ಅಮಿತ್ ಶಾ PTI
ದೇಶ

ದೇಶದಲ್ಲಿ ಅತಿ ಶೀಘ್ರದಲ್ಲಿ ಡಿಜಿಟಲ್ ಜನಗಣತಿ ನಡೆಯಲಿದೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಣೆ

ಭಾರತದಲ್ಲಿ 1881ರಿಂದ ಪ್ರತಿ 10 ವರ್ಷಗಳಿಗೊಮ್ಮೆ ಜನಗಣತಿಯನ್ನು ನಡೆಸಲಾಗುತ್ತದೆ. ಈ ದಶವಾರ್ಷಿಕ ಜನಗಣತಿಯ ಮೊದಲ ಹಂತವು ಏಪ್ರಿಲ್ 1, 2020ರಂದು ಪ್ರಾರಂಭವಾಗಬೇಕಿತ್ತು. ಆದರೆ ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಅದನ್ನು ಮುಂದೂಡಬೇಕಾಯಿತು ಎಂದರು.

ನವದೆಹಲಿ: ಜನಗಣತಿ ವಿಚಾರದಲ್ಲಿ ದೇಶದಲ್ಲಿ ಪ್ರತಿದಿನ ರಾಜಕೀಯ ನಡೆಯುತ್ತಿದೆ. ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾರತದಲ್ಲಿ ಜನಗಣತಿ ಶೀಘ್ರದಲ್ಲಿಯೇ ನಡೆಯಲಿದೆ ಎಂದು ಹೇಳಿದ್ದಾರೆ. ಆದರೆ, ಯಾವ ನಡೆಸಲಾಗುತ್ತದೆ ಎಂಬುದಕ್ಕೆ ಸ್ಪಷ್ಟನೆ ನೀಡಿಲ್ಲ.

ಇತ್ತೀಚೆಗೆ ದೇಶದಲ್ಲಿ ಜನಗಣತಿಗೆ ಸಿದ್ಧತೆ ನಡೆಯುತ್ತಿದೆ ಎಂಬ ವರದಿಗಳು ಬಂದಿದ್ದವು. ಜನಗಣತಿ ಕುರಿತು ಪ್ರಶ್ನೆಯನ್ನು ಕೇಳಿದಾಗ, ನಾವು ಅದನ್ನು ಶೀಘ್ರದಲ್ಲೇ ಘೋಷಿಸುತ್ತೇವೆ ಎಂದು ಶಾ ಹೇಳಿದರು. 2011ರಿಂದ ದೇಶದಲ್ಲಿ ಜನಗಣತಿ ನಡೆದಿಲ್ಲ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ಸರ್ಕಾರದ ಮೂರನೇ ಅವಧಿಯ 100 ದಿನಗಳನ್ನು ಪೂರೈಸಿದ ಕುರಿತು ಸುದ್ದಿಗೋಷ್ಠಿಯಲ್ಲಿ ಅಮಿತ್ ಶಾ ಅವರು ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಭಾಗವಹಿಸಿದರು. ಈ ವೇಳೆ ಅವರು ಜಾತಿ ಆಧಾರಿತ ಜನಗಣತಿಯ ಬಗ್ಗೆಯೂ ಮಾತನಾಡಿದರು. ಜನಗಣತಿಯನ್ನು ಘೋಷಿಸಿದಾಗ, ನಾವು ಎಲ್ಲಾ ಮಾಹಿತಿಯನ್ನು ಸಾರ್ವಜನಿಕಗೊಳಿಸುತ್ತೇವೆ' ಎಂದು ಅವರು ಹೇಳಿದರು.

ಭಾರತದಲ್ಲಿ 1881ರಿಂದ ಪ್ರತಿ 10 ವರ್ಷಗಳಿಗೊಮ್ಮೆ ಜನಗಣತಿಯನ್ನು ನಡೆಸಲಾಗುತ್ತದೆ. ಈ ದಶವಾರ್ಷಿಕ ಜನಗಣತಿಯ ಮೊದಲ ಹಂತವು ಏಪ್ರಿಲ್ 1, 2020ರಂದು ಪ್ರಾರಂಭವಾಗಬೇಕಿತ್ತು. ಆದರೆ ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಅದನ್ನು ಮುಂದೂಡಬೇಕಾಯಿತು ಎಂದರು.

ಜಾತಿ ಆಧಾರಿತ ಜನಗಣತಿ ನಡೆಸಬೇಕೆಂಬ ರಾಜಕೀಯ ಪಕ್ಷಗಳ ಆಗ್ರಹದ ನಡುವೆಯೇ ಶಾ ಈ ಹೇಳಿಕೆ ನೀಡಿದ್ದಾರೆ. ಹೊಸ ಮಾಹಿತಿಯ ಅನುಪಸ್ಥಿತಿಯಲ್ಲಿ, ಸರ್ಕಾರಿ ಏಜೆನ್ಸಿಗಳು ಇನ್ನೂ ನೀತಿಗಳನ್ನು ರೂಪಿಸುತ್ತಿವೆ. 2011ರ ಜನಗಣತಿಯ ಮಾಹಿತಿಯ ಆಧಾರದ ಮೇಲೆ ಸಬ್ಸಿಡಿಗಳನ್ನು ಹಂಚಿಕೆ ಮಾಡುತ್ತಿವೆ ಎಂದರು.

ಸಂಪೂರ್ಣ ಜನಗಣತಿ ಮತ್ತು ಎನ್‌ಪಿಆರ್ ಪ್ರಕ್ರಿಯೆಗೆ ಸರ್ಕಾರವು 12,000 ಕೋಟಿ ರೂಪಾಯಿಗಿಂತ ಹೆಚ್ಚು ಖರ್ಚು ಮಾಡುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದು ಮೊದಲ ಡಿಜಿಟಲ್ ಜನಗಣತಿಯಾಗಲಿದ್ದು, ಈ ಮೂಲಕ ನಾಗರಿಕರು ತಮ್ಮನ್ನು ತಾವು ಎಣಿಸುವ ಅವಕಾಶವನ್ನು ಪಡೆಯುತ್ತಾರೆ. ಇದಕ್ಕಾಗಿ ಜನಗಣತಿ ಪ್ರಾಧಿಕಾರವು ಸ್ವಯಂ ಗಣತಿ ಪೋರ್ಟಲ್ ಸಿದ್ಧಪಡಿಸಿದ್ದು, ಇನ್ನೂ ಬಿಡುಗಡೆ ಮಾಡಿಲ್ಲ. ಸ್ವಯಂ-ಎಣಿಕೆಯ ಸಮಯದಲ್ಲಿ ಆಧಾರ್ ಅಥವಾ ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ರಚಿಸಲಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Strait of Hormuz: 'ಹೌದು.. ನಮ್ಮ ಆಪ್ತ ರಾಷ್ಟ್ರ'... ಭಾರತದ ನೌಕೆಗಳಿಗೆ ಅನುಮತಿ ಕುರಿತು ಇರಾನ್ ರಾಯಭಾರಿ ಹೇಳಿಕೆ!

West Asia conflict: ಇರಾನ್ ಉದ್ವಿಗ್ನತೆ ನಡುವೆಯೂ Hormuz ಜಲಸಂಧಿಯಿಂದ ಸುರಕ್ಷಿತವಾಗಿ ಬಂದ ಭಾರತ ಧ್ವಜ ಹೊತ್ತ ಹಡಗು!

West Asia conflict: ಮಸ್ಕತ್‌ನಲ್ಲಿ ಡ್ರೋನ್ ದಾಳಿ, ಭಾರತ ಮೂಲದ ಇಬ್ಬರ ಸಾವು

Khamenei ಸತ್ತ... ಉತ್ತರಾಧಿಕಾರಿ ಕಾಲು ಕಟ್.. ಹೊಸ ಸರ್ವಾಧಿಕಾರಿ ಯಾರು? ಇದು ಇರಾನ್ ಗೇ ಗೊತ್ತಿಲ್ಲ!

'ನನ್ನ ಮೌನವನ್ನು ದೌರ್ಬಲ್ಯ ಎಂದು ಪರಿಗಣಿಸಬೇಡಿ'.. 'ಉತ್ತರಿಸದಿದ್ದ ಮೇಲೆ ಅಧಿವೇಶನ ಏಕೆ ಕರೆಯಬೇಕು': ಸ್ಪೀಕರ್ UT Khader ಕಿಡಿ

SCROLL FOR NEXT