ಖರ್ಗೆ, ಜೆಪಿ ನಡ್ಡಾ ಸಾಂದರ್ಭಿಕ ಚಿತ್ರ 
ದೇಶ

ರಾಹುಲ್ ನಾಯಕತ್ವದ ಕಾಂಗ್ರೆಸ್ 'ಕಾಪಿ ಪೇಸ್ಟ್' ಪಕ್ಷ: ಖರ್ಗೆಗೆ ಜೆಪಿ ನಡ್ಡಾ ತಿರುಗೇಟು!

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಸಮರ್ಥಿಸಿಕೊಳ್ಳುವ ಖರ್ಗೆ ಅವರ ಪ್ರಯತ್ನವನ್ನು ನಡ್ಡಾ ಟೀಕಿಸಿದ್ದಾರೆ. ಇದು " ರಾಜಕೀಯವಾಗಿ ವಿಫಲವಾಗಿರುವ ರಾಹುಲ್ ಗಾಂಧಿ ಅವರಿಗೆ ಹೊಳಪು ನೀಡುವ ಪ್ರಯತ್ನ ಎಂದು ಕರೆದಿದ್ದಾರೆ.

ನವೆದಹಲಿ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ನಾಯಕತ್ವದ ಕಾಂಗ್ರೆಸ್ ಪಕ್ಷ ಈಗ "ಕಾಪಿ- ಪೇಸ್ಟ್''ಪಕ್ಷವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಗುರುವಾರ ಹೇಳುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತಿರುಗೇಟು ನೀಡಿದ್ದಾರೆ.

ರಾಹುಲ್ ಗಾಂಧಿ ಅವರನ್ನು ಗುರಿಯಾಗಿಸಿಕೊಂಡು ಆಡಳಿತಾರೂಢ ಎನ್ ಡಿಎ ಮೈತ್ರಿಕೂಟದ ನಾಯಕರು ನೀಡುತ್ತಿರುವ ಹೇಳಿಕೆಗಳು "ಅತ್ಯಂತ ಆಕ್ಷೇಪಾರ್ಹ" ಮತ್ತು ಹಿಂಸಾತ್ಮಕವಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿಗೆ ಅವರಿಗೆ ಬರೆದಿರುವ ಪತ್ರಕ್ಕೆ ಪ್ರತಿಕ್ರಿಯೆಯಾಗಿ ಖರ್ಗೆ ಅವರಿಗೆ ಜೆ. ಪಿ. ನಡ್ಡಾ ಬರೆದಿರುವ ಪತ್ರದಲ್ಲಿ ಈ ರೀತಿ ಹೇಳಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಸಮರ್ಥಿಸಿಕೊಳ್ಳುವ ಖರ್ಗೆ ಅವರ ಪ್ರಯತ್ನವನ್ನು ನಡ್ಡಾ ಟೀಕಿಸಿದ್ದಾರೆ. ಇದು " ರಾಜಕೀಯವಾಗಿ ವಿಫಲವಾಗಿರುವ ರಾಹುಲ್ ಗಾಂಧಿ ಅವರಿಗೆ ಹೊಳಪು ನೀಡುವ ಪ್ರಯತ್ನ ಎಂದು ಕರೆದಿದ್ದಾರೆ. ಪ್ರಧಾನ ಮಂತ್ರಿ ಮತ್ತು ಹಿಂದುಳಿದ ಸಮುದಾಯವನ್ನು ಅಪಮಾನಿಸಿರುವ ರಾಹುಲ್ ಚರಿತ್ರೆಯನ್ನು ಪತ್ರದಲ್ಲಿ ನೆನಪಿಸಿದ್ದಾರೆ.

ಪ್ರಧಾನಿಯನ್ನು "ಕಳ್ಳ ಮತ್ತಿತರ ಅನುಚಿತ ಭಾಷೆಗಳನ್ನು ಬಳಸುವುದು ಸೇರಿದಂತೆ ಗಾಂಧಿಯವರ ವಿವಾದಾತ್ಮಕ ಹೇಳಿಕೆಗಳನ್ನು ಉಲ್ಲೇಖಿಸಿರುವ ಜೆಪಿ ನಡ್ಡಾ, ಯಾವ ಒತ್ತಡದಿಂದ ರಾಹುಲ್ ಗಾಂಧಿಯನ್ನು ಸಮರ್ಥಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೀರಿ ಎಂದು ಖರ್ಗೆ ಅವರನ್ನು ಪ್ರಶ್ನಿಸಿದ್ದಾರೆ. ಮೋದಿಯನ್ನು ಸಾವಿನ ವ್ಯಾಪಾರಿ" ಎಂದು ಕರೆದಿದ್ದ ಸೋನಿಯಾ ಗಾಂಧಿ ಸೇರಿದಂತೆ ಇತರ ಕಾಂಗ್ರೆಸ್ ನಾಯಕರು ಮಾಡಿದ ಹಿಂದಿನ ಟೀಕೆಗಳನ್ನೂ ಅವರು ಪ್ರಸ್ತಾಪಿಸಿದ್ದಾರೆ.

ಕಾಂಗ್ರೆಸ್ ಇಂತಹ ಹೇಳಿಕೆಗಳನ್ನು ವೈಭವೀಕರಿಸುತ್ತಿದೆ ಎಂದು ಟೀಕಿಸಿದ ನಡ್ಡಾ, ಕಾಂಗ್ರೆಸ್ ರಾಜಕೀಯ ಶುದ್ಧತೆಯನ್ನು ಏಕೆ ಮರೆತಿದೆ?" ಅದು ರಾಜಕೀಯ ಘನತೆ ಎತ್ತಿ ಹಿಡಿಯುವುದಾಗಿ ಹೇಳಿಕೊಂಡು ರಾಜಕೀಯ ಗುಣಮಟ್ಟವನ್ನು ಕಡೆಗಣಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಕಾಂಗ್ರೆಸ್ ಈಗ ರಾಹುಲ್ ಗಾಂಧಿಯವರ ನಾಯಕತ್ವದಲ್ಲಿ "ಕಾಪಿ- ಪೇಸ್ಟ್ ಪಕ್ಷವಾಗಿದೆ. ಅವರ ಒತ್ತಡದಿಂದ ಪಕ್ಷ ಇದೀಗ ದುಷ್ಟ ಮಾರ್ಗಗಳನ್ನು ಅಳವಡಿಸಿಕೊಂಡಿದೆ. ಕಳೆದ ಒಂದು ದಶಕದಲ್ಲಿ ಕಾಂಗ್ರೆಸ್ ನಾಯಕರು ಪ್ರಧಾನಿ ಮೋದಿಯವರನ್ನು 110 ಬಾರಿ ಅವಮಾನಿಸಿದ್ದಾರೆ ಎಂದು ಆರೋಪಿಸಿರುವ ಜೆ ಪಿ ನಡ್ಡಾ, ಕಾಂಗ್ರೆಸ್ ನಾಯಕರು ಬಳಸಿದ್ದಾರೆ ಎನ್ನಲಾದ ಅವಹೇಳನಕಾರಿ ಪದಗಳನ್ನು ಪಟ್ಟಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT