ಮನೋಜ್ ಕುಮಾರ್ ವರ್ಮಾ 
ದೇಶ

ವೈದ್ಯರ ಮುಷ್ಕರಕ್ಕೆ ಮಣಿದ ಮಮತಾ: ಕೋಲ್ಕತ್ತಾ ಪೊಲೀಸ್ ಆಯುಕ್ತ, ಆರೋಗ್ಯ ಸೇವೆಗಳ ನಿರ್ದೇಶಕ ಎತ್ತಂಗಡಿ

ಪ್ರತಿಭಟನಾನಿರತ ಕಿರಿಯ ವೈದ್ಯರ ಬೇಡಿಕೆ ಮೇರೆಗೆ ಪಶ್ಚಿಮ ಬಂಗಾಳ ಸರ್ಕಾರ ಇಂದು ಕೋಲ್ಕತ್ತಾ ಪೊಲೀಸ್ ಕಮಿಷನರ್ ವಿನೀತ್ ಗೋಯಲ್ ಅವರನ್ನು ವರ್ಗಾವಣೆ ಮಾಡಿದೆ.

ಕೋಲ್ಕತ್ತಾ: ಕೋಲ್ಕತ್ತಾದ ಆರ್‌ ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಕಿರಿಯ ವೈದ್ಯರ ಪ್ರತಿಭಟನೆ ಮಣಿದ ಪಶ್ಚಿಮ ಬಂಗಾಳ ಸರ್ಕಾರ ಕೋಲ್ಕತ್ತಾ ಪೊಲೀಸ್ ಆಯುಕ್ತ ಮತ್ತು ಆರೋಗ್ಯ ಸೇವೆಗಳ ನಿರ್ದೇಶಕರನ್ನು ಮಂಗಳವಾರ ಎತ್ತಂಗಡಿ ಮಾಡಿದೆ. ಇದರೊಂದಿಗೆ ಸರ್ಕಾರದ ನಡುವೆ ಸೃಷ್ಟಿಯಾಗಿದ್ದ ಬಿಕ್ಕಟ್ಟು ಶಮನವಾಗಿದೆ.

ಪ್ರತಿಭಟನಾನಿರತ ಕಿರಿಯ ವೈದ್ಯರ ಬೇಡಿಕೆ ಮೇರೆಗೆ ಪಶ್ಚಿಮ ಬಂಗಾಳ ಸರ್ಕಾರ ಇಂದು ಕೋಲ್ಕತ್ತಾ ಪೊಲೀಸ್ ಕಮಿಷನರ್ ವಿನೀತ್ ಗೋಯಲ್ ಅವರನ್ನು ವರ್ಗಾವಣೆ ಮಾಡಿದ್ದು, ಅವರ ಸ್ಥಾನಕ್ಕೆ ಹಿರಿಯ ಐಪಿಎಸ್ ಅಧಿಕಾರಿ ಮನೋಜ್ ಕುಮಾರ್ ವರ್ಮಾ ಅವರನ್ನು ನೇಮಿಸಿದೆ.

ಆರ್‌ಜಿ ಕರ್ ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಿರ್ವಹಣೆಗೆ ಸಂಬಂಧಿಸಿದಂತೆ ತೀವ್ರ ಟೀಕೆಗೆ ಗುರಿಯಾಗಿದ್ದ ಗೋಯಲ್ ಅವರನ್ನು ಪಶ್ಚಿಮ ಬಂಗಾಳ ಪೊಲೀಸ್‌ನ ವಿಶೇಷ ಕಾರ್ಯಪಡೆ(ಎಸ್‌ಟಿಎಫ್) ಎಡಿಜಿ ಮತ್ತು ಐಜಿಪಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.

ಎಡಿಜಿ ಮತ್ತು ಐಜಿಪಿ(ಕಾನೂನು ಮತ್ತು ಸುವ್ಯವಸ್ಥೆ) ಆಗಿದ್ದ 1998 ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಮನೋಜ್ ಕುಮಾರ್ ವರ್ಮಾ ಅವರನ್ನು ಕೋಲ್ಕತ್ತಾ ನೂತನ ಪೊಲೀಸ್ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.

ಕಿರಿಯ ವೈದ್ಯರ ಮತ್ತೊಂದು ಬೇಡಿಕೆಯನ್ನು ಈಡೇರಿಸಿರುವ ಸರ್ಕಾರ, ವೈದ್ಯಕೀಯ ಶಿಕ್ಷಣದ ನಿರ್ದೇಶಕ(ಡಿಎಂಇ) ಡಾ.ಕೌಸ್ತವ್ ನಾಯಕ್ ಮತ್ತು ಆರೋಗ್ಯ ಸೇವೆಗಳ ನಿರ್ದೇಶಕ(ಡಿಎಚ್‌ಎಸ್) ಡಾ. ದೇಬಾಶಿಶ್ ಹಲ್ಡರ್ ಅವರನ್ನು ಸಹ ವರ್ಗಾವಣೆ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆಯ ಆದೇಶ ತಿಳಿಸಿದೆ.

ಡಾ. ಸ್ವಪನ್ ಸೊರೆನ್ ಅವರನ್ನು ಆರೋಗ್ಯ ಸೇವೆಗಳ ಹೊಸ ಪ್ರಭಾರಿ ನಿರ್ದೇಶಕರಾಗಿ ಮತ್ತು ವೈದ್ಯಕೀಯ ಶಿಕ್ಷಣದ ವಿಶೇಷ ಕರ್ತವ್ಯದ ಅಧಿಕಾರಿಯಾಗಿ ಡಾ ಸುಪರ್ಣಾ ದತ್ತಾ ಅವರನ್ನು ನೇಮಿಸಲಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.

ನಾಯಕ್ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆಯ ನಿರ್ದೇಶಕರನ್ನಾಗಿ ಮತ್ತು ಹಾಲ್ದರ್ ಅವರನ್ನು ಸ್ವಾಸ್ಥ್ಯ ಭವನದಲ್ಲಿ ಸಾರ್ವಜನಿಕ ಆರೋಗ್ಯದ ವಿಶೇಷ ಕರ್ತವ್ಯ ಅಧಿಕಾರಿಯಾಗಿ ನೇಮಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT