ಉಗ್ರ ಗುರ್ಪತ್ವಂತ್ ಸಿಂಗ್ ಪನ್ನುನ್  online desk
ದೇಶ

ಅನಪೇಕ್ಷಿತ ಮತ್ತು ಆಧಾರರಹಿತ: ಭಾರತ ಸರ್ಕಾರದ ವಿರುದ್ಧ ಪನ್ನುನ್ ಕೇಸ್ ಗೆ MEA ಪ್ರತಿಕ್ರಿಯೆ

ಈಗ ಪ್ರಕರಣ ದಾಖಲಾಗಿರುವುದರಿಂದ ಮೂಲ ಪರಿಸ್ಥಿತಿಯ ಬಗ್ಗೆ ಭಾರತದ ದೃಷ್ಟಿಕೋನವನ್ನು ಬದಲಾಯಿಸುವುದಿಲ್ಲ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಸ್ಪಷ್ಟಪಡಿಸಿದ್ದಾರೆ.

ನವದೆಹಲಿ: ತಮ್ಮನ್ನು ಹತ್ಯೆ ಮಾಡಲು ಯತ್ನಿಸಲಾಗುತ್ತಿದೆ ಎಂದು ಆರೋಪಿಸಿ ಅಮೇರಿಕಾದಲ್ಲಿ ಭಾರತ ಸರ್ಕಾರದ ವಿರುದ್ಧ ಖಲಿಸ್ತಾನಿ ಉಗ್ರ ಗುರ್ಪತ್ವಂತ್ ಸಿಂಗ್ ಪನ್ನುನ್ ದಾಖಲಿಸಿರುವ ಪ್ರಕರಣದ ಬಗ್ಗೆ ಭಾರತದ ವಿದೇಶಾಂಗ ಇಲಾಖೆ ಪ್ರತಿಕ್ರಿಯೆ ನೀಡಿದೆ.

ಪನ್ನುನ್ ಆರೋಪಗಳನ್ನು ಅನಗತ್ಯ ಮತ್ತು ಆಧಾರರಹಿತ ಆರೋಪಗಳು ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.

ಈಗ ಪ್ರಕರಣ ದಾಖಲಾಗಿರುವುದರಿಂದ ಮೂಲ ಪರಿಸ್ಥಿತಿಯ ಬಗ್ಗೆ ಭಾರತದ ದೃಷ್ಟಿಕೋನವನ್ನು ಬದಲಾಯಿಸುವುದಿಲ್ಲ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಸ್ಪಷ್ಟಪಡಿಸಿದ್ದಾರೆ.

"ನಾವು ಮೊದಲೇ ಹೇಳಿದಂತೆ, ಇವು ಸಂಪೂರ್ಣವಾಗಿ ಅನಗತ್ಯ ಮತ್ತು ಆಧಾರರಹಿತ ಆರೋಪಗಳಾಗಿವೆ. ಈಗ ಈ ನಿರ್ದಿಷ್ಟ ಪ್ರಕರಣವನ್ನು ದಾಖಲಿಸಲಾಗಿದೆ. ಇದು ಈಗಾಗಲೇ ಇರುವ ಪರಿಸ್ಥಿತಿಯ ಬಗ್ಗೆ ನಮ್ಮ ಅಭಿಪ್ರಾಯಗಳನ್ನು ಬದಲಿಸುವುದಿಲ್ಲ. ಈ ನಿರ್ದಿಷ್ಟ ಪ್ರಕರಣದ ಹಿಂದಿನ ವ್ಯಕ್ತಿಯ ಬಗ್ಗೆ ಗಮನ ಹರಿಸುವಂತೆ ನಿಮ್ಮನ್ನು ಕೇಳುತ್ತೇನೆ, ನಮಗೆಲ್ಲರಿಗೂ ಅವರ ಪೂರ್ವಾಪರಗಳು ಚೆನ್ನಾಗಿ ತಿಳಿದಿವೆ,”ಎಂದು ವಿದೇಶಾಂಗ ಕಾರ್ಯದರ್ಶಿಗಳು, ಪ್ರಧಾನಿ ನರೇಂದ್ರ ಮೋದಿ ಅವರ ಅಮೇರಿಕಾ ಭೇಟಿಯ ಮೊದಲು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಪನ್ನುನ್ ಭಾರತದಿಂದ ಭಯೋತ್ಪಾದಕನೆಂದು ಘೋಷಿಸಲ್ಪಟ್ಟಿದ್ದು, ಅಮೇರಿಕನ್ ಮತ್ತು ಕೆನಡಾದ ಪೌರತ್ವವನ್ನು ಹೊಂದಿದ್ದಾರೆ. ಪನ್ನುನ್ ಎಂಬ ವ್ಯಕ್ತಿ ಪ್ರತಿನಿಧಿಸುವ ಸಂಸ್ಥೆಯು ಕಾನೂನುಬಾಹಿರ ಸಂಸ್ಥೆಯಾಗಿದೆ, 1967 ರ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯಿದೆಯಡಿಯಲ್ಲಿ ಅದನ್ನು ಘೋಷಿಸಲಾಗಿದೆ ಮತ್ತು ದೇಶವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಕಾರಣದಿಂದಾಗಿ ಪನ್ನುನ್ ಪ್ರತಿನಿಧಿಸುವ ಸಂಸ್ಥೆಯನ್ನು ಕಾನೂನು ಬಾಹಿರ ಸಂಸ್ಥೆ ಎಂದು ಘೋಷಣೆ ಮಾಡಲಾಗಿದೆ ಎಂಬ ಅಂಶವನ್ನು ನಾನು ಒತ್ತಿಹೇಳುತ್ತೇನೆ. ಮತ್ತು ಭಾರತದ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಅಡ್ಡಿಪಡಿಸುವ ಗುರಿಯನ್ನು ಹೊಂದಿರುವ ವಿಧ್ವಂಸಕ ಚಟುವಟಿಕೆಗಳು ಈ ಸಂಸ್ಥೆಯಿಂದ ನಡೆಯುತ್ತಿದೆ ಎಂದು "ಹತ್ಯೆ'ಯತ್ನದ ಕುರಿತು ಪನ್ನುನ್ ಯುಎಸ್‌ನಲ್ಲಿ ಭಾರತೀಯ ಸರ್ಕಾರದ ವಿರುದ್ಧ ಮೊಕದ್ದಮೆ ಹೂಡುವುದರ ಕುರಿತು ಮಿಸ್ರಿ ಹೇಳಿದರು.

ನವೆಂಬರ್‌ನಲ್ಲಿ, ಯುಎಸ್ ನ್ಯಾಯಾಂಗ ಇಲಾಖೆ ಪನ್ನುನ್ ಹತ್ಯೆಗೆ ವಿಫಲವಾದ ಸಂಚಿನಲ್ಲಿ ಭಾಗಿಯಾಗಿದ್ದಕ್ಕಾಗಿ ಭಾರತೀಯ ಪ್ರಜೆಯ ವಿರುದ್ಧ ದೋಷಾರೋಪಣೆಯನ್ನು ಬಹಿರಂಗಪಡಿಸಿದೆ.

ಪ್ರಾಸಿಕ್ಯೂಟರ್‌ಗಳ ಪ್ರಕಾರ ಪನ್ನುನ್ ಹತ್ಯೆಯನ್ನು ನಡೆಸಲು ಓರ್ವ ವ್ಯಕ್ತಿಯನ್ನು ನೇಮಿಸಿಕೊಳ್ಳಲು ನಿಖಿಲ್ ಗುಪ್ತಾ ಎಂಬ ಭಾರತೀಯನನ್ನು ಭಾರತೀಯ ಅಧಿಕಾರಿಯೊಬ್ಬರು ನಿಯೋಜಿಸಿದ್ದರು, ಈ ಹತ್ಯೆಯ ಯತ್ನವನ್ನು ಅಮೇರಿಕಾ ಅಧಿಕಾರಿಗಳು ವಿಫಲಗೊಳಿಸಿದ್ದಾರೆ ಎಂದು ನ್ಯಾಯಾಂಗ ಇಲಾಖೆ ಹೇಳಿಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT