ತಾಜ್ ಮಹಲ್‌ 
ದೇಶ

ಆಗ್ರಾದಲ್ಲಿ ನಿರಂತರ ಮಳೆ: ತಾಜ್ ಮಹಲ್‌ ಮುಖ್ಯ ಗುಮ್ಮಟದಲ್ಲಿ ನೀರು ಸೋರಿಕೆ!

20 ಸೆಕೆಂಡ್‌ಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅದರಲ್ಲಿ ಸ್ಮಾರಕದ ಉದ್ಯಾನ ಮಳೆ ನೀರಿನಲ್ಲಿ ಮುಳುಗಿದೆ.

ಆಗ್ರಾ: ಆಗ್ರಾದಲ್ಲಿ ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ವಿಶ್ವದ ಏಳು ಅದ್ಭುತಗಳಲ್ಲಿ ಒಂದಾದ ತಾಜ್‌ಮಹಲ್‌ನ ಮುಖ್ಯ ಗುಮ್ಮಟದಲ್ಲಿ ನೀರು ಸೋರುತ್ತಿದ್ದು, ಆವರಣದಲ್ಲಿರುವ ಉದ್ಯಾನಕ್ಕೂ ನೀರು ನುಗ್ಗಿದೆ.

ಗುರುವಾರ ತಾಜ್‌ಮಹಲ್ ಆವರಣದಲ್ಲಿರುವ ಉದ್ಯಾನ ಮುಳುಗಡೆಯಾಗಿರುವ ವಿಡಿಯೋ ವೈರಲ್ ಆಗಿದ್ದು, ಪ್ರವಾಸಿಗರ ಗಮನ ಸೆಳೆದಿದೆ.

ಆಗ್ರಾ ವೃತ್ತದ ಭಾರತೀಯ ಪುರಾತತ್ವ ಸರ್ವೇಕ್ಷಣೆ(ಎಎಸ್‌ಐ)ಯ ಹಿರಿಯ ಅಧಿಕಾರಿಯೊಬ್ಬರು, ಸೋರಿಕೆಯಿಂದಾಗಿ ಮುಖ್ಯ ಗುಮ್ಮಟಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ಹೇಳಿದ್ದಾರೆ.

ತಾಜ್‌ಮಹಲ್‌ನ ಮುಖ್ಯ ಗುಮ್ಮಟದಲ್ಲಿನ ಸೋರಿಕೆ ಕುರಿತು ಮಾತನಾಡಿದ ಆಗ್ರಾ ವೃತ್ತದ ಭಾರತೀಯ ಪುರಾತತ್ವ ಸರ್ವೇಕ್ಷಣೆಯ (ಎಎಸ್‌ಐ) ಅಧೀಕ್ಷಕ ರಾಜ್‌ಕುಮಾರ್ ಪಟೇಲ್ ಅವರು, “ಹೌದು, ತಾಜ್ ಮಹಲ್‌ನ ಮುಖ್ಯ ಗುಮ್ಮಟದಲ್ಲಿ ಸೋರಿಕೆಯಾಗಿರುವುದನ್ನು ನಾವು ನೋಡಿದ್ದೇವೆ. ನಾವು ಪರಿಶೀಲಿಸಿದಾಗ ಸೋರಿಕೆಯಿಂದಾಗಿ ಮುಖ್ಯ ಗುಮ್ಮಟಕ್ಕೆ ಯಾವುದೇ ಹಾನಿಯಾಗಿಲ್ಲ. ನಾವು ಡ್ರೋನ್ ಕ್ಯಾಮೆರಾ ಮೂಲಕ ಮುಖ್ಯ ಗುಮ್ಮಟವನ್ನು ಪರಿಶೀಲಿಸಿದ್ದೇವೆ ಎಂದು ತಿಳಿಸಿದರು.

ಗುರುವಾರ ಸಂಜೆ, 20 ಸೆಕೆಂಡ್‌ಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅದರಲ್ಲಿ ಸ್ಮಾರಕದ ಉದ್ಯಾನ ಮಳೆ ನೀರಿನಲ್ಲಿ ಮುಳುಗಿದೆ. ಇದು ಪ್ರವಾಸಿಗರ ಗಮನ ಸೆಳೆದಿದ್ದು, ಹೆಚ್ಚಿನ ಜನ ತಾಜ್ ಮಹಲ್ ಗೆ ಭೇಟಿ ನೀಡಿ, ವಿಡಿಯೋ ಮಾಡಿದರು.

ತಾಜ್ ಮಹಲ್ ಆಗ್ರಾ ಮತ್ತು ಇಡೀ ರಾಷ್ಟ್ರದ ಹೆಮ್ಮೆಯಾಗಿದೆ. ಇದು ನೂರಾರು ಸ್ಥಳೀಯರಿಗೆ ಮತ್ತು ಪ್ರವಾಸೋದ್ಯಮದಲ್ಲಿ ಕೆಲಸ ಮಾಡುವವರಿಗೆ ಉದ್ಯೋಗ ನೀಡಿ. ಈ "ಸ್ಮಾರಕದ ಬಗ್ಗೆ ಸರಿಯಾದ ಕಾಳಜಿ ವಹಿಸಬೇಕು" ಎಂದು ಸರ್ಕಾರದ ಅನುಮೋದಿತ ಪ್ರವಾಸಿ ಮಾರ್ಗದರ್ಶಿ ಮೋನಿಕಾ ಶರ್ಮಾ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಹಾರದ ಲಖಿಸರಾಯಿ ದೇವಾಲಯದ ಬಳಿ ಭೀಕರ ಕಾಲ್ತುಳಿತ: 7 ಭಕ್ತರ ಸಾವು, ಹಲವರಿಗೆ ಗಾಯ

ಬೆಂಗಳೂರಿನ ಕ್ಲಾರೆನ್ಸ್ ಶಾಲೆಯಲ್ಲಿ H1N1 ಫ್ಲೂ ಆತಂಕ: ಇಬ್ಬರಲ್ಲಿ ಸೋಂಕು ದೃಢ, 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೈರು, ಕಬಾಬ್ ಅಂಗಡಿಗಳ ತೆರವಿಗೆ ಆಗ್ರಹ!

'ನಾನು ನಲ್ಸಾರ್ ಆಹ್ವಾನವನ್ನೇ ಸ್ವೀಕರಿಸಿಲ್ಲ; ಅಲ್ಲಿಗೆ ಹೋಗುವ ಪ್ರಶ್ನೆಯೇ ಇಲ್ಲ': CJI ಸೂರ್ಯಕಾಂತ್ ಸ್ಪಷ್ಟನೆ

ಚಾಮರಾಜನಗರ ಶೂಟೌಟ್‌ ಕೇಸ್: ‘ಮೃತರು ರೈತರೇ ಹೊರತು ಬೇಟೆಗಾರರಲ್ಲ’; ಮೂವರು ತಮಿಳರ ಹತ್ಯೆಗೆ ಸಿಎಂ ವಿಜಯ್ ತೀವ್ರ ಖಂಡನೆ, ಉನ್ನತ ಮಟ್ಟದ ತನಿಖೆಗೆ ಆಗ್ರಹ..!

ಪರೀಕ್ಷೆ ಅಕ್ರಮ; ಜಾರ್ಖಂಡ್ ಸಿಎಂ ಸೊರೇನ್, ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಪ್ರತಿಕೃತಿ ದಹಿಸಿ JPSC-JSSC ಆಕಾಂಕ್ಷಿಗಳ ಪ್ರತಿಭಟನೆ