ಕೇಜ್ರಿವಾಲ್, ದೆಹಲಿ ಕಾಂಗ್ರೆಸ್ ಅಧ್ಯಕ್ಷ ದೇವೇಂದ್ರ ಯಾದವ್ 
ದೇಶ

ಕೇಜ್ರಿವಾಲ್ ರಾಜೀನಾಮೆ ನಿರ್ಧಾರ ಸ್ವಾಗತ, ಎರಡು ದಿನ ತಡವೇಕೆ: ದೆಹಲಿ ಕಾಂಗ್ರೆಸ್ ಪ್ರಶ್ನೆ!

ಕೇಜ್ರಿವಾಲ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಇನ್ನೂ ಎರಡು ದಿನ ಯಾಕೆ ಕಾಯುತ್ತಿದ್ದಾರೆ ಎಂಬುದು ನನಗೆ ಅರ್ಥವಾಗುತ್ತಿಲ್ಲ. ನೀವು ರಾಜೀನಾಮೆ ನೀಡುವುದಾದರೆ ಕೂಡಲೇ ರಾಜೀನಾಮೆ ನೀಡಿ.

ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ರಾಜೀನಾಮೆ ನಿರ್ಧಾರವನ್ನು ದೆಹಲಿ ಕಾಂಗ್ರೆಸ್ ಅಧ್ಯಕ್ಷ ದೇವೇಂದ್ರ ಯಾದವ್ ಭಾನುವಾರ ಸ್ವಾಗತಿಸಿದ್ದಾರೆ. ಆದರೆ ಎರಡು ದಿನಗಳ ವಿಳಂಬವನ್ನು ಪ್ರಶ್ನಿಸಿದ್ದಾರೆ.

ಈ ಕುರಿತು ಐಎಎನ್ ಎಸ್ ಸುದ್ದಿಸಂಸ್ಥೆಯೊಂದಿಗೆ ಪ್ರತಿಕ್ರಿಯಿಸಿದ ಯಾದವ್, ಕೇಜ್ರಿವಾಲ್ ಅವರ ನಿರ್ಧಾರವನ್ನು ಸ್ವಾಗತಿಸುತ್ತೇವೆ, ಸ್ವಲ್ಪ ತಡವಾದರೂ ಇದು ಒಳ್ಳೆಯ ಕ್ರಮ ಎಂದು ಹೇಳಿದರು.

ಕೇಜ್ರಿವಾಲ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಇನ್ನೂ ಎರಡು ದಿನ ಯಾಕೆ ಕಾಯುತ್ತಿದ್ದಾರೆ ಎಂಬುದು ನನಗೆ ಅರ್ಥವಾಗುತ್ತಿಲ್ಲ. ನೀವು ರಾಜೀನಾಮೆ ನೀಡುವುದಾದರೆ ಕೂಡಲೇ ರಾಜೀನಾಮೆ ನೀಡಿ. ಉತ್ತಮ ಆಡಳಿತ ನಮ್ಮ ಒತ್ತಾಯವಾಗಿದ್ದು, ಸರ್ಕಾರವನ್ನು ಜೈಲಿನಿಂದ ಓಡಿಸಲು ಸಾಧ್ಯವಿಲ್ಲ ಎಂದರು.

ಬದಲಾವಣೆಗೆ ಎಂದಿಗೂ ತಡಮಾಡಬಾರದು. ದೆಹಲಿ ಜನರು ಸಮಸ್ಯೆಗಳನ್ನು ಎದುರಿಸುತ್ತಿರುವಾಗ ಎರಡು, ನಾಲ್ಕು ಅಥವಾ ಐದು ತಿಂಗಳ ಹಿಂದೆಯೇ ಈ ನಿರ್ಧಾರವನ್ನು ತೆಗೆದುಕೊಂಡಿದ್ದರೆ ನಾನು ಹೆಚ್ಚು ಸಂತೋಷವಾಗಿರುತ್ತಿದ್ದೆ ಎಂದು ದೇವೇಂದ್ರ ಯಾದವ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT