ಶ್ರೀನಗರದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ online desk
ದೇಶ

ಇತಿಹಾಸದಲ್ಲೇ ಮೊದಲು: ಗಣೇಶ ವಿಸರ್ಜನೆ ಭಾಗವಾಗಿ ಲಾಲ್ ಚೌಕ್ ವರೆಗೆ ಅದ್ಧೂರಿ ಮೆರವಣಿಗೆ!

ಹರಿ ಸಿಂಗ್ ಹೈ ಸ್ಟ್ರೀಟ್ ನಿಂದ ಸಂಗೀತದ ಬ್ಯಾಂಡ್ ಗಳೊಂದಿಗೆ ಮೆರವಣಿಗೆ ಲಾಲ್ ಚೌಕ್ ನಲ್ಲಿರುವ ಐತಿಹಾಸಿಕ ಕ್ಲಾಕ್ ಟವರ್ ಗೆ ತಲುಪಿತು.

ಶ್ರೀನಗರ: ಶ್ರೀನಗರದಲ್ಲಿ ಇದೇ ಮೊದಲ ಬಾರಿಗೆ ಗಣೇಶ ವಿಸರ್ಜನೆಯ ಭಾಗವಾಗಿ ಗಣಪತಿ ಪ್ರತಿಮೆಯ ಮೆರವಣಿಗೆ ಅದ್ಧೂರಿಯಿಂದ ನಡೆದಿದೆ.

ಹರಿ ಸಿಂಗ್ ಹೈ ಸ್ಟ್ರೀಟ್ ನಿಂದ ಸಂಗೀತದ ಬ್ಯಾಂಡ್ ಗಳೊಂದಿಗೆ ಮೆರವಣಿಗೆ ಲಾಲ್ ಚೌಕ್ ನಲ್ಲಿರುವ ಐತಿಹಾಸಿಕ ಕ್ಲಾಕ್ ಟವರ್ ಗೆ ತಲುಪಿತು.

ಭಕ್ತಾದಿಗಳು ನಂತರ ಹನುಮಾನ್ ಮಂದಿರದ ಬಳಿ ಝೇಲಂ ನದಿಯಲ್ಲಿ ಗಣಪತಿ ವಿಸರ್ಜನೆ ಮಾಡಿದರು. ಬಣ್ಣಬಣ್ಣದ ಬಟ್ಟೆಗಳನ್ನು ಧರಿಸಿದ್ದ ಭಕ್ತರು ಮೆರವಣಿಗೆಯಲ್ಲಿ ಡೋಲು, ತಾಳಗಳ ಬಾರಿಸುತ್ತಾ ಕುಣಿದು ಕುಪ್ಪಳಿಸುತ್ತಿದ್ದದ್ದು ಎಲ್ಲರ ಗಮನ ಸೆಳೆಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೋಲ್ಕತ್ತಾ ನಿವಾಸಿ ಮಾಣಿಕ್ ಚತುರ್ದಾಸ್ ಮಾತನಾಡಿ, ಇಲ್ಲಿ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳದ ಜನರು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು, ನಾವು ಇಲ್ಲಿ ವ್ಯಾಪಾರ ಮಾಡುತ್ತೇವೆ. ಇಂದು ನಮ್ಮ ಮರಾಠಿ ಸಹೋದರರು ಗಣಪತಿ ನಿಮಜ್ಜನ ಮೆರವಣಿಗೆಯನ್ನು ಆಯೋಜಿಸಿದ್ದಾರೆ. ಈ ಮೆರವಣಿಗೆಯಲ್ಲಿ ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳದಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು" ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT