ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ 
ದೇಶ

ಕೇಜ್ರಿವಾಲ್‌ಗೆ ಜಾಮೀನು; 'ಸತ್ಯಕ್ಕೆ ಸಂದ ಜಯ' ಎಂದ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೀಡಾಗಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದ್ದು, ಇದೇ ವಿಚಾರವಾಗಿ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಪ್ರತಿಕ್ರಿಯೆ ನೀಡಿ ಸಂತಸ ವ್ಯಕ್ತಪಡಿಸಿದ್ದಾರೆ.

ರಾಂಚಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಜಾಮೀನು ಸಿಕ್ಕಿರುವುದುಕ್ಕೆ ಸಂತಸ ವ್ಯಕ್ತಪಡಿಸಿರುವ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್, ಇದು ಸತ್ಯಕ್ಕೆ ಸಂದ ಜಯ ಎಂದು ಹೇಳಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೀಡಾಗಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದ್ದು, ಇದೇ ವಿಚಾರವಾಗಿ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಪ್ರತಿಕ್ರಿಯೆ ನೀಡಿ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಹೇಮಂತ್ ಸೊರೇನ್, 'ಹಿರಿಯ ಸಹೋದರ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರ್ಖಂಡ್ ಪ್ರಜೆಗಳಿಂದ ಅಭಿನಂದನೆಗಳು. ಇದು ಸತ್ಯದ ಗೆಲುವು ಮತ್ತು ಸುಳ್ಳಿನ ಸೋಲು. ಇಂದು, ಸುಳ್ಳು ಮತ್ತು ಪಿತೂರಿಯನ್ನು ಸೋಲಿಸುವ ಮೂಲಕ ಸತ್ಯ ಗೆದ್ದಿದೆ ಎಂದು ಹೇಮಂತ್ ಸೊರೇನ್ ಬಣ್ಣಿಸಿದ್ದಾರೆ.

ಇದಕ್ಕೂ ಮುನ್ನ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಖಲಿಸಿದ್ದ ಭ್ರಷ್ಟಾಚಾರ ಪ್ರಕರಣದಲ್ಲಿ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಳ್ಳಾರಿ ಫೈರಿಂಗ್: ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ 25 ಲಕ್ಷ ಪರಿಹಾರ

ಆಗ Navy Seal.. ಈಗ ಡೆಲ್ಟಾ ಫೋರ್ಸ್: Venezuela ಅಧ್ಯಕ್ಷರ ಹೆಡೆಮುರಿ ಕಟ್ಟಿದ ಅಮೆರಿಕದ ಸೀಕ್ರೆಟ್ ಸೇನೆ! Video

ಹಾವೇರಿ: ಸುಂಟರಗಾಳಿಗೆ ಕುಸಿದ ಬೃಹತ್ ಪೆಂಡಾಲ್‌; ಸತೀಶ್ ಜಾರಕಿಹೊಳಿ ಸ್ವಲ್ಪದರಲ್ಲೇ ಪಾರು!

ʻರಿಪಬ್ಲಿಕ್ ಆಫ್ ಬಳ್ಳಾರಿʼಗೆ ಮತ್ತೆ ಅವಕಾಶ ನೀಡಲ್ಲ; ರೆಡ್ಡಿ ಕೋಟೆ ನಿರ್ಮಿಸಿಕೊಂಡಿದ್ದಾರೆ, ಅವರನ್ನು ಕೊಲ್ಲಲು ಸಾಧ್ಯವೇ?

ಕಾಂಗ್ರೆಸ್​​ನಿಂದ G RAM G ಕಾಯ್ದೆ ವಿರುದ್ಧ ದೇಶಾದ್ಯಂತ 'MGNREGA ಬಚಾವೋ ಸಂಗ್ರಾಮ್'

SCROLL FOR NEXT