ಪಾರಾಲ ಮಹಾರಾಜ ಎಂಜಿನಿಯರಿಂಗ್ ಕಾಲೇಜು  
ದೇಶ

ಒಡಿಶಾ: ಹಾಸ್ಟೆಲ್ ನಲ್ಲಿ 'ಬೀಫ್ ಬೇಯಿಸಿದ' ಏಳು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಉಚ್ಛಾಟನೆ

ಪಾರಾಲ ಮಹಾರಾಜ ಎಂಜಿನಿಯರಿಂಗ್ ಕಾಲೇಜು ಅಧಿಕಾರಿಗಳು ಗುರುವಾರ ಆದೇಶ ಹೊರಡಿಸಿದ್ದು, ಎರಡು ಹಾಸ್ಟೆಲ್‌ಗಳ ಏಳು ವಿದ್ಯಾರ್ಥಿಗಳನ್ನು ನಿಷೇಧಿತ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಹೊರಗೆ

ಬರ್ಹಾಂಪುರ್: ಕಾಲೇಜು ಹಾಸ್ಟೆಲ್ ಆವರಣದಲ್ಲಿ ಗೋಮಾಂಸ( ಬೀಫ್ ) ಬೇಯಿಸಿದ ಆರೋಪದ ಮೇರೆಗೆ ಒಡಿಶಾದ ಬರ್ಹಾಂಪುರ ಜಿಲ್ಲೆಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಏಳು ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಿಂದ ಹೊರ ಹಾಕಲಾಗಿದೆ ಎಂದು ಸೋಮವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸಂಬಂಧ ಪಾರಾಲ ಮಹಾರಾಜ ಎಂಜಿನಿಯರಿಂಗ್ ಕಾಲೇಜು ಅಧಿಕಾರಿಗಳು ಗುರುವಾರ ಆದೇಶ ಹೊರಡಿಸಿದ್ದು, ಎರಡು ಹಾಸ್ಟೆಲ್‌ಗಳ ಏಳು ವಿದ್ಯಾರ್ಥಿಗಳನ್ನು ನಿಷೇಧಿತ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಹೊರಹಾಕಲಾಗಿದೆ ಎಂದು ತಿಳಿಸಿದ್ದಾರೆ. ಏಳು ವಿದ್ಯಾರ್ಥಿಗಳಲ್ಲಿ ಒಬ್ಬನಿಗೆ 2,000 ರೂಪಾಯಿ ದಂಡ ವಿಧಿಸಲಾಗಿದೆ. ಕಾಲೇಜು ಅಧಿಕಾರಿಗಳು ಈ ನಿರ್ಧಾರವನ್ನು ವಿದ್ಯಾರ್ಥಿಗಳ ಪೋಷಕರಿಗೆ ತಿಳಿಸಿರುವುದಾಗಿ ಅವರು ಹೇಳಿದರು.

ಬುಧವಾರ ವಿದ್ಯಾರ್ಥಿಗಳು ಹಾಸ್ಟೆಲ್ ಕೊಠಡಿಯಲ್ಲಿ ಗೋಮಾಂಸವನ್ನು ಬೇಯಿಸಿ ಸಂಸ್ಥೆಯ ನೀತಿ, ಸಂಹಿತೆಯನ್ನು ಉಲ್ಲಂಘಿಸಿದ್ದಾರೆ. ಘಟನೆಯ ಬಗ್ಗೆ ಕಾಲೇಜು ವಿದ್ಯಾರ್ಥಿಗಳ ಒಂದು ವಿಭಾಗವು ಸಂಸ್ಥೆಯ ಪ್ರಾಂಶುಪಾಲರ ಗಮನಕ್ಕೆ ತಂದಿದ್ದು, ವಿಚಾರಣೆ ಬಳಿಕ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಮಧ್ಯೆ ಹಿಂದೂ ಬಲಪಂಥೀಯ ಗುಂಪುಗಳು, ಬಜರಂಗದಳ ಮತ್ತು ವಿಎಚ್‌ಪಿ ಕಾರ್ಯಕರ್ತರು ವಿದ್ಯಾರ್ಥಿಗಳ ವಿರುದ್ಧ ಕಠಿಣ ಕ್ರಮ"ಕ್ಕೆ ಒತ್ತಾಯಿಸಿದ್ದಾರೆ. ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಅಹಿತಕರ ಘಟನೆ ನಡೆಯದಂತೆ ಕಾಲೇಜು ಆವರಣ ಮತ್ತು ಹಾಸ್ಟೆಲ್‌ಗಳ ಬಳಿ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT