ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್- ಅಖಿಲೇಶ್ ಯಾದವ್ online desk
ದೇಶ

ಬುಲ್ಡೋಜರ್ ನ್ನೇ ಗುರುತಾಗಿಸಿಕೊಂಡವರಿಗೆ ಸುಪ್ರೀಂ ಕೋರ್ಟ್ ಆದೇಶದಿಂದ ಆಘಾತ: ಅಖಿಲೇಶ್ ಯಾದವ್

ಬುಲ್ಡೋಜರ್ ನ್ನು ಗುರುತಾಗಿಸಿಕೊಂಡವರಿಗೆ ಸುಪ್ರೀಂ ಕೋರ್ಟ್ ಆದೇಶದಿಂದ ಗುರುತಿನ ಬಿಕ್ಕಟ್ಟು ಎದುರಾಗಿದೆ ಎಂದು ಅಖಿಲೇಶ್ ಯಾದವ್ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

ಲಖನೌ: ಬುಲ್ಡೋಜರ್ ಮೂಲಕ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಸುತ್ತಿರುವುದಕ್ಕೆ ಅ.1 ವರೆಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ಬ್ರೇಕ್ ಹಾಕಿರುವುದರ ಬಗ್ಗೆ ಅಖಿಲೇಶ್ ಯಾದವ್ ಪ್ರತಿಕ್ರಿಯೆ ನೀಡಿದ್ದಾರೆ.

ಬುಲ್ಡೋಜರ್ ನ್ನು ಗುರುತಾಗಿಸಿಕೊಂಡವರಿಗೆ ಸುಪ್ರೀಂ ಕೋರ್ಟ್ ಆದೇಶದಿಂದ ಗುರುತಿನ ಬಿಕ್ಕಟ್ಟು ಎದುರಾಗಿದೆ ಎಂದು ಅಖಿಲೇಶ್ ಯಾದವ್ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

"ಬುಲ್ಡೋಜಿಂಗ್" ಚಿಂತನೆಯನ್ನು ಕೆಡವಲಾಗಿದೆ ಎಂದು ಹೇಳಿರುವ ಅಖಿಲೇಶ್ ಯಾದವ್, ಬುಲ್ಡೋಜರ್ ಹೆಸರನ್ನು ಬದಲಾಯಿಸಬಹುದೇ? ಎಂದು ಕೇಳಿದ್ದಾರೆ.

ಬುಲ್ಡೋಜರ್ ಕ್ರಮದ ಕುರಿತಂತೆ ಸುಪ್ರೀಂ ಕೋರ್ಟ್ ರಾಜ್ಯಗಳಿಗೆ ಖಡಕ್ ಸೂಚನೆ ನೀಡಿದೆ. ಬುಲ್ಡೋಜರ್ ನ್ಯಾಯವನ್ನು ವೈಭವೀಕರಿಸುವುದನ್ನು ನಿಲ್ಲಿಸಬೇಕು. ಅಲ್ಲದೆ ಕಾನೂನು ಪ್ರಕ್ರಿಯೆಯಂತೆ ಮಾತ್ರ ಅತಿಕ್ರಮಣ ತೆಗೆಯಬೇಕು ಎಂದು ಆದೇಶಿಸಿದೆ.

ಆದೇಶದ ಬಗ್ಗೆ ಪ್ರತಿಕ್ರಿಯಿಸಿದ ಯಾದವ್, ಎಕ್ಸ್‌ ಪೋಸ್ಟ್‌ನಲ್ಲಿ, ಆದಿತ್ಯನಾಥ್ ಅವರ ಹೆಸರನ್ನು ಉಲ್ಲೇಖಿಸದೆಯೇ ವಾಗ್ದಾಳಿ ನಡೆಸಿದ್ದಾರೆ ಮತ್ತು "ನ್ಯಾಯದ ಸುಪ್ರೀಂ ಆದೇಶವು ಬುಲ್ಡೋಜರ್ ನ್ನು ಮಾತ್ರವಲ್ಲದೆ ಬುಲ್ಡೋಜರ್ ಅನ್ನು ದುರುಪಯೋಗಪಡಿಸಿಕೊಂಡವರ ವಿನಾಶಕಾರಿ ರಾಜಕೀಯವನ್ನೂ ಬದಿಗೊತ್ತಿದೆ" ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT