ಶಿವಸೇನಾ ಶಾಸಕ ಗಾಯಕ್ವಾಡ್, ರಾಹುಲ್ ಗಾಂಧಿ ಸಾಂದರ್ಭಿಕ ಚಿತ್ರ 
ದೇಶ

ರಾಹುಲ್ ಗಾಂಧಿ ನಾಲಿಗೆ ಕತ್ತರಿಸುವವರಿಗೆ 11 ಲಕ್ಷ ರೂ. ಬಹುಮಾನ: ಶಿವಸೇನೆ ಶಾಸಕ

ರಾಹುಲ್ ಗಾಂಧಿ ವಿದೇಶ ಪ್ರವಾಸದಲ್ಲಿದ್ದಾಗ ಭಾರತದಲ್ಲಿನ ಮೀಸಲಾತಿ ವ್ಯವಸ್ಥೆಯನ್ನು ರದ್ದುಗೊಳಿಸಲು ಬಯಸುವುದಾಗಿ ಹೇಳಿದ್ದರು.

ಮುಂಬೈ: ಮೀಸಲಾತಿ ರದ್ದುಪಡಿಸುವ ಕುರಿತು ಹೇಳಿಕೆ ನೀಡಿರುವ ಲೋಕಸಭಾ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ನಾಲಿಗೆಯನ್ನು ಕತ್ತರಿಸುವವರಿಗೆ 11 ಲಕ್ಷ ರೂಪಾಯಿ ನೀಡುವುದಾಗಿ ಶಿವಸೇನಾ ಶಾಸಕ ಸಂಜಯ್ ಗಾಯಕ್ವಾಡ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಈ ಮಧ್ಯೆ ಗಾಯಕ್ವಾಡ್ ಅವರ ಹೇಳಿಕೆಯನ್ನು ಬೆಂಬಲಿಸುವುದಿಲ್ಲ ಎಂದು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಶೇಖರ ಬಾವಂಕುಲೆ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದ ಸರ್ಕಾರದಲ್ಲಿ ಬಿಜೆಪಿಯೂ ಮೈತ್ರಿಪಕ್ಷವಾಗಿದೆ.

ರಾಹುಲ್ ಗಾಂಧಿ ವಿದೇಶ ಪ್ರವಾಸದಲ್ಲಿದ್ದಾಗ ಭಾರತದಲ್ಲಿನ ಮೀಸಲಾತಿ ವ್ಯವಸ್ಥೆಯನ್ನು ರದ್ದುಗೊಳಿಸಲು ಬಯಸುವುದಾಗಿ ಹೇಳಿದ್ದರು. ಇದು ಕಾಂಗ್ರೆಸ್‌ನ ನಿಜವಾದ ಮುಖವನ್ನು ಅನಾವರಣಗೊಳಿಸಿದೆ ಎಂದು ಗಾಯಕ್ವಾಡ್ ವಿಚಿತ್ರ ರೀತಿಯ ಬಹುಮಾನ ಘೋಷಿಸುವ ಮೊದಲು ಸುದ್ದಿಗಾರರಿಗೆ ತಿಳಿಸಿದರು.

ವಿದರ್ಭ ಪ್ರದೇಶದ ಬುಲ್ಧಾನ ವಿಧಾನಸಭಾ ಕ್ಷೇತ್ರದ ಶಾಸಕ ಗಾಯಕ್‌ವಾಡ್‌ಗೆ ವಿವಾದಗಳು ಹೊಸದೇನಲ್ಲ. ಕಳೆದ ತಿಂಗಳು ಪೊಲೀಸರು ಶಿವಸೇನೆ ಶಾಸಕರ ಕಾರನ್ನು ತೊಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ನಂತರ ಕಾರಿನಲ್ಲಿ ಪೊಲೀಸರು ವಾಂತಿ ಮಾಡಿಕೊಂಡ ನಂತರ ಸ್ವಯಂಪ್ರೇರಣೆಯಿಂದ ಸ್ವಚ್ಛಗೊಳಿಸಿದರು ಎಂದು ಗಾಯಕ್ವಾಡ್ ಸಮರ್ಥಿಸಿಕೊಂಡಿದ್ದರು.

1987 ರಲ್ಲಿ ಹುಲಿಯೊಂದನ್ನು ಬೇಟೆಯಾಡಿ ಅದರ ಹಲ್ಲನ್ನು ತನ್ನ ಕುತ್ತಿಗೆಗೆ ಹಾಕಿಕೊಂಡಿರುವುದಾಗಿ ಗಾಯಕ್ವಾಡ್ ಫೆಬ್ರವರಿಯಲ್ಲಿ ಹೇಳಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆ ಅದರ ಗುರುತು ಪತ್ತೆ ಹಚ್ಚಲು ಹುಲಿ ಹಲ್ಲನ್ನು ವಿಧಿ ವಿಜ್ಞಾನ ಪ್ರಯೋಗಾಲಕ್ಕೆ ಕಳುಹಿಸಿತ್ತು. ಮತ್ತು ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಗಾಯಕ್ವಾಡ್ ವಿರುದ್ಧ ಆರೋಪ ಹೊರಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT