ದೆಹಲಿ ಸಿಎಂ ಕೇಜ್ರಿವಾಲ್ 
ದೇಶ

ಆರು ತಿಂಗಳ ನಂತರ ತಿಹಾರ್‌ ಜೈಲಿನಿಂದ ಹೊರಬಂದ ದೆಹಲಿ ಸಿಎಂ ಕೇಜ್ರಿವಾಲ್

ಜೈಲಿನ ಹೊರಗೆ ಕಾಯುತ್ತಿದ್ದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಪಕ್ಷದ ಹಲವು ನಾಯಕರು, ಕಾರ್ಯಕರ್ತರು ದೆಹಲಿ ಮುಖ್ಯಮಂತ್ರಿಯನ್ನು ಸ್ವಾಗತಿಸಿದರು.

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಶುಕ್ರವಾರ ಜಾಮೀನು ಪಡೆದ ಕೆಲವೇ ಗಂಟೆಗಳ ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆರು ತಿಂಗಳ ನಂತರ ತಿಹಾರ್ ಜೈಲಿನಿಂದ ಬಿಡುಗಡೆಯಾದರು.

ಎಎಪಿ ಮುಖ್ಯಸ್ಥನಿಗಾಗಿ ಜೈಲಿನ ಹೊರಗೆ ಕಾಯುತ್ತಿದ್ದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಪಕ್ಷದ ಹಲವು ನಾಯಕರು, ಕಾರ್ಯಕರ್ತರು ದೆಹಲಿ ಮುಖ್ಯಮಂತ್ರಿಯನ್ನು ಸ್ವಾಗತಿಸಿದರು.

ಜೈಲುವಾಸದ ವೇಳೆ ತನಗೆ ಬೆಂಬಲ ನೀಡಿದವರಿಗೆ ಅರವಿಂದ್ ಕೇಜ್ರಿವಾಲ್ ಅವರು ಕೃತಜ್ಞತೆ ಸಲ್ಲಿಸಿದರು. "ನನ್ನ ಬಿಡುಗಡೆಗಾಗಿ ಪ್ರಾರ್ಥಿಸಿದ ಮತ್ತು ಮಳೆಯನ್ನು ಲೆಕ್ಕಿಸದೇ ಇಲ್ಲಿಗೆ ಬರುವ ಧೈರ್ಯಮಾಡಿದ ಎಲ್ಲರಿಗೂ ನಾನು ಧನ್ಯವಾದ ಹೇಳಲು ಬಯಸುತ್ತೇನೆ" ಎಂದು ಜೈಲಿನಿಂದ ಹೊರಬಂದ ಬಳಿಕ ಕೇಜ್ರಿವಾಲ್ ಹೇಳಿದರು.

ನನ್ನ ಪ್ರತಿಯೊಂದು ರಕ್ತದ ಹನಿಯೂ ಈ ದೇಶಕ್ಕೆ ಸಮರ್ಪಿತವಾಗಿದೆ. ನಾನು ಕಷ್ಟಗಳನ್ನು ಎದುರಿಸಿದ್ದೇನೆ. ಆದರೆ ದೇವರು ಯಾವಾಗಲೂ ನನ್ನೊಂದಿಗಿದ್ದಾನೆ. ಅವರು(ಬಿಜೆಪಿ) ನನ್ನ ನೈತಿಕತೆಯನ್ನು ಕುಗ್ಗಿಸಲು ನನ್ನನ್ನು ಜೈಲಿಗೆ ಹಾಕಿದರು. ಆದರೆ ನನ್ನ ನೈತಿಕತೆ ಹಿಂದೆಂದಿಗಿಂತಲೂ ಈಗ ಹೆಚ್ಚಾಗಿದೆ; ಜೈಲುಗಳು ನನ್ನನ್ನು ದುರ್ಬಲಗೊಳಿಸುವುದಿಲ್ಲ ಎಂದರು.

ಈ ದೇಶವನ್ನು ದುರ್ಬಲಗೊಳಿಸುವ ಗುರಿಯನ್ನು ಹೊಂದಿರುವ "ದೇಶವಿರೋಧಿ ಶಕ್ತಿಗಳು" ವಿರುದ್ಧದ ತಮ್ಮ ಹೋರಾಟವನ್ನು ಮುಂದುವರೆಸುವುದಾಗಿ ಕೇಜ್ರಿವಾಲ್ ಪ್ರತಿಜ್ಞೆ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT