ಮನೋಜ್ ಕುಮಾರ್ ವರ್ಮಾ 
ದೇಶ

ವೈದ್ಯರ ಮುಷ್ಕರಕ್ಕೆ ಮಣಿದ ಮಮತಾ: ಕೋಲ್ಕತ್ತಾ ಪೊಲೀಸ್ ಆಯುಕ್ತ, ಆರೋಗ್ಯ ಸೇವೆಗಳ ನಿರ್ದೇಶಕ ಎತ್ತಂಗಡಿ

ಪ್ರತಿಭಟನಾನಿರತ ಕಿರಿಯ ವೈದ್ಯರ ಬೇಡಿಕೆ ಮೇರೆಗೆ ಪಶ್ಚಿಮ ಬಂಗಾಳ ಸರ್ಕಾರ ಇಂದು ಕೋಲ್ಕತ್ತಾ ಪೊಲೀಸ್ ಕಮಿಷನರ್ ವಿನೀತ್ ಗೋಯಲ್ ಅವರನ್ನು ವರ್ಗಾವಣೆ ಮಾಡಿದೆ.

ಕೋಲ್ಕತ್ತಾ: ಕೋಲ್ಕತ್ತಾದ ಆರ್‌ ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಕಿರಿಯ ವೈದ್ಯರ ಪ್ರತಿಭಟನೆ ಮಣಿದ ಪಶ್ಚಿಮ ಬಂಗಾಳ ಸರ್ಕಾರ ಕೋಲ್ಕತ್ತಾ ಪೊಲೀಸ್ ಆಯುಕ್ತ ಮತ್ತು ಆರೋಗ್ಯ ಸೇವೆಗಳ ನಿರ್ದೇಶಕರನ್ನು ಮಂಗಳವಾರ ಎತ್ತಂಗಡಿ ಮಾಡಿದೆ. ಇದರೊಂದಿಗೆ ಸರ್ಕಾರದ ನಡುವೆ ಸೃಷ್ಟಿಯಾಗಿದ್ದ ಬಿಕ್ಕಟ್ಟು ಶಮನವಾಗಿದೆ.

ಪ್ರತಿಭಟನಾನಿರತ ಕಿರಿಯ ವೈದ್ಯರ ಬೇಡಿಕೆ ಮೇರೆಗೆ ಪಶ್ಚಿಮ ಬಂಗಾಳ ಸರ್ಕಾರ ಇಂದು ಕೋಲ್ಕತ್ತಾ ಪೊಲೀಸ್ ಕಮಿಷನರ್ ವಿನೀತ್ ಗೋಯಲ್ ಅವರನ್ನು ವರ್ಗಾವಣೆ ಮಾಡಿದ್ದು, ಅವರ ಸ್ಥಾನಕ್ಕೆ ಹಿರಿಯ ಐಪಿಎಸ್ ಅಧಿಕಾರಿ ಮನೋಜ್ ಕುಮಾರ್ ವರ್ಮಾ ಅವರನ್ನು ನೇಮಿಸಿದೆ.

ಆರ್‌ಜಿ ಕರ್ ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಿರ್ವಹಣೆಗೆ ಸಂಬಂಧಿಸಿದಂತೆ ತೀವ್ರ ಟೀಕೆಗೆ ಗುರಿಯಾಗಿದ್ದ ಗೋಯಲ್ ಅವರನ್ನು ಪಶ್ಚಿಮ ಬಂಗಾಳ ಪೊಲೀಸ್‌ನ ವಿಶೇಷ ಕಾರ್ಯಪಡೆ(ಎಸ್‌ಟಿಎಫ್) ಎಡಿಜಿ ಮತ್ತು ಐಜಿಪಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.

ಎಡಿಜಿ ಮತ್ತು ಐಜಿಪಿ(ಕಾನೂನು ಮತ್ತು ಸುವ್ಯವಸ್ಥೆ) ಆಗಿದ್ದ 1998 ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಮನೋಜ್ ಕುಮಾರ್ ವರ್ಮಾ ಅವರನ್ನು ಕೋಲ್ಕತ್ತಾ ನೂತನ ಪೊಲೀಸ್ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.

ಕಿರಿಯ ವೈದ್ಯರ ಮತ್ತೊಂದು ಬೇಡಿಕೆಯನ್ನು ಈಡೇರಿಸಿರುವ ಸರ್ಕಾರ, ವೈದ್ಯಕೀಯ ಶಿಕ್ಷಣದ ನಿರ್ದೇಶಕ(ಡಿಎಂಇ) ಡಾ.ಕೌಸ್ತವ್ ನಾಯಕ್ ಮತ್ತು ಆರೋಗ್ಯ ಸೇವೆಗಳ ನಿರ್ದೇಶಕ(ಡಿಎಚ್‌ಎಸ್) ಡಾ. ದೇಬಾಶಿಶ್ ಹಲ್ಡರ್ ಅವರನ್ನು ಸಹ ವರ್ಗಾವಣೆ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆಯ ಆದೇಶ ತಿಳಿಸಿದೆ.

ಡಾ. ಸ್ವಪನ್ ಸೊರೆನ್ ಅವರನ್ನು ಆರೋಗ್ಯ ಸೇವೆಗಳ ಹೊಸ ಪ್ರಭಾರಿ ನಿರ್ದೇಶಕರಾಗಿ ಮತ್ತು ವೈದ್ಯಕೀಯ ಶಿಕ್ಷಣದ ವಿಶೇಷ ಕರ್ತವ್ಯದ ಅಧಿಕಾರಿಯಾಗಿ ಡಾ ಸುಪರ್ಣಾ ದತ್ತಾ ಅವರನ್ನು ನೇಮಿಸಲಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.

ನಾಯಕ್ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆಯ ನಿರ್ದೇಶಕರನ್ನಾಗಿ ಮತ್ತು ಹಾಲ್ದರ್ ಅವರನ್ನು ಸ್ವಾಸ್ಥ್ಯ ಭವನದಲ್ಲಿ ಸಾರ್ವಜನಿಕ ಆರೋಗ್ಯದ ವಿಶೇಷ ಕರ್ತವ್ಯ ಅಧಿಕಾರಿಯಾಗಿ ನೇಮಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT