ಚಂದ್ರಯಾನ 3 ಮಿಷನ್ 
ದೇಶ

ಹೊಸ ಮೂನ್ ಮಿಷನ್ ಚಂದ್ರಯಾನ-4 ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ಚಂದ್ರಯಾನ-4 ಮಿಷನ್ ಭಾರತೀಯ ಗಗನಯಾತ್ರಿಗಳನ್ನು ಚಂದ್ರನ ಮೇಲೆ ಇಳಿಸಲು(2040 ರ ವೇಳೆಗೆ ಯೋಜಿಸಲಾಗಿದೆ) ಮತ್ತು ಸುರಕ್ಷಿತವಾಗಿ ಭೂಮಿಗೆ ಕರೆತರಲು ಮೂಲಭೂತ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುತ್ತದೆ.

ನವದೆಹಲಿ: ಭಾರತೀಯ ಗಗನಯಾತ್ರಿಗಳನ್ನು ಚಂದ್ರನ ಮೇಲೆ ಇಳಿಸಿ, ಮತ್ತೆ ಅವರನ್ನು ಸುರಕ್ಷಿತವಾಗಿ ಭೂಮಿಗೆ ಕರೆತರಲು ಅಗತ್ಯವಾದ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಲು ಮತ್ತು ಪ್ರದರ್ಶಿಸಲು ಮೂನ್ ಮಿಷನ್ "ಚಂದ್ರಯಾನ-4"ಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

ಚಂದ್ರಯಾನ-4 ಮಿಷನ್ ಭಾರತೀಯ ಗಗನಯಾತ್ರಿಗಳನ್ನು ಚಂದ್ರನ ಮೇಲೆ ಇಳಿಸಲು(2040 ರ ವೇಳೆಗೆ ಯೋಜಿಸಲಾಗಿದೆ) ಮತ್ತು ಸುರಕ್ಷಿತವಾಗಿ ಭೂಮಿಗೆ ಕರೆತರಲು ಮೂಲಭೂತ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುತ್ತದೆ ಎಂದು ಪ್ರಕಟಣೆಯೊಂದು ತಿಳಿಸಿದೆ.

"ಡಾಕಿಂಗ್ / ಅನ್‌ಡಾಕಿಂಗ್, ಲ್ಯಾಂಡಿಂಗ್ ಸೇರಿದಂತೆ ಭೂಮಿಗೆ ಸುರಕ್ಷಿತವಾಗಿ ಮರಳಲು ಮತ್ತು ಚಂದ್ರನ ಮಾದರಿ ಸಂಗ್ರಹಣೆ ಮತ್ತು ವಿಶ್ಲೇಷಣೆಯನ್ನು ಸಾಧಿಸಲು ಅಗತ್ಯವಿರುವ ಪ್ರಮುಖ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಲಾಗುವುದು" ಎಂದು ಅದು ಹೇಳಿದೆ.

ತಂತ್ರಜ್ಞಾನ ಪ್ರದರ್ಶನ ಮಿಷನ್ "ಚಂದ್ರಯಾನ-4" ಗೆ ಒಟ್ಟು 2,104.06 ಕೋಟಿ ರೂಪಾಯಿ ಅವಶ್ಯಕತೆ ಎಂದು ಪ್ರಕಟಣೆ ತಿಳಿಸಿದೆ.

ಚಂದ್ರಯಾನ- 3 ಯೋಜನೆಯ ಐತಿಹಾಸಿಕ ಯಶಸ್ಸಿನ ಸ್ಫೂರ್ತಿಯೊಂದಿಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ, ಮುಂದಿನ ಚಂದ್ರಯಾನ - 4 ಯೋಜನೆಗೆ ಸಜ್ಜಾಗಿದ್ದು, ಚಂದ್ರಯಾನ -4 ಯೋಜನೆಯಡಿ ನೌಕೆಯನ್ನು ಚಂದ್ರನ ಅಂಗಳದಲ್ಲಿ ಇಳಿಸುವುದಷ್ಟೇ ಅಲ್ಲದೇ, ಅಲ್ಲಿಂದ ಕಲ್ಲು ಮತ್ತು ಮಣ್ಣಿನ ಮಾದರಿಗಳನ್ನು ಭೂಮಿಗೆ ತರುವ ಉದ್ದೇಶ ಹೊಂದಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್