ಪ್ರಶಾಂತ್ ಕಿಶೋರ್ 
ದೇಶ

Bihar Elections: ಅಧಿಕಾರಕ್ಕೆ ಬಂದ ಒಂದೇ ಗಂಟೆಯಲ್ಲಿ 'ಮದ್ಯ ನಿಷೇಧ' ವಾಪಸ್- Prashant Kishor

ಏಪ್ರಿಲ್ 1, 2016 ರಲ್ಲಿ ಬಿಹಾರದಲ್ಲಿ ಮದ್ಯಪಾನ ನಿಷೇಧ ಜಾರಿಯಾಗಿತ್ತು. ಖ್ಯಾತ ಸಾಮಾಜಿಕ ಹೋರಾಟಗಾರ ಜೈಪ್ರಕಾಶ್ ನಾರಾಯಣ್ ಅವರ ನೇತೃತ್ವದಲ್ಲಿ ನಡೆದ ಮದ್ಯಪಾನ ನಿಷೇಧ ಹೋರಾಟ ಭಾರಿ ಸುದ್ದಿಯಾಗಿತ್ತು.

ಪಾಟ್ನಾ: ತಮ್ಮ ಜನ ಸೂರಜ್ ಪಕ್ಷ ಅಧಿಕಾರಕ್ಕೆ ಬಂದ ಒಂದೇ ಗಂಟೆಯಲ್ಲಿ 'ಮದ್ಯ ನಿಷೇಧ' ನೀತಿಯನ್ನು ಅಂತ್ಯಗೊಳಿಸುವುದಾಗಿ ಪಕ್ಷದ ಅಧ್ಯಕ್ಷ ಪ್ರಶಾಂತ್ ಕಿಶೋರ್ ಘೋಷಿಸಿದ್ದಾರೆ.

ಮುಂಬರುವ ಅಕ್ಟೋಬರ್ ನಲ್ಲಿ ತಮ್ಮ ಜನ ಸೂರಜ್ ಪಕ್ಷಕ್ಕೆ ಅಧಿಕೃತವಾಗಿ ಚಾಲನೆ ನೀಡಲಿರುವ ಪ್ರಶಾಂತ್ ಕಿಶೋರ್ ಇದಕ್ಕೂ ಮೊದಲೇ ರಾಜ್ಯದಲ್ಲಿರುವ ಮದ್ಯ ನಿಷೇಧವನ್ನು ತೆರವುಗೊಳಿಸುವುದಾಗಿ ಘೋಷಣೆ ಮಾಡಿದ್ದು, ಪ್ರಶಾಂತ್ ಕಿಶೋರ್ ಅವರ ಈ ಘೋಷಣೆ ಇದೀಗ ಬಿಹಾರ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

ಪ್ರಶಾಂತ್ ಕಿಶೋರ್ ಅಕ್ಟೋಬರ್ 2 ರಂದು ಪಾಟ್ನಾದಲ್ಲಿ ಜನ ಸೂರಜ್ ಅವರ ಪಕ್ಷಕ್ಕೆ ಚಾಲನೆ ನೀಡಲಿದ್ದೇವೆ. ಇದಕ್ಕಾಗಿ ಪ್ರತ್ಯೇಕ ಸಿದ್ಧತೆ ಮಾಡಿಕೊಳ್ಳುವ ಅಗತ್ಯವಿಲ್ಲ. ಕಳೆದ ಎರಡು ವರ್ಷಗಳಿಂದ ತಯಾರಿ ನಡೆಸುತ್ತಿದ್ದೇವೆ. ಜನ ಸೂರಜ್ ಸರ್ಕಾರ ರಚನೆಯಾದರೆ ಒಂದು ಗಂಟೆಯೊಳಗೆ ಮದ್ಯ ನಿಷೇಧವನ್ನು ಕೊನೆಗೊಳಿಸುತ್ತೇವೆ ಎಂದು ಘೋಷಿಸಿದ್ದಾರೆ.

ಅಂತೆಯೇ ಇದೇ ವೇಳೆ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಕುರಿತು ವ್ಯಂಗ್ಯ ಮಾಡಿರುವ ಪ್ರಶಾಂತ್ ಕಿಶೋರ್, 'ಅವರು ಮನೆಯಿಂದ ಹೊರಗೆ ಬರಲಿ ಎಂದು ನಾನು ಅವರಿಗೆ ಶುಭ ಹಾರೈಸುತ್ತೇನೆ' ಎಂದು ಹೇಳಿದರು.

2016ರಲ್ಲಿ ಜಾರಿಯಾಗಿದ್ದ ಮದ್ಯಪಾನ ನಿಷೇಧ

ಏಪ್ರಿಲ್ 1, 2016 ರಲ್ಲಿ ಬಿಹಾರದಲ್ಲಿ ಮದ್ಯಪಾನ ನಿಷೇಧ ಜಾರಿಯಾಗಿತ್ತು. ಖ್ಯಾತ ಸಾಮಾಜಿಕ ಹೋರಾಟಗಾರ ಜೈಪ್ರಕಾಶ್ ನಾರಾಯಣ್ ಅವರ ನೇತೃತ್ವದಲ್ಲಿ ನಡೆದ ಮದ್ಯಪಾನ ನಿಷೇಧ ಹೋರಾಟ ಭಾರಿ ಸುದ್ದಿಯಾಗಿತ್ತು. ಸಮಾಜ ಸೇವಕ ಮತ್ತು ಖ್ಯಾತ ಗಾಂಧಿವಾದಿ ಮತ್ತು ಪರಿಸರವಾದಿ ಮನೋಹರ್ ಮಾನವ್ ಈ ಹೋರಾಟಕ್ಕೆ ಸಾಥ್ ನೀಡಿದ್ದರು.

ಬಿಹಾರದ ಎಲ್ಲಾ ಜಿಲ್ಲೆಗಳಲ್ಲಿ ಮಹಿಳೆಯರು, ಯುವಕರು ಮತ್ತು ಹಿರಿಯರಿಗೆ ಮದ್ಯವನ್ನು ನಿಲ್ಲಿಸುವ ಬಗ್ಗೆ ಜಾಗೃತಿ ಮೂಡಿಸಿದರು. ಬಳಿಕ ಎಚ್ಚೆತ್ತುಕೊಂಡಿದ್ದ ಅಂದಿನ ಸರ್ಕಾರ ಮದ್ಯಪಾನ ನಿಷೇಧ ಜಾರಿಗೆ ತಂದಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT