ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಧಾನಿ ಮೋದಿ 
ದೇಶ

'ಹದ್ದುಬಸ್ತಿನಲ್ಲಿಡಿ': ರಾಹುಲ್ ಗಾಂಧಿ ಕುರಿತಂತೆ ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಪತ್ರ!

ಪ್ರಧಾನಿ ನರೇಂದ್ರ ಮೋದಿಗೆ ಸುದೀರ್ಘ ಪತ್ರ ಬರೆದಿರುವ ಮಲ್ಲಿಕಾರ್ಜುನ ಖರ್ಗೆ, ಎನ್ ಡಿಎ ಮಿತ್ರಕೂಟದ ನಾಯಕರ ಹೇಳಿಕೆಗಳು "ಅತ್ಯಂತ ಆಕ್ಷೇಪಾರ್ಹ" ಮತ್ತು ಹಿಂಸಾತ್ಮಕವಾಗಿವೆ. ನಿಮ್ಮ ನಾಯಕರನ್ನು ಶಿಸ್ತುಬದ್ಧಗೊಳಿಸಿ. ಇಂತಹ ಹೇಳಿಕೆಗಳನ್ನು ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.

ನವದೆಹಲಿ: ರಾಹುಲ್ ಗಾಂಧಿ ಅವರನ್ನು ಗುರಿಯಾಗಿಸಿಕೊಂಡು ಆಡಳಿತಾರೂಢ ಎನ್ ಡಿಎ ಮೈತ್ರಿಕೂಟದ ನಾಯಕರು ನೀಡುತ್ತಿರುವ ಹೇಳಿಕೆಗಳು "ಅತ್ಯಂತ ಆಕ್ಷೇಪಾರ್ಹ" ಮತ್ತು ಹಿಂಸಾತ್ಮಕವಾಗಿವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಗೆ ಸುದೀರ್ಘ ಪತ್ರ ಬರೆದಿರುವ ಮಲ್ಲಿಕಾರ್ಜುನ ಖರ್ಗೆ, ಎನ್ ಡಿಎ ಮಿತ್ರಕೂಟದ ನಾಯಕರ ಹೇಳಿಕೆಗಳು "ಅತ್ಯಂತ ಆಕ್ಷೇಪಾರ್ಹ" ಮತ್ತು ಹಿಂಸಾತ್ಮಕವಾಗಿವೆ. ನಿಮ್ಮ ನಾಯಕರನ್ನು ಶಿಸ್ತುಬದ್ಧಗೊಳಿಸಿ.

ಇಂತಹ ಹೇಳಿಕೆಗಳನ್ನು ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು, ಇದರಿಂದ ಭಾರತದ ರಾಜಕೀಯ ಅಧೋಗತಿಗೆ ಹೋಗುವುದನ್ನು ತಡೆಯಬಹುದು ಮತ್ತು ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

"ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ನೇರವಾಗಿ ಸಂಬಂಧಿಸಿದ ವಿಷಯದ ಬಗ್ಗೆ ನಾನು ನಿಮ್ಮ ಗಮನವನ್ನು ಸೆಳೆಯಲು ಬಯಸುತ್ತೇನೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ವಿರುದ್ಧ ಅತ್ಯಂತ ಆಕ್ಷೇಪಾರ್ಹ, ಹಿಂಸಾತ್ಮಕ ಮತ್ತು ಅಸಭ್ಯ ಹೇಳಿಕೆಗಳ ಸರಣಿಯನ್ನೇ ಮಾಡಲಾಗುತ್ತಿದೆ ಎಂಬುದನ್ನು ನೀವು ತಿಳಿದಿರಬೇಕು.

ಭಾರತೀಯ ಜನತಾ ಪಕ್ಷದ ನಾಯಕರು ಮತ್ತು ನಿಮ್ಮ ಮಿತ್ರಪಕ್ಷಗಳ ನಾಯಕರು ಬಳಸುವ ಹಿಂಸಾತ್ಮಕ ಭಾಷೆ ಭವಿಷ್ಯಕ್ಕೆ ಹಾನಿಕಾರಕವಾಗಿದೆ ಎಂದು ನಾನು ದುಃಖದಿಂದ ಹೇಳಬೇಕಾಗಿದೆ. ಕೇಂದ್ರ ಸರ್ಕಾರದ ಸಚಿವರು, ಬಿಜೆಪಿಯ ಸಚಿವರೊಬ್ಬರು ಲೋಕಸಭೆಯ ವಿರೋಧ ಪಕ್ಷದ ನಾಯಕನನ್ನು 'ನಂಬರ್ ಒನ್ ಭಯೋತ್ಪಾದಕ' ಎಂದು ಕರೆದಿದ್ದಾರೆ ಎಂದು ರೈಲ್ವೆ ಖಾತೆ ಸಚಿವ ರವನೀತ್ ಸಿಂಗ್ ಬಿಟ್ಟು ಮತ್ತು ಉತ್ತರ ಪ್ರದೇಶ ಸಚಿವ ರಘುರಾಜ್ ಸಿಂಗ್ ಅವರ ಹೇಳಿಕೆಗಳನ್ನು ಖರ್ಗೆ ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ.

ಅಲ್ಲದೆ ‘ಮಹಾರಾಷ್ಟ್ರದಲ್ಲಿ ನಿಮ್ಮ ಸರ್ಕಾರದೊಂದಿಗೆ ನಂಟು ಹೊಂದಿರುವ ಪಕ್ಷದ ಶಾಸಕರೊಬ್ಬರು ‘ಪ್ರತಿಪಕ್ಷದ ನಾಯಕನ ನಾಲಿಗೆಯನ್ನು ಕತ್ತರಿಸಿ ತಂದು ಕೊಡುವ’ ವ್ಯಕ್ತಿಗೆ 11 ಲಕ್ಷ ರೂಪಾಯಿ ಬಹುಮಾನ ಘೋಷಿಸುತ್ತಿದ್ದಾರೆ. ಬಿಜೆಪಿ ಮುಖಂಡ ಹಾಗೂ ಮಾಜಿ ಶಾಸಕ ದೆಹಲಿಯಲ್ಲಿ ಆತನ ಅಜ್ಜಿಗಾದ ಸ್ಥಿತಿಯೇ ಈತನಿಗೂ ಬರುತ್ತದೆ ಎಂದು ಬೆದರಿಕೆ ಹಾಕುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

'ಭಾರತೀಯ ಸಂಸ್ಕೃತಿಯು ಅಹಿಂಸೆ, ಸೌಹಾರ್ದತೆ ಮತ್ತು ಪ್ರೀತಿಗೆ ಪ್ರಪಂಚದಾದ್ಯಂತ ಹೆಸರುವಾಸಿಯಾಗಿದೆ. ಸಂಸದೀಯ ರಂಗದಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ನಡುವೆ ಗೌರವಯುತ ಭಿನ್ನಾಭಿಪ್ರಾಯಗಳ ಸುದೀರ್ಘ ಇತಿಹಾಸವಿದೆ. ಇದು ಭಾರತದ ಪ್ರಜಾಪ್ರಭುತ್ವದ ಘನತೆಯನ್ನು ಹೆಚ್ಚಿಸುವ ಕೆಲಸ ಮಾಡಿದೆ. ಆದರೆ ಇಂತಹ ದ್ವೇಷ ಪ್ರಚೋದಕ ಶಕ್ತಿಗಳಿಂದಾಗಿ ರಾಷ್ಟ್ರಪಿತ ಮಹಾತ್ಮ ಗಾಂಧಿ, ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿ ಅವರು ತಮ್ಮ ಪ್ರಾಣವನ್ನೇ ತ್ಯಾಗ ಮಾಡಬೇಕಾಯಿತು. ಆಡಳಿತ ಪಕ್ಷದ ಈ ರಾಜಕೀಯ ನಡವಳಿಕೆ ಪ್ರಜಾಸತ್ತಾತ್ಮಕ ಇತಿಹಾಸದಲ್ಲಿ ಅಸಭ್ಯತೆಗೆ ಉದಾಹರಣೆಯಾಗಿದೆ.

ದಯವಿಟ್ಟು ನಿಮ್ಮ ನಾಯಕರ ಮೇಲೆ ಶಿಸ್ತು ಮತ್ತು ಕ್ರಮವನ್ನು ಹೇರಬೇಕೆಂದು ನಾನು ವಿನಂತಿಸುತ್ತೇನೆ ಮತ್ತು ನಿರೀಕ್ಷಿಸುತ್ತೇನೆ. ಸರಿಯಾಗಿ ವರ್ತಿಸುವಂತೆ ಅವರಿಗೆ ಸೂಚಿಸಿ. ಇಂತಹ ಹೇಳಿಕೆಗಳಿಗೆ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕು ಇದರಿಂದ ಭಾರತದ ರಾಜಕೀಯ ಅಧೋಗತಿಗೆ ಹೋಗುವುದನ್ನು ತಡೆಯಬಹುದು. ಯಾವುದೇ ಅಹಿತಕರ ಘಟನೆಗಳೂ ನಡೆಯುವುದಿಲ್ಲ. ಈ ನಾಯಕರು ಹಿಂಸಾತ್ಮಕ ಹೇಳಿಕೆಗಳನ್ನು ನೀಡುವುದನ್ನು ತಡೆಯಲು ನೀವು ಅಗತ್ಯವಾದ ಕ್ರಮವನ್ನು ತೆಗೆದುಕೊಳ್ಳುತ್ತೀರಿ ಎಂದು ನಾನು ನಂಬುತ್ತೇನೆ" ಎಂದು ಖರ್ಗೆ ಪತ್ರದಲ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT