ಬಿಜೆಪಿ ಪ್ರಣಾಳಿಕೆ ಬಿಡುಗಡೆ 
ದೇಶ

ಹರಿಯಾಣ ವಿಧಾನಸಭೆ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ; ಮಹಿಳೆಯರಿಗೆ ತಿಂಗಳಿಗೆ 2,100 ರೂ. ಸೇರಿ ಹಲವು ಭರವಸೆ

ಇಂದು ರೋಹ್ತಕ್‌ನಲ್ಲಿ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಮತ್ತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜಗತ್ ಪ್ರಕಾಶ್ ನಡ್ಡಾ ಅವರು, ಪಕ್ಷವು ಯಾವಾಗಲೂ ನೀಡಿದ ಭರವಸೆಗಳನ್ನು ಈಡೇರಿಸಿದೆ ಎಂದರು.

ಚಂಡೀಗಢ: ಹರಿಯಾಣ ವಿಧಾನಸಭಾ ಚುನಾವಣೆಗೆ ಆಡಳಿತರೂಢ ಬಿಜೆಪಿ 20 ಭರವಸೆಗಳನ್ನು ಒಳಗೊಂಡ 'ಸಂಕಲ್ಪ ಪತ್ರ' ಎಂಬ ಪ್ರಣಾಳಿಕೆಯನ್ನು ಗುರುವಾರ ಬಿಡುಗಡೆ ಮಾಡಿದೆ.

ಇಂದು ರೋಹ್ತಕ್‌ನಲ್ಲಿ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಮತ್ತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜಗತ್ ಪ್ರಕಾಶ್ ನಡ್ಡಾ ಅವರು, ಪಕ್ಷವು ಯಾವಾಗಲೂ ನೀಡಿದ ಭರವಸೆಗಳನ್ನು ಈಡೇರಿಸಿದೆ ಮತ್ತು ಚುನಾವಣಾ ಸಮಯದಲ್ಲಿ ಭರವಸೆ ನೀಡದಿದ್ದನ್ನು ಸಹ ಸಾಧಿಸಿದೆ ಎಂದು ಹೇಳಿದರು

ರಾಜ್ಯದಲ್ಲಿ ಎರಡು ಲಕ್ಷ ಸರ್ಕಾರಿ ಉದ್ಯೋಗಗಳನ್ನು ಖಾತರಿಪಡಿಸುವ ರಾಷ್ಟ್ರೀಯ ಅಪ್ರೆಂಟಿಸ್‌ಶಿಪ್ ಉತ್ತೇಜನಾ ಯೋಜನೆಯ ಅನುಷ್ಠಾನ ಮತ್ತು ಮಾಸಿಕ ಸ್ಟೈಫಂಡ್, ಲಾಡೋ ಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ತಿಂಗಳಿಗೆ 2,100 ರೂ. ಮತ್ತು ಹರ್ ಘರ್ ಗೃಹಿಣಿ ಯೋಜನೆಯಡಿ 500 ರೂ. ಗ್ಯಾಸ್ ಸಿಲಿಂಡರ್ ನೀಡುವುದು ಸೇರಿದಂತೆ 20 ಭರವಸೆಗಳನ್ನು ಬಿಜೆಪಿ ನೀಡಿದೆ.

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ರಾಜ್ಯದ OBC ಮತ್ತು SC ಸಮುದಾಯಗಳ ವಿದ್ಯಾರ್ಥಿಗಳಿಗೆ ದೇಶದಾದ್ಯಂತ ಯಾವುದೇ ಸರ್ಕಾರಿ ವೈದ್ಯಕೀಯ ಅಥವಾ ಎಂಜಿನಿಯರಿಂಗ್ ಕಾಲೇಜಿನಲ್ಲಿ ಅಧ್ಯಯನ ಮಾಡಲು ವಿದ್ಯಾರ್ಥಿವೇತನ ನೀಡುವುದಾಗಿ ಕೇಸರಿ ಪಕ್ಷ ಭರವಸೆ ನೀಡಿದೆ.

ಬಾಲಕಿಯರ ಕಾಲೇಜು ವಿದ್ಯಾರ್ಥಿನಿಯರಿಗೆ ಅವಲ್ ಬಾಲಿಕಾ ಯೋಜನೆಯಡಿ ಸ್ಕೂಟರ್ ನೀಡಲಾಗುವುದು. IMT ಖಾರ್ಖೋಡಾ ಮಾದರಿಯಲ್ಲಿ 10 ಕೈಗಾರಿಕಾ ನಗರಗಳ ನಿರ್ಮಾಣ ಮತ್ತು ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಐದು ಲಕ್ಷ

ಮನೆಗಳನ್ನು ನಿರ್ಮಾಣ ಮಾಡುವುದಾಗಿ ಬಿಜೆಪಿ ಭರವಸೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT