು ಪರಿಹರಿಸಲು ನಿನ್ನೆ ಪ್ರತಿಭಟನಾನಿರತ ಕಿರಿಯ ವೈದ್ಯರೊಂದಿಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಭೆ ಆಯೋಜಿಸಲಾಗಿತ್ತು. ಆದರೆ, ವೇದಿಕೆಗೆ ತೆರಳದ ಕಿರಿಯ ವೈದ್ಯರು ಪ್ರವೇಶದ್ವಾರದಲ್ಲಿಯೇ ಸಭೆ ನಡೆಸಿದರು. ಸುಮಾರು ಒಂದೂವರೆ ಗಂಟೆಗಳ ಕಾಲ ವೇದಿಕೆಯಲ್ಲಿಯೇ ಕಾಯುತ್ತಿದ್ದ ಕುಳಿತಿದ್ದ ಮಮತಾ ಬ್ಯಾನರ್ಜಿ ಜನರ ಹಿತಾಸಕ್ತಿ ರಕ್ಷಿಸುವ ಸಲುವಾಗಿ ನನ್ನ ರಾಜೀನಾಮೆಗೂ ಸಿದ್ಧ ಎಂದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!