ಅಂಬರ್ ನಾಥ್ ನಲ್ಲಿ ವಿಷಾನಿಲ ಸೋರಿಕೆ 
ದೇಶ

Video: ಕೆಮಿಕಲ್ ಫ್ಯಾಕ್ಟರಿಯಲ್ಲಿ Gas Leak, ಇಡೀ ನಗರಕ್ಕೆ ಹಬ್ಬಿದ ವಿಷಕಾರಿ ಅನಿಲ, ಮಹಾರಾಷ್ಟ್ರದಲ್ಲಿ ಕಟ್ಟೆಚ್ಚರ!

ರಸ್ತೆಯಲ್ಲಿ ಓಡಾಡುತ್ತಿರುವ ಸಾರ್ವಜನಿಕರು ಮೂಗು ಮತ್ತು ಬಾಯಿಯನ್ನು ಮುಚ್ಚಿಕೊಂಡು ಓಡಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಮುಂಬೈ: ಕೆಮಿಕಲ್ ಫ್ಯಾಕ್ಟರಿಯಲ್ಲಿ ಉಂಟಾದ ಅನಿಲ ಸೋರಿಕೆ ಬಳಿಕ ಇಡೀ ನಗರಕ್ಕೆ ವ್ಯಾಪಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಮಹಾರಾಷ್ಟ್ರದ ಅಂಬರನಾಥದಲ್ಲಿ ಕೆಮಿಕಲ್ ಕಾರ್ಖಾನೆಯಿಂದ ಅನಿಲ ಸೋರಿಕೆ ಸಂಭವಿಸಿ ಆತಂಕ ಸೃಷ್ಟಿಸಿದೆ. ಕೆಲವೇ ಗಂಟೆಗಳಲ್ಲಿ ವಿಷಕಾರಿ ಅನಿಲ ಇಡೀ ನಗರವನ್ನು ವ್ಯಾಪಿಸಿದ್ದು, ಹಲವು ನಿವಾಸಿಗಳಲ್ಲಿ ಆರೋಗ್ಯ ಏರುಪೇರಾಗಿದೆ ಎಂದು ಹೇಳಲಾಗಿದೆ.

ಅಂಬರನಾಥ್ ನಗರದಲ್ಲಿ ಗ್ಯಾಸ್ ಲೀಕ್ ನಿಂದಾಗಿ ಗೋಚರತೆ ಕಡಿಮೆಯಾಗಿದ್ದು, ನಿವಾಸಿಗಳಲ್ಲಿ ಕಣ್ಣುಗಳು ಮತ್ತು ಗಂಟಲಿಗೆ ಕಿರಿಕಿರಿಯನ್ನು ಉಂಟುಮಾಡುತ್ತಿದೆ ಎಂದು ನಿವಾಸಿಗಳು ಆರೋಪಿಸಿದ್ದಾರೆ. ಅಲ್ಲದೆ ಇದು 1984 ರ ಭೋಪಾಲ್ ಅನಿಲ ದುರಂತದ ನೆನಪುಗಳನ್ನು ಮರಳಿ ತರುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ನಗರಾದ್ಯಂತ ವಿಷಕಾರಿ ಅನಿಲ ಹಬ್ಬಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ರಸ್ತೆಯಲ್ಲಿ ಓಡಾಡುತ್ತಿರುವ ಸಾರ್ವಜನಿಕರು ಮೂಗು ಮತ್ತು ಬಾಯಿಯನ್ನು ಮುಚ್ಚಿಕೊಂಡು ಓಡಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಪಾಲಿಕೆ ಅಧಿಕಾರಿಗಳು ಈ ವರೆಗೂ ಯಾವುದೇ ತೀವ್ರ ಪರಿಣಾಮ ಅಥವಾ ಪ್ರಾಣಾಪಾಯ ವರದಿಯಾಗಿಲ್ಲ ಎಂದು ಹೇಳಿದ್ದಾರೆ.

ಅಂತೆಯೇ ಸೋರಿಕೆಯಾಗಿರುವ ವಿಷಾನಿಲ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ತಜ್ಞರೊಂದಿಗೆ ಚರ್ಚೆ ನಡೆಸಲಾಗುತ್ತಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ತಂಡಗಳನ್ನು ಸಹ ಕಳುಹಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜನರು ಮನೆಯೊಳಗೆ ಇರುವಂತೆ ಅಧಿಕಾರಿಗಳು ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT