ಇರಾನ್ ಸರ್ವೋಚ್ಛ ನಾಯಕ ಖಮೇನಿ online desk
ದೇಶ

"ನಿಮ್ಮ ಚರಿತ್ರೆಯನ್ನು ನೋಡಿಕೊಳ್ಳಿ": ಇರಾನ್ ಸರ್ವೋಚ್ಛ ನಾಯಕನಿಗೆ ಭಾರತ ಹೀಗ್ಯಾಕೆ ಹೇಳಿದ್ದು ಅಂದರೆ...

ಭಾರತದ ವಿದೇಶಾಂಗ ಸಚಿವಾಲಯ ಅಯತೊಲ್ಲಾ ಅಲಿ ಖಮೇನಿ ಹೇಳಿಕೆಗಳಿಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ಖಮೇನಿಗೆ ಬಂದಿರುವ ಮಾಹಿತಿ ತಪ್ಪು ಹಾಗೂ ಒಪ್ಪಲು ಸಾಧ್ಯವಿಲ್ಲದಂತಹದ್ದು ಎಂದು ಹೇಳಿದೆ.

ನವದೆಹಲಿ: ಮುಸ್ಲಿಮರ ಬಗ್ಗೆ ಮಾತನಾಡಿದ್ದ ಇರಾನ್ ನ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿಗೆ ಭಾರತ ಸರಿಯಾಗಿಯೇ ಬಿಸಿ ಮುಟ್ಟಿಸಿದೆ.

ಭಾರತದ ವಿದೇಶಾಂಗ ಸಚಿವಾಲಯ ಅಯತೊಲ್ಲಾ ಅಲಿ ಖಮೇನಿ ಹೇಳಿಕೆಗಳಿಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ಖಮೇನಿಗೆ ಬಂದಿರುವ ಮಾಹಿತಿ ತಪ್ಪು ಹಾಗೂ ಒಪ್ಪಲು ಸಾಧ್ಯವಿಲ್ಲದಂತಹದ್ದು ಎಂದು ಹೇಳಿದೆ.

ಭಾರತ, ಮ್ಯಾನ್ಮಾರ್, ಗಾಜಾ ಸೇರಿದಂತೆ ಹಲವೆಡೆ ಮುಸ್ಲಿಮರು ಎದುರಿಸುತ್ತಿರುವ ಪರಿಸ್ಥಿತಿಯ ಬಗ್ಗೆ ಮಾತನಾಡಿದ್ದ ಖಮೇನಿ, ನಿಜವಾದ ಇಸ್ಲಾಮಿಕ್ ಗುರುತಿಗೆ ಈ ಹೋರಾಟಗಳ ಅರಿವು ಅಗತ್ಯವಿದೆ ಎಂದು ಪ್ರತಿಪಾದಿಸಿದರು, ಮುಸ್ಲಿಂ ಸಮುದಾಯವು ಒಗ್ಗಟ್ಟಾಗಿ ನಿಲ್ಲುವಂತೆ ಒತ್ತಾಯಿಸಿದರು. ಮ್ಯಾನ್ಮಾರ್, ಗಾಜಾ, ಭಾರತ ಅಥವಾ ಇನ್ನಾವುದೇ ಸ್ಥಳದಲ್ಲಿ ಮುಸ್ಲಿಂ ಅನುಭವಿಸುತ್ತಿರುವ ನೋವನ್ನು ನಾವು ನಿರ್ಲಕ್ಷಿಸಿದರೆ ನಾವು ನಮ್ಮನ್ನು ಮುಸ್ಲಿಮರು ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಖಮೇನಿ ಬರೆದುಕೊಂಡಿದ್ದರು.

ತಕ್ಷಣವೇ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಭಾರತ, "ತಪ್ಪು ಮಾಹಿತಿ ಮತ್ತು ಸ್ವೀಕಾರಾರ್ಹವಲ್ಲ" ಎಂದು ಖಮೇನಿ ಹೇಳಿಕೆಯನ್ನು ಖಂಡಿಸಿದೆ. ಇತರರ ಮೇಲೆ ತೀರ್ಪು ನೀಡುವ ಮೊದಲು ರಾಷ್ಟ್ರಗಳು ತಮ್ಮದೇ ಚರಿತ್ರೆಯನ್ನು ನೋಡಿಕೊಳ್ಳಬೇಕೆಂದು ಎಂಇಎ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT